ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಇಂದು 3 ಸಾವಿರದ ಗಡಿ ದಾಟಿದೆ. ನಿನ್ನೆಗೆ ಹೋಲಿಕೆ ಮಾಡಿದರೆ, ಇಂದು ಏರಿಕೆ ಕಂಡಿದೆ.
ಇಂದು 3,377 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 8,35,773ಕ್ಕೆ ಏರಿಕೆ ಕಂಡಿದೆ.
ರಾಜ್ಯದಲ್ಲಿ ವೈರಸ್ ನಿಂದಾಗಿ ಕಳೆದ 24 ಗಂಟೆಗಳಲ್ಲಿ 34 ಜನ ಕೊರೊನಾಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 11,281ಕ್ಕೆ ಏರಿಕೆ ಕಂಡಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಅಲ್ಲದೇ, ಇಂದು 8,045 ಜನ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈ ಮೂಲಕ ಗುಣಮುಖರಾದವರ ಸಂಖ್ಯೆ 7,88,780ಕ್ಕೆ ಏರಿಕೆ ಕಂಡಿದೆ. 35,693 ಜನ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಬೆಂಗಳೂರು ನಗರವೊಂದರಲ್ಲಿಯೇ ಅತೀ ಹೆಚ್ಚು ಅಂದರೆ 1,953 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 3,43,507ಕ್ಕೆ ಏರಿಕೆ ಕಂಡಿದೆ. ಲ್ಲದೇ, ಇಂದು ನಗರದಲ್ಲಿ 16 ಜನ ಸಾವನ್ನಪ್ಪಿದ್ದಾರೆ.