ದಾವಣಗೆರೆ : ಕೊರೊನಾದಿಂದಾಗಿ ಇಡೀ ವಿಶ್ವವೇ ನಲುಗುತ್ತಿದೆ. ಹೀಗಾಗಿ ಮಾಸ್ಕ್ ಪ್ರತಿಯೊಬ್ಬರ ಸಂಗಾತಿಯಂತಾಗಿದೆ. ಮಾಸ್ಕ್ ಧರಿಸುವಂತೆ ಪ್ರಧಾನಿ ಮೋದಿ ಕೂಡ ದೇಶದ ಜನರಿಗೆ ಕರೆ ನೀಡಿದ್ದಾರೆ. ಈಗ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜಿಲ್ಲೆಯ ಕುಟುಂವೊಂದು ಖಾದಿಯ ಮಾಸ್ಕ್ ಕಳುಹಿಸಿದೆ. ಅದಕ್ಕಾಗಿ ಮೋದಿ ಅವರಿಂದ ಪ್ರಶಂಸನೀಯ ಪತ್ರ ಕೂಡ ಬಂದಿದೆ.

ಇಲ್ಲಿಯ ಕುವೆಂಪು ನಗರದ ಸಾಮಾಜಿಕ ಕಾರ್ಯಕರ್ತ ಕೆ.ಪಿ ವಿವೇಕಾನಂದ ಅವರ ಮನೆಗೆ ಪ್ರಧಾನಿ ಕಚೇರಿಯಿಂದ ಈ ಪ್ರಶಂಸನೀಯ ಪತ್ರ ಬಂದಿದೆ. 

ಬಿಸಾಡುವ ಮಾಸ್ಕ್ ಗಿಂತ ಮರುಬಳಕೆ ಮಾಡುವ ಹಾಗೂ ಸುರಕ್ಷಿತ ಮಾಸ್ಕ್ ನೀಡುವ ಉದ್ದೇಶದಿಂದ ಕೆ.ಪಿ. ವಿವೇಕಾನಂದ ಅವರು, ಅಪ್ಪಟ ಕಾಟನ್ ಬಟ್ಟೆಯಿಂದ ಮಾಸ್ಕ್ ತಯಾರಿಸಿ ಪ್ರಧಾನಿ ಅವರಿಗೆ ಅರ್ಪಿಸಿದ್ದಾರೆ. ಇದರಿಂದ ವಿವೇಕಾನಂದ ಅವರ ಕುಟುಂಬಸ್ಥರು ಹಾಗೂ ಸ್ನೇಹಿತರು ಎಲ್ಲರೂ ಸೇರಿ ದಾವಣಗೆರೆ ಹೆಸರು ರಾಷ್ಟ್ರಮಟ್ಟದಲ್ಲಿ ಗುರುತಿಸುವಂತೆ ಮಾಡಿದ್ದಾರೆ.

ಮಾಸ್ಕ್ ಗೆ ಕಾಟನ್ ಬಟ್ಟೆ ಹಾಗೂ ಕ್ಯಾನ್ವಾಸ್ ಬಳಸಿದ್ದರಿಂದ ಮಾಸ್ಕ್ ಸ್ಟಿಫ್ ಆಗಿತ್ತು. ನೋಡಲು ಕೂಡ ಅಂದವಾಗಿದೆ. ಆರಂಭದಲ್ಲಿ ದಾವಣಗೆರೆಗೆ ಮಾತ್ರ ಸೀಮಿತಗೊಳಿಸಿ ಮಾಸ್ಕ್ ತಯಾರಿಸಿದ್ದರು. ರಂಜಿತ್ ಸಿಂಗ್ ಅವ ಸೊಸೆ ಕವಿತಾದೇವಿ ಹಾಗೂ ವಿವೇಕಾನಂದ ಅವರ ಮಗಳು ಕಾವ್ಯಾ ಹೆಸರಿನಲ್ಲಿ ಪ್ರಧಾನಿ ಅವರಿಗೆ ಇಂಡಿಯನ್ ಪೋಸ್ಟ್ ನ ಸ್ಪೀಡ್ ಪೋಸ್ಟ್ ಮೂಲಕ ಪ್ರಧಾನಿ ಕಚೇರಿಗೆ ಕೇಸರಿ, ಬಿಳಿ, ಹಸಿರು ಮೂರು ಬಣ್ಣದ ಪ್ರತ್ಯೇಕ ಮೂರು ಮಾಸ್ಕ್ ಗಳನ್ನು ಕಳುಹಿಸಿದ್ದರು.

ಅಲ್ಲದೇ, ಇದನ್ನು ಕೆಲವು ದಿನಗಳ ಕಾಲ ಯಾವುದೇ ಉತ್ತರ ಬರಲಿಲ್ಲ. ಆದರೆ, ಕೆಲವು ದಿನಗಳ ನಂತರ ಮೋದಿ ಅವರು ಈ ಮಾಸ್ಕ್ ಗಳನ್ನು ಧರಿಸಿದ್ದರು. ಆ ನಂತರ ಪ್ರಧಾನಿ ಕಚೇರಿಯಿಂದ ಇವರ ಕುಟುಂಬಕ್ಕೆ ಪ್ರಶಂಸನೀಯ ಪತ್ರ ಬಂದಿದೆ. ಇದನ್ನು ನೋಡಿದ ವಿವೇಕಾನಂದ ಅವರ ಕುಟುಂಬಸ್ಥರು ಸಂತಸ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *

You May Also Like

ಸಮಸ್ಯೆಗಳ ಕುರಿತು ಪ್ರತ್ಯೇಕ ಸಾರಿಗೆ ಇಲಾಖೆಯ ಸಹಾಯವಾಣಿ : ಲಕ್ಷ್ಮಣ ಸವದಿ

ಬೆಂಗಳೂರು: ಕೋವಿಡ್ ತಡೆಯುವ ಉದ್ದೇಶದಿಂದ ಸಾರಿಗೆ ಸೇವೆ, ಆಂಬ್ಯುಲೆನ್ಸ್ ಸೇವೆ ಮತ್ತು ಚಾಲಕರಿಗೆ ಸರಕಾರ ಘೋಷಿಸಿರುವ ಪರಿಹಾರ ಇತ್ಯಾದಿಗಳ ಕುರಿತಂತೆ ಯಾವುದೇ ಸಮಸ್ಯೆಗಳಿಗೆ ಸ್ಪಂದಿಸಲು ಸಾರಿಗೆ ಇಲಾಖೆ ಪ್ರತ್ಯೇಕ ಸಹಾಯವಾಣಿಯನ್ನು ಆರಂಭಿಸಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.

ಅವಿಕಾ ಜೊತೆ ರೊಮ್ಯಾನ್ಸ್ ಮಾಡಲಿರುವ ಆದಿ

ಯುವ ನಟ ಆದಿ ಸಾಯಿಕುಮಾರ್ ಅವರು ಮುಂಬರುವ ದೊಡ್ಡ ಬಜೆಟ್ ಚಿತ್ರ ‘ಅಮರನ್’ ಚಿತ್ರಕ್ಕಾಗಿ ಸಜ್ಜಾಗಿದ್ದಾರೆ.

ಗದಗ ಜಿಲ್ಲೆಯಲ್ಲಿ ಗ್ರಾಮೀಣ ಭಾಗದಲ್ಲೂ ಕೊರೋನಾ ಭೀತಿ..!

ಗದಗ ಜಿಲ್ಲೆಯಲ್ಲಿ ಗ್ರಾಮೀಣ ಭಾಗದಲ್ಲೂ ಕೊರೋನಾ ಭೀತಿ..! ಗದಗ: ಪಕ್ಕದ ಬಾಗಲಕೋಟೆ ಜಿಲ್ಲೆಯಿಂದ ಗದಗ ಜಿಲ್ಲೆಯ…

ರೋಣ ಎಪಿಎಮ್‌ಸಿ ಅಧ್ಯಕ್ಷರಾಗಿ ರಾಜಣ್ಣ,ಉಪಾಧ್ಯಕ್ಷರಾಗಿ ಶಿವಾನಂದ ಆಯ್ಕೆ

ಕೃಷಿ ಉತ್ಪನ್ನ ಮಾರುಕಟ್ಟೆ(ಕೇಂದ್ರ ಕಚೇರಿ ಹೊಳೆಆಲೂರ) ಸಮಿತಿಯ ಕೊನೆಯ ಅವಧಿಗೆ ನೂತನ ಅಧ್ಯಕ್ಷರಾಗಿ ರೋಣ ರೈತ ಕ್ಷೇತ್ರದ ಸದಸ್ಯ ಅಂದಾನಪ್ಪ ಉರ್ಫ ರಾಜಣ್ಣ ಹೂಲಿ,ಉಪಾಧ್ಯಕ್ಷರಾಗಿ ಹೊಳೆಆಲೂರ ಕ್ಷೇತ್ರದ ಸದಸ್ಯ ಶಿವಾನಂದ ಅರಹುಣಸಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.