ಬೆಂಗಳೂರು : ರಾಜ್ಯ ಸರ್ಕಾರವು ವಿದ್ಯುತ್ ದರ ಏರಿಕೆ ಮಾಡಿ ಗ್ರಾಹಕರಿಗೆ ಶಾಕ್ ನೀಡಿದೆ.

ಕೊರೊನಾ ಮಹಾಮಾರಿಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ  ಕಳೆದ 6 ತಿಂಗಳಿನಿಂದ ಸರ್ಕಾರ, ಆರ್ಥಿಕವಾಗಿ ನಷ್ಟ ಅನುಭವಿಸಿತ್ತು. ಅಲ್ಲದೇ, ಕಳೆದ  6 ತಿಂಗಳಿಂದಲೂ ದರ ಏರಿಕೆ ಮಾಡುವ ವಿಚಾರ ಸರ್ಕಾರದ ಮುಂದೆ ಇತ್ತು. ಸದ್ಯ ಈ ಪ್ರಸ್ತಾಪಕ್ಕೆ ಒಪ್ಪಿಗೆ ಸಿಕ್ಕಂತಾಗಿದೆ. 

ಸದ್ಯ ವಿದ್ಯುತ್ ದರ ಪ್ರಕಟವಾಗಿದೆ. ಪರಿಷ್ಕೃತ ದರ ನ. 1ರಿಂದ ಜಾರಿಗೆ ಬರಲಿದೆ. ಮಾರ್ಚ್ ತಿಂಗಳಿನಲ್ಲಿಯೇ ವಿದ್ಯುತ್ ದರ ಹೆಚ್ಚಳಕ್ಕೆ ಪ್ರಸ್ತಾಪ ಮಾಡಲಾಗಿತ್ತಾದರೂ ಕರೊನಾ ಕಾರಣಕ್ಕಾಗಿ ಮುಂದೂಡಲಾಗಿತ್ತು.

ಆದೇಶದಂತೆ ಎಲ್ಲ ಎಸ್ಕಾಂಗಳ ವ್ಯಾಪ್ತಿಯಲ್ಲಿ ಗ್ರಾಹಕರು ಪ್ರತಿ ಯೂನಿಟ್‌ ಗೆ ರೂ. 40 ಪೈಸೆ ಹೆಚ್ಚು ಹಣ ತೆರಬೇಕಾಗಿದೆ. ಈ ವಿದ್ಯುತ್ ದರ ಪರಿಷ್ಕರಣೆಗೆ ಎಲ್ಲ ಎಸ್ಕಾಂಗಳು ಪ್ರಸ್ತಾವನೆ ಸಲ್ಲಿಸಿದ್ದವು. ಆರು ತಿಂಗಳಿನಿಂದ ಸರಕಾರ ಇದಕ್ಕೆ ಅನುಮತಿ ನೀಡಿರಲಿಲ್ಲ. ಆದರೆ, ಈಗ ಅನಿವಾರ್ಯಲವಾಗಿ ಪ್ರಸ್ತಾವನೆಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ. 

Leave a Reply

Your email address will not be published. Required fields are marked *

You May Also Like

ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿಗೆ ಸೋಂಕು!

ಹಾವೇರಿ: ರಾಜ್ಯದಲ್ಲಿ ಜೂ. 25ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಜರುಗಲಿವೆ. ಆದರೆ, ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿಯಲ್ಲಿ ಕೊರೊನಾ…

ಸರ್ಕಾರಗಳ ಸಾಧನೆ ಮನೆ-ಮನೆಗೆ ತಲುಪಿಸಿ- ಲಿಂಗರಾಜ ಪಾಟೀಲ್

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಕುರಿತು ಮನೆ-ಮನೆಗೆ ತಲುಪಿಸುವ ಕಾರ್ಯ ಬಿಜೆಪಿ ಕಾರ್ಯಕರ್ತರು ಮಾಡಬೇಕು ಎಂದು ಧಾರವಾಡ ವಿಭಾಗೀಯ ಬಿಜೆಪಿ ಸಂಘಟನಾ ಪ್ರಭಾರಿ ಲಿಂಗರಾಜ್ ಪಾಟೀಲ್ ಹೇಳಿದರು.

ಮುಂಡರಗಿ ಮಿನಿ ವಿಧಾನಸೌಧಕ್ಕೂ ಶುರುವಾಯಿತೆ ಕೊರೊನಾ ಭೀತಿ..!

ಪಟ್ಟಣದಲ್ಲಿ ಕಳೆದ ಎರಡು ಮೂರು ದಿನಗಳಿಂದ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಇದರಿಂದ ಮುಂಡರಗಿಯ ಜನ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ ದಿಂದ ಆತಂಕಕ್ಕೀಡಾಗಿದ್ದಾರೆ. ಆದರೆ ಇಂದು ಪಟ್ಟಣದ ಮಿನಿವಿಧಾನ ಸೌಧ ಕಾರ್ಯಾಲಯ ಗೇಟ್ ಗೆ ಬೀಗ ಹಾಕಿರುವುದು ಜನರ ಆತಂಕಕ್ಕೆ ಕಾರಣವಾಗಿದೆ.

ಜಿಲ್ಲೆಯಲ್ಲಿ ಧಾರ್ಮಿಕ ಹಬ್ಬಗಳನ್ನು ನಿರ್ಭಂದಿಸಿ ಜಿಲ್ಲಾಡಳಿತ ಆದೇಶ

ಕಳೆದ 15 ದಿನಗಳಿಂದ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಬರುವ ಹೋಳಿ, ಯುಗಾದಿ, ಷಬ್-ಎ-ಬರಾತ್, ಗುಡ್‌ಫ್ರೆöÊಡೆ ಹಬ್ಬಗಳ ಸಂದರ್ಭಗಳ ನಡೆಯಬಹುದಾದ ಸಮಾರಂಭಗಳು, ಆಚರಣೆಗಳು