ಕಲಬುರಗಿ : ಪತ್ನಿಯ ವಿಷಯದಲ್ಲಿ ನಡೆದ ಗಲಾಟೆ ಅತ್ತೆಯ ಸಾವಿನಲ್ಲಿ ಅಂತ್ಯವಾಗಿದೆ.

ಜಿಲ್ಲೆಯ ಕಮಲಾಪುರ ತಾಲೂಕಿನ ಭೀಮನಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಲಕ್ಷ್ಮಿಬಾಯಿ(45) ಕೊಲೆಯಾದ ಮಹಿಳೆ. ಆರೋಪಿ ರಾಮು(55) ಅತ್ತೆಯ ತಲೆ ಮೇಲೆಯೇ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾನೆ.

ರಾಮು ಹಾಗೂ ಆತನ ಪತ್ನಿಯ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಹೀಗಾಗಿ ಹಲವು ದಿನಗಳಿಂದ ಪತ್ನಿ, ತವರು ಮನೆ ಸೇರಿದ್ದಳು. ಹೀಗಾಗಿ ಅತ್ತೆ ಜಗಳ ಬಗೆ ಹರಿಸುತ್ತೇನೆ ಎಂದು ಮಗಳನ್ನು ಅಳಿಯನ ಮನೆಗೆ ಕರೆದುಕೊಂಡು ಬಂದಿದ್ದರು.

ಆದರೆ ಈ ಸಂದರ್ಭದಲ್ಲಿ ಅಳಿಯ ಹಾಗೂ ಅತ್ತೆಯ ಮಧ್ಯೆ ವಾಗ್ವಾದ ನಡೆದು ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ. ಈ ಸಂದರ್ಭದಲ್ಲಿ ರಾಮು ತನ್ನ ಅತ್ತೆ ಲಕ್ಷ್ಮಿಬಾಯಿ ಅವರ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾನೆ.

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನಿಂದ ಭೀಮನಾಳ ಗ್ರಾಮಕ್ಕೆ ಮಗಳನ್ನು ಕಳುಹಿಸಲು ಲಕ್ಷ್ಮಿಬಾಯಿ ಬಂದಿದ್ದಳು. ಈ ವೇಳೆ ದುರ್ಘಟನೆ ಸಂಭವಿಸಿದೆ. ಸದ್ಯ ಆರೋಪಿ ಪರಾರಿಯಾಗಿದ್ದು, ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೋವಿಡ್ 19 ನಿಯಮ ಉಲ್ಲಂಘನೆ: ಪಿ.ಟಿ. ಪರಮೇಶ್ವರ ನಾಯ್ಕ್ ವಿರುದ್ಧ ದೂರು ದಾಖಲು

ಹರಪನಹಳ್ಳಿ: ನಿನ್ನೆಯಷ್ಟೆ ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ್ ಪುತ್ರನ ವಿವಾಹ ಬಳ್ಳಾರಿ ಜಿಲ್ಲೆ ಹರಪನಹಳ್ಳಿ ತಾಲೂಕಿನ…

6 ತಿಂಗಳ ನಂತರವೂ ಕೇಂದ್ರಕ್ಕೆ ಗೊಂದಲವೇ?: ಕವಾಟವಿರುವ ಎನ್-95 ಮಾಸ್ಕ್ ಅಪಾಯಕಾರಿ’

ಕೇಂದ್ರ ಆರೋಗ್ಯ ಸೇವೆಗಳ ಡೈರೆಕ್ಟರ್ ಜನರಲ್ ಹೊರಡಿಸಿದ ಸುತ್ತೋಲೆ ಈಗ ಜನರನ್ನು ಗೊಂದಲಕ್ಕೆ ತಳ್ಳಿದೆ.ಸದ್ಯ ಬಳಕೆಯಲ್ಲಿರುವ ಕವಾಟ ಅಥವಾ ರಂಧ್ರಗಳಿರುವ ಎನ್-95 ಮಾಸ್ಕ್ ಸೋಂಕು ತಡೆಯಲಾರವು.

ಗದಗನಲ್ಲಿ ಎಇಇ ಮನೆ ಮೇಲೆ ಎಸಿಬಿ ದಾಳಿ

ಗದಗ: ಇಲ್ಲಿನ ರಾಜೀವ್ ಗಾಂಧಿ ನಗರದಲ್ಲಿರುವ ಬಾಗಲಕೋಟೆ ಜಿಲ್ಲೆಯ ನೀರು‌ ಸರಬರಾಜು ಮಂಡಳಿಯ ಎಇಇ ಹನುಮಂತ…

ನೆಲೋಗಿ ಠಾಣೆ ಪೊಲೀಸರ ಭರ್ಜರಿ ಬೇಟೆ 41.8 ಕೆಜಿ ಗಾಂಜಾ ಜಪ್ತಿ

ಉತ್ತರಪ್ರಭ ನೆಲೋಗಿ: ರಾಷ್ಟೀಯ ಹೆದ್ದಾರಿ 50ರ ಕಲಬುರ್ಗಿಯಿಂದ ವಿಜಯಪುರಕ್ಕೆ ಮಾರ್ಗಮಧ್ಯದಲ್ಲಿ  ನೆಲೋಗಿ ಕಮಾನ್ ಬಸ್ ನಿಲ್ದಾಣದ…