ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡುವ ಅಧಿಕಾರ ಇಲ್ಲವಂತೆ!

ಮೈಸೂರು : ಸಚಿವ ಸಂಪುಟ ವಿಸ್ತರಣೆ ಕುರಿತು ಮಾತನಾಡುವ ಅಧಿಕಾರ ನಮಗಿಲ್ಲ. ಅದರ ಬಗ್ಗೆ ಮಾತನಾಡಿದರೆ, ನಮ್ಮ ಅಧಿಕಾರವು ಹೋಗಬಹುದು ಎಂದು ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಚಾರ ಮಾಡುವುದು ಹಾಗೂ ಗೆಲುವು, ಸೋಲಿನ ಲೆಕ್ಕ ಹಾಕುವುದಷ್ಟೇ ನಮ್ಮ ಕೆಲಸ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡುವುದು ನಮ್ಮ ಕೆಲಸವಲ್ಲ. 

ಶಿರಾ ಮತ್ತು ರಾಜರಾಜೇಶ್ವರಿ ನಗರ ಉಪ ಚುನಾವಣೆಯ ಬಿಜೆಪಿ ಎರಡೂ ಕ್ಷೇತ್ರಗಳನ್ನು ಗೆದ್ದು ಬೀಗಲಿದೆ. ಶಿರಾದ ಕಾಂಗ್ರೆಸ್ ಅಭ್ಯರ್ಥಿ ಜಯಚಂದ್ರ ಅವರು ಈಗಾಗಲೇ ಸೋಲು ಒಪ್ಪಿಕೊಂಡಿದ್ದಾರೆ.

ಇವಿಎಂ ಯಂತ್ರಗಳ ಮೇಲೆ ಆರೋಪ ಮಾಡುವ ಮೂಲಕ ಪರೋಕ್ಷವಾಗಿ ಅವರು ಸೋಲು ಒಪ್ಪಿಕೊಂಡಿದ್ದಾರೆ. ಅವರ ಮಾತುಗಳನ್ನು ಕೇಳಿದರೆ, ಅವರಿಗೆ ಫಲಿತಾಂಶ ಬರುವವರೆಗೂ ತಾಳ್ಮೆ ಇಲ್ಲದಾಗಿದೆ ಎಂದು ಹೇಳಿದ್ದಾರೆ.

ರಾಜರಾಜೇಶ್ವರಿ ನಗರದಲ್ಲಿ ನಮ್ಮ ಅಭ್ಯರ್ಥಿ ಮುನಿರತ್ನ ಅವರು ಮಾಡಿರುವ ಅಭಿವೃದ್ಧಿ ಕೆಲಸಗಳ ಮೇಲೆ ಯಾರ ತಂತ್ರವೂ ನಿಲ್ಲುವುದಿಲ್ಲ. ಕಾಂಗ್ರೆಸ್ ಯಾವುದೇ ರೀತಿಯ ತಂತ್ರ ಮಾಡಿದರೂ ಜನ ಬಿಜೆಪಿ ಪರವಾಗಿದ್ದಾರೆ. ಅಭಿವೃದ್ಧಿ ಕೆಲಸಗಳೇ ನಮ್ಮ ಪಕ್ಷದ ಕೈ ಹಿಡಿಯಲಿವೆ ಎಂದು ಹೇಳಿದ್ದಾರೆ. 

Exit mobile version