ಬೆಂಗಳೂರು : ರಾಜ್ಯ ಸರ್ಕಾರವು ವಿದ್ಯುತ್ ದರ ಏರಿಕೆ ಮಾಡಿ ಗ್ರಾಹಕರಿಗೆ ಶಾಕ್ ನೀಡಿದೆ.
ಕೊರೊನಾ ಮಹಾಮಾರಿಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಳೆದ 6 ತಿಂಗಳಿನಿಂದ ಸರ್ಕಾರ, ಆರ್ಥಿಕವಾಗಿ ನಷ್ಟ ಅನುಭವಿಸಿತ್ತು. ಅಲ್ಲದೇ, ಕಳೆದ 6 ತಿಂಗಳಿಂದಲೂ ದರ ಏರಿಕೆ ಮಾಡುವ ವಿಚಾರ ಸರ್ಕಾರದ ಮುಂದೆ ಇತ್ತು. ಸದ್ಯ ಈ ಪ್ರಸ್ತಾಪಕ್ಕೆ ಒಪ್ಪಿಗೆ ಸಿಕ್ಕಂತಾಗಿದೆ.
ಸದ್ಯ ವಿದ್ಯುತ್ ದರ ಪ್ರಕಟವಾಗಿದೆ. ಪರಿಷ್ಕೃತ ದರ ನ. 1ರಿಂದ ಜಾರಿಗೆ ಬರಲಿದೆ. ಮಾರ್ಚ್ ತಿಂಗಳಿನಲ್ಲಿಯೇ ವಿದ್ಯುತ್ ದರ ಹೆಚ್ಚಳಕ್ಕೆ ಪ್ರಸ್ತಾಪ ಮಾಡಲಾಗಿತ್ತಾದರೂ ಕರೊನಾ ಕಾರಣಕ್ಕಾಗಿ ಮುಂದೂಡಲಾಗಿತ್ತು.
ಆದೇಶದಂತೆ ಎಲ್ಲ ಎಸ್ಕಾಂಗಳ ವ್ಯಾಪ್ತಿಯಲ್ಲಿ ಗ್ರಾಹಕರು ಪ್ರತಿ ಯೂನಿಟ್ ಗೆ ರೂ. 40 ಪೈಸೆ ಹೆಚ್ಚು ಹಣ ತೆರಬೇಕಾಗಿದೆ. ಈ ವಿದ್ಯುತ್ ದರ ಪರಿಷ್ಕರಣೆಗೆ ಎಲ್ಲ ಎಸ್ಕಾಂಗಳು ಪ್ರಸ್ತಾವನೆ ಸಲ್ಲಿಸಿದ್ದವು. ಆರು ತಿಂಗಳಿನಿಂದ ಸರಕಾರ ಇದಕ್ಕೆ ಅನುಮತಿ ನೀಡಿರಲಿಲ್ಲ. ಆದರೆ, ಈಗ ಅನಿವಾರ್ಯಲವಾಗಿ ಪ್ರಸ್ತಾವನೆಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ.