ಕಲಬುರಗಿ : ಪತ್ನಿಯ ವಿಷಯದಲ್ಲಿ ನಡೆದ ಗಲಾಟೆ ಅತ್ತೆಯ ಸಾವಿನಲ್ಲಿ ಅಂತ್ಯವಾಗಿದೆ.

ಜಿಲ್ಲೆಯ ಕಮಲಾಪುರ ತಾಲೂಕಿನ ಭೀಮನಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಲಕ್ಷ್ಮಿಬಾಯಿ(45) ಕೊಲೆಯಾದ ಮಹಿಳೆ. ಆರೋಪಿ ರಾಮು(55) ಅತ್ತೆಯ ತಲೆ ಮೇಲೆಯೇ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾನೆ.

ರಾಮು ಹಾಗೂ ಆತನ ಪತ್ನಿಯ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಹೀಗಾಗಿ ಹಲವು ದಿನಗಳಿಂದ ಪತ್ನಿ, ತವರು ಮನೆ ಸೇರಿದ್ದಳು. ಹೀಗಾಗಿ ಅತ್ತೆ ಜಗಳ ಬಗೆ ಹರಿಸುತ್ತೇನೆ ಎಂದು ಮಗಳನ್ನು ಅಳಿಯನ ಮನೆಗೆ ಕರೆದುಕೊಂಡು ಬಂದಿದ್ದರು.

ಆದರೆ ಈ ಸಂದರ್ಭದಲ್ಲಿ ಅಳಿಯ ಹಾಗೂ ಅತ್ತೆಯ ಮಧ್ಯೆ ವಾಗ್ವಾದ ನಡೆದು ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ. ಈ ಸಂದರ್ಭದಲ್ಲಿ ರಾಮು ತನ್ನ ಅತ್ತೆ ಲಕ್ಷ್ಮಿಬಾಯಿ ಅವರ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾನೆ.

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನಿಂದ ಭೀಮನಾಳ ಗ್ರಾಮಕ್ಕೆ ಮಗಳನ್ನು ಕಳುಹಿಸಲು ಲಕ್ಷ್ಮಿಬಾಯಿ ಬಂದಿದ್ದಳು. ಈ ವೇಳೆ ದುರ್ಘಟನೆ ಸಂಭವಿಸಿದೆ. ಸದ್ಯ ಆರೋಪಿ ಪರಾರಿಯಾಗಿದ್ದು, ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಲಾಕ್ ಡೌನ್ ಸಡಿಲಿಕೆಗೆ ಹಾವೇರಿ ಜನ ಡೋಂಟ್ ಕೇರ್

ಹಸಿರು ವಲಯದಲ್ಲಿರುವ ಹಾವೇರಿ ಜಿಲ್ಲೆಯಲ್ಲಿ ಆರ್ಥಿಕ ಚಟುವಟುಕೆಗಳಿಗೆ ಸಡಿಲಿಕೆ ನೀಡಲಾಗಿದೆ. ಆದ್ರೆ ಗ್ರೀನ್ ಝೋನ್ ಸಡಿಲಿಕೆಗೂ ಕೆಲವೊಂದು ನಿಯಮಗಳಿಗೆ ಹಾವೇರಿ ಜನ ಕ್ಯಾರೆ ಎನ್ನುತ್ತಿಲ್ಲ.

ಆಶಾ ಕಾರ್ಯಕರ್ತೆಯರಿಗೆ ಜನರು ಸತ್ತ ಮೇಲೆ ಅವರಿಗೆ ದುಡ್ಡು ಕೊಡುತ್ತೀರಾ?

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದೆ. ಕೊರೊನಾ ಸಮಯದಲ್ಲಿ ಪ್ರತಿಭಟನೆಯಿಂದ ರಾಜ್ಯದಲ್ಲಿ ಕೆಲವು ಸಮಸ್ಯೆಗಳು ಎದುರಾಗಿವೆ.

ಸಿದ್ದರಾಮಯ್ಯ ಊಸರವಳ್ಳಿ ರಾಜಕಾರಣದ ನಿಜಬಣ್ಣ ಬಯಲಾಗಿದೆ: ಮಾಜಿ ಸಿಎಂ ಎಚ್ಡಿಕೆ

ಸಿದ್ದರಾಮಯ್ಯ ಊಸುರವಳ್ಳಿ ಇದ್ದಂತೆ. ಅಧಿಕಾರದ ಲಾಲಸೆಯಿಂದಲೇ ಅವರು ಕಾಂಗ್ರೆಸ್ ಗೆ ಜಿಗಿದಿದ್ದಾರೆ. ಜೆಡಿಎಸ್ ಅವಕಾಶವಾದಿ ಪಕ್ಷ ಎಂದು ಹೇಳುವ ಮೂಲಕ ಊಸರವಳ್ಳಿ ರಾಜಕಾರಣದ ನಿಜಬಣ್ಣ ಬಯಲಾಗಿದೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕ್ವಾರಂಟೈನ್ ನಲ್ಲಿದ್ದ ಮೂವರು ಪರಾರಿ..!

ಕ್ವಾರೆಂಟೈನಲ್ಲಿದ್ದ ಮೂವರು ಪರಾರಿಯಾದ ಘಟನೆ ಮಸ್ಕಿಯಲ್ಲಿ ನಡೆದಿದೆ. ಇಲ್ಲಿನ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕರೋನಾ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಕ್ವಾರಂಟೈನ್ ಮಾಡಲಾಗಿದ್ದವರ ಪೈಕಿ ಮೂರು ಜನ ತಪ್ಪಿಸಿಕೊಂಡು ಹೋಗಿದ್ದಾರೆ ಎನ್ನಲಾಗಿದೆ.