ಐಪಿಎಲ್ ಬೆಟ್ಟಿಂಗ್ – ಧಾರವಾಡದಲ್ಲಿ ನಾಲ್ವರ ಬಂಧನ!

ಧಾರವಾಡ : ಅವಳಿ ನಗರದಲ್ಲಿ ಕ್ರಿಕೆಟ್ ಬೆಟ್ಟಿಂಗ್ ಜೋರಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬೆಟ್ಟಿಂಗ್ ಅಡ್ಡೆಯ ಮೇಲೆ ದಾಳಿ ಮಾಡಿದ ಪೊಲೀಸರು ನಾಲ್ವರನ್ನು ಬಂಧಿಸಲಾಗಿದೆ. 

ಇಲ್ಲಿಯ ಉಪ ನಗರ ಪೊಲೀಸ್ ಠಾಣೆಯ ಪೊಲೀಸರು ದಾಳಿ ನಡೆಸಿದ್ದರು.ಮಾಳಾಪುರದ ಲತೀಫ್ ತಂಬೋಲಿ, ರಿಯಾಜ್ ಖಾನ್, ರಸಲಾಪುರದ ಓಣಿಯ ಇಜಾಜ್ ಅಹ್ಮದ್ ಮನಿಯಾರ್, ಮಹೆಬೂಬ್ ನಗರದ ಅಲ್ಲಾಭಕ್ಷ ಬಂಧಿತರು. 

ನಿಖರ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ರೂ. 40,200 ನಗದು ಹಾಗೂ ಮೂರು ಮೊಬೈಲ್  ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಐಪಿಎಲ್ ಕ್ರಿಕೆಟ್ ಟೂರ್ನಿಗೆ ಸಂಬಂಧಿಸಿದಂತೆ ಬಂಧಿತರು ಬೆಟ್ಟಿಂಗ್ ಆಡುತ್ತಿದ್ದರು. ಈ ಕುರಿತು ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,  ಪೊಲೀಸರು ತನಿಖೆ ಮುಂದುವರೆಸಿದ್ದಾರೆ. 

Exit mobile version