ಮೈಸೂರು : ಸಚಿವ ಸಂಪುಟ ವಿಸ್ತರಣೆ ಕುರಿತು ಮಾತನಾಡುವ ಅಧಿಕಾರ ನಮಗಿಲ್ಲ. ಅದರ ಬಗ್ಗೆ ಮಾತನಾಡಿದರೆ, ನಮ್ಮ ಅಧಿಕಾರವು ಹೋಗಬಹುದು ಎಂದು ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಚಾರ ಮಾಡುವುದು ಹಾಗೂ ಗೆಲುವು, ಸೋಲಿನ ಲೆಕ್ಕ ಹಾಕುವುದಷ್ಟೇ ನಮ್ಮ ಕೆಲಸ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡುವುದು ನಮ್ಮ ಕೆಲಸವಲ್ಲ. 

ಶಿರಾ ಮತ್ತು ರಾಜರಾಜೇಶ್ವರಿ ನಗರ ಉಪ ಚುನಾವಣೆಯ ಬಿಜೆಪಿ ಎರಡೂ ಕ್ಷೇತ್ರಗಳನ್ನು ಗೆದ್ದು ಬೀಗಲಿದೆ. ಶಿರಾದ ಕಾಂಗ್ರೆಸ್ ಅಭ್ಯರ್ಥಿ ಜಯಚಂದ್ರ ಅವರು ಈಗಾಗಲೇ ಸೋಲು ಒಪ್ಪಿಕೊಂಡಿದ್ದಾರೆ.

ಇವಿಎಂ ಯಂತ್ರಗಳ ಮೇಲೆ ಆರೋಪ ಮಾಡುವ ಮೂಲಕ ಪರೋಕ್ಷವಾಗಿ ಅವರು ಸೋಲು ಒಪ್ಪಿಕೊಂಡಿದ್ದಾರೆ. ಅವರ ಮಾತುಗಳನ್ನು ಕೇಳಿದರೆ, ಅವರಿಗೆ ಫಲಿತಾಂಶ ಬರುವವರೆಗೂ ತಾಳ್ಮೆ ಇಲ್ಲದಾಗಿದೆ ಎಂದು ಹೇಳಿದ್ದಾರೆ.

ರಾಜರಾಜೇಶ್ವರಿ ನಗರದಲ್ಲಿ ನಮ್ಮ ಅಭ್ಯರ್ಥಿ ಮುನಿರತ್ನ ಅವರು ಮಾಡಿರುವ ಅಭಿವೃದ್ಧಿ ಕೆಲಸಗಳ ಮೇಲೆ ಯಾರ ತಂತ್ರವೂ ನಿಲ್ಲುವುದಿಲ್ಲ. ಕಾಂಗ್ರೆಸ್ ಯಾವುದೇ ರೀತಿಯ ತಂತ್ರ ಮಾಡಿದರೂ ಜನ ಬಿಜೆಪಿ ಪರವಾಗಿದ್ದಾರೆ. ಅಭಿವೃದ್ಧಿ ಕೆಲಸಗಳೇ ನಮ್ಮ ಪಕ್ಷದ ಕೈ ಹಿಡಿಯಲಿವೆ ಎಂದು ಹೇಳಿದ್ದಾರೆ. 

Leave a Reply

Your email address will not be published. Required fields are marked *

You May Also Like

ಬೃಹತ್ ಮೇರವಣಿಗೆ ಮೂಲಕ ಸಿ.ಸಿ.ಪಾಟೀಲ ನಾಮಪತ್ರ ಸಲ್ಲಿಕೆ ನಾಳೆ

ಉತ್ತರಪ್ರಭ ನರಗುಂದ:ನರಗುಂದ ವಿಧಾನಸಭಾ ಮತಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಸಿ.ಸಿ.ಪಾಟೀಲ ನಾಳೆ ದಿ. 19-4-2023ರ…

ನಾನು ವಿಲನ್ ಅಲ್ಲವೇ ಅಲ್ಲ, ನನ್ನದೇನಿದ್ದರು ಹಿರೋ ಪಾತ್ರ : ಸಿದ್ದರಾಮಯ್ಯ

ಸರಕಾರ ಸಿದ್ರಾಮಯ್ಯ ಬೀಳಿಸಿದ್ದು ಅಂತ ನನ್ನನ್ನು ಆರೋಪಿಸುತ್ತಾರೆ. ಆದರೆ ನಾನು ಯಾವತ್ತು ಅಂತಹ ಕೆಲಸ ಮಾಡಿಲ್ಲ. ಕುಣಿಯಲು ಬಾರದವರು ನೆಲ ಡೊಂಕು ಎನ್ನುವಂತಿದೆ ನನ್ನನ್ನು ಆರೋಪಿಸುವವರ ಮಾತು. ನಾನು ಯಾವತ್ತೂ ಹಿರೋ ವಿಲನ್ ಅಲ್ಲವೇ ಅಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು.

ಯತ್ನಾಳ್ ರಾಜಿನಾಮೆಗೆ ಒತ್ತಾಯಿಸಿ ಕರವೇ ಪ್ರತಿಭಟನೆ: ಭೂತ ದಹನಕ್ಕೆ ಪೊಲೀಸರ ಅಡ್ಡಿ, ಪೊಲೀಸ್ ಹಾಗೂ ಪ್ರತಿಭಟನಾಕಾರರ ಮದ್ಯೆ ವಾಗ್ವಾದ

ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕನ್ನಡಪರ ಹೋರಾಟಗಾರರ ಬಗ್ಗೆ ಕೀಳಾಗಿ ಮಾತನಾಡಿರುವುದನ್ನು ಖಂಡಿಸಿ ನಗರದ ಗಾಂಧಿ ವೃತ್ತದಲ್ಲಿಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣ ಉದ್ಯಮಗಳ ನಿಯಮಬದ್ಧಗೊಳಿಸುವಿಕೆ ಯೋಜನೆ

ಗದಗ:  ಆತ್ಮನಿರ್ಭರ ಭಾರತ ಅಭಿಯಾನದ ಅಂಗವಾಗಿ ಭಾರತ ಸರ್ಕಾರವು ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣ ಉದ್ಯಮಗಳ…