ದಾವಣಗೆರೆ : ಕೊರೊನಾದಿಂದಾಗಿ ಇಡೀ ವಿಶ್ವವೇ ನಲುಗುತ್ತಿದೆ. ಹೀಗಾಗಿ ಮಾಸ್ಕ್ ಪ್ರತಿಯೊಬ್ಬರ ಸಂಗಾತಿಯಂತಾಗಿದೆ. ಮಾಸ್ಕ್ ಧರಿಸುವಂತೆ ಪ್ರಧಾನಿ ಮೋದಿ ಕೂಡ ದೇಶದ ಜನರಿಗೆ ಕರೆ ನೀಡಿದ್ದಾರೆ. ಈಗ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜಿಲ್ಲೆಯ ಕುಟುಂವೊಂದು ಖಾದಿಯ ಮಾಸ್ಕ್ ಕಳುಹಿಸಿದೆ. ಅದಕ್ಕಾಗಿ ಮೋದಿ ಅವರಿಂದ ಪ್ರಶಂಸನೀಯ ಪತ್ರ ಕೂಡ ಬಂದಿದೆ.

ಇಲ್ಲಿಯ ಕುವೆಂಪು ನಗರದ ಸಾಮಾಜಿಕ ಕಾರ್ಯಕರ್ತ ಕೆ.ಪಿ ವಿವೇಕಾನಂದ ಅವರ ಮನೆಗೆ ಪ್ರಧಾನಿ ಕಚೇರಿಯಿಂದ ಈ ಪ್ರಶಂಸನೀಯ ಪತ್ರ ಬಂದಿದೆ. 

ಬಿಸಾಡುವ ಮಾಸ್ಕ್ ಗಿಂತ ಮರುಬಳಕೆ ಮಾಡುವ ಹಾಗೂ ಸುರಕ್ಷಿತ ಮಾಸ್ಕ್ ನೀಡುವ ಉದ್ದೇಶದಿಂದ ಕೆ.ಪಿ. ವಿವೇಕಾನಂದ ಅವರು, ಅಪ್ಪಟ ಕಾಟನ್ ಬಟ್ಟೆಯಿಂದ ಮಾಸ್ಕ್ ತಯಾರಿಸಿ ಪ್ರಧಾನಿ ಅವರಿಗೆ ಅರ್ಪಿಸಿದ್ದಾರೆ. ಇದರಿಂದ ವಿವೇಕಾನಂದ ಅವರ ಕುಟುಂಬಸ್ಥರು ಹಾಗೂ ಸ್ನೇಹಿತರು ಎಲ್ಲರೂ ಸೇರಿ ದಾವಣಗೆರೆ ಹೆಸರು ರಾಷ್ಟ್ರಮಟ್ಟದಲ್ಲಿ ಗುರುತಿಸುವಂತೆ ಮಾಡಿದ್ದಾರೆ.

ಮಾಸ್ಕ್ ಗೆ ಕಾಟನ್ ಬಟ್ಟೆ ಹಾಗೂ ಕ್ಯಾನ್ವಾಸ್ ಬಳಸಿದ್ದರಿಂದ ಮಾಸ್ಕ್ ಸ್ಟಿಫ್ ಆಗಿತ್ತು. ನೋಡಲು ಕೂಡ ಅಂದವಾಗಿದೆ. ಆರಂಭದಲ್ಲಿ ದಾವಣಗೆರೆಗೆ ಮಾತ್ರ ಸೀಮಿತಗೊಳಿಸಿ ಮಾಸ್ಕ್ ತಯಾರಿಸಿದ್ದರು. ರಂಜಿತ್ ಸಿಂಗ್ ಅವ ಸೊಸೆ ಕವಿತಾದೇವಿ ಹಾಗೂ ವಿವೇಕಾನಂದ ಅವರ ಮಗಳು ಕಾವ್ಯಾ ಹೆಸರಿನಲ್ಲಿ ಪ್ರಧಾನಿ ಅವರಿಗೆ ಇಂಡಿಯನ್ ಪೋಸ್ಟ್ ನ ಸ್ಪೀಡ್ ಪೋಸ್ಟ್ ಮೂಲಕ ಪ್ರಧಾನಿ ಕಚೇರಿಗೆ ಕೇಸರಿ, ಬಿಳಿ, ಹಸಿರು ಮೂರು ಬಣ್ಣದ ಪ್ರತ್ಯೇಕ ಮೂರು ಮಾಸ್ಕ್ ಗಳನ್ನು ಕಳುಹಿಸಿದ್ದರು.

ಅಲ್ಲದೇ, ಇದನ್ನು ಕೆಲವು ದಿನಗಳ ಕಾಲ ಯಾವುದೇ ಉತ್ತರ ಬರಲಿಲ್ಲ. ಆದರೆ, ಕೆಲವು ದಿನಗಳ ನಂತರ ಮೋದಿ ಅವರು ಈ ಮಾಸ್ಕ್ ಗಳನ್ನು ಧರಿಸಿದ್ದರು. ಆ ನಂತರ ಪ್ರಧಾನಿ ಕಚೇರಿಯಿಂದ ಇವರ ಕುಟುಂಬಕ್ಕೆ ಪ್ರಶಂಸನೀಯ ಪತ್ರ ಬಂದಿದೆ. ಇದನ್ನು ನೋಡಿದ ವಿವೇಕಾನಂದ ಅವರ ಕುಟುಂಬಸ್ಥರು ಸಂತಸ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *

You May Also Like

ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಿಂದ ಪ್ರತಿಭಟನೆ!

ಬೆಂಗಳೂರು : ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈ ಮಧ್ಯೆ ತೈಲ ಬೆಲೆ…

ಫು.ಬಡ್ನಿ ಗ್ರಾಮದ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಅವಿರೋಧ ಆಯ್ಕೆ

ಫು.ಬಡ್ನಿ ಗ್ರಾಮದ ಕೃಷಿ ಪತ್ತಿನ ಸಹಕಾರಿ ಸಂಘದ ಸತತವಾಗಿ ಮೂರನೇ ಬಾರಿ ಅಧ್ಯಕ್ಷರಾಗಿ ಮಾಜಿ ಶಾಸಕ ಎಸ್.ಎನ್.ಪಾಟೀಲ ಅವರ ಪುತ್ರ ಸತೀಶಗೌಡ ಎಸ್.ಪಾಟೀಲ್ ಹಾಗು ಉಪಾಧ್ಯಕ್ಷರಾಗಿ ಲೋಹಿತಪ್ಪ ಮರಿಹೊಳಲಣ್ಣವರ ಅವಿರೋಧವಾಗಿ ಆಯ್ಕೆಯಾದರು. ಮಂಗಳವಾರ ಜರುಗಿದ ಚುನಾವಣೆಯಲ್ಲಿ ಆಯ್ಕೆಯಾ ಅಧ್ಯಕ್ಷ ಉಪಾಧ್ಯಕ್ಷರನ್ನು ಸಂಘದ ಸದಸ್ಯರು ಸನ್ಮಾನಿಸಿದರು.

ಬ್ಯಾಂಕ್ ಗೆ ನುಗ್ಗಿ ಮ್ಯಾನೇಜರ್ ಮೇಲೆ ಹಲ್ಲೆ : ಆರೋಪಿ ಬಂಧನ

ಹಣ ಡ್ರಾ ಮಾಡಿಕೊಡುವಂತೆ ಬ್ಯಾಂಕ್ ಮ್ಯಾನೇಜರ್ ಒಬ್ಬರ ಮನೆಗೆ ನುಗ್ಗಿದ ಇಬ್ಬರು ಮ್ಯಾನೇಜರ್ ಮೇಲೆ ದರ್ಪ ತೋರಿದ ಘಟನೆ ಬಾಲೆಹೊಸೂರು ಗ್ರಾಮದಲ್ಲಿ ನಡೆದಿತ್ತು.

ಮಕ್ಕಳಲ್ಲಿ ಕಲೆಗಳ ವ್ಯಾಮೋಹ ಮೂಡಿಸಿ: ಉಮೇಶ್ ಶಿರಹಟ್ಟಿಮಠ

ಉತ್ತರಪ್ರಭ ನಿಡಗುಂದಿ: ಪ್ರತಿಯೊಬ್ಬ ಮಗುವಿನಲ್ಲಿ ಒಂದಿಲ್ಲೊಂದು ರೀತಿಯ ಕಲಾ ಪ್ರತಿಭೆ ಹುದುಗಿರುತ್ತದೆ. ಅಂಥ ಪ್ರತಿಭೆಗಳನ್ನು ಗುರುತಿಸಿ…