ಲಕ್ಷ್ಮೇಶ್ವರ: ಇಲ್ಲಿನ ಪುರಸಭೆಗೆ ಚುನಾವಣೆ ನಡೆದು 23 ತಿಂಗಳ ನಂತರ ಇಂದು ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಎರಡು ಸ್ಥಾನಗಳು ಅವಿರೋಧವಾಗಿ ಆಯ್ಕೆಯಾದವು.

ಅಧ್ಯಕ್ಷ ಸ್ಥಾನಕ್ಕೆ ಪೂರ್ಣಿಮಾ ಎಂ.ಪಾಟೀಲ್ ಒಬ್ಬರೆ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣೆ ಅಧಿಕಾರಿಯಾಗಿದ್ದ ತಹಶೀಲ್ದಾರ ಭ್ರಮರಾಂಭ ಗುಬ್ಬಿಶೆಟ್ಟಿ ಅಧ್ಯಕ್ಷ ಸ್ಥಾನದ ಅವಿರೋಧವಾಗಿ ಆಯ್ಕೆ ಕುರಿತು ಘೋಷಿಸಿದರು. ಇನ್ನು ಉಪಾಧ್ಯಕ್ಷ ಸ್ಥಾನಕ್ಕೆ ರಾಮಪ್ಪ ಬಿ.ಗಡದವರ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅದು ಕೂಡ ಅವಿರೋಧ ಆಯ್ಕೆಯಾಯಿತು.

ನೂತನ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕಿಯೆ ಸಂದರ್ಭದಲ್ಲಿ ಎಲ್ಲಾ ಸದಸ್ಯರು ಸಭೆಯಲ್ಲಿ ಹಾಜರಿದ್ದರು. ಚುನಾವಣೆ ಅಧಿಕಾರಿಯಾಗಿ ತಹಶೀಲ್ದಾರ ಭ್ರಮರಾಂಭ ಗುಬ್ಬಿಶೆಟ್ಟಿ ಹಾಗೂ ಉಪತಹಶೀಲ್ದಾರ ಮಂಜುನಾಥ ದಾಸಪ್ಪನವರ, ಕಂದಾಯ ನಿರೀಕ್ಷಕ ಬಸವರಾಜ ಕಾತರಾಳ, ಮುಖ್ಯಾಧಿಕಾರಿ ಎಸ್.ಎಸ್.ಹುಲ್ಲಮ್ಮನವರ, ಆನಂದ ಬದಿ, ಮಂಜುನಾಥ ಮುದಗಲ್ ಆರ್.ಎಂ.ಪಾಟೀಲ್ ಹಾಜರಿದ್ದರು. ಸಿಪಿಐ ವಿಕಾಸ್ ಲಮಾಣಿ ನೇತೃತ್ವದಲ್ಲಿ ಪಿಎಸ್ಐ ಶಿವಯೋಗಿ ಲೋಹಾರ ಬಂದೋಬಸ್ತ ಒದಗಿಸಿದ್ದರು.

Leave a Reply

Your email address will not be published. Required fields are marked *

You May Also Like

ರಂಗೇರಿದೆ ಹಳ್ಳಿ ಅಖಾಡ : ಕಣಕ್ಕೆ ಇಳಿದಿದ್ದಾರೆ 302 ಜನ

ಹಳ್ಳಿಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ರಂಗೇರುತ್ತಿದ್ದು, ಗೆಲುವಿಗಾಗಿ ಹಲವಾರು, ರೀತಿಯ ಹರಸಾಹಸ ಮಾಡುತ್ತಿದ್ದಾರೆ. ನರೇಗಲ್ ಹೋಬಳಿಯ ಹಳ್ಳಿಗಳಲ್ಲಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಬುಧವಾರ ಕೊನೆಯವಾಗಿತ್ತು. ಹೀಗಾಗಿ ಈಗಾಗಲೇ ಅಖಾಡ ಸಿದ್ಧವಾದಂತೆ ಕಾಣುತ್ತಿದೆ.

ಪುರಾಣ ಕವಿ ರಾಮಣ್ಣ ಬ್ಯಾಟಿ ಇನ್ನಿಲ್ಲ

ಗದಗ: ಕರ್ನಾಟಕ ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ ಗದುಗಿನ ತೋಂಟದಾರ್ಯ ಲಿಂಗೈಕ್ಯ ಪರಮಪೂಜ್ಯ ಡಾಕ್ಟರ್ ತೋಂಟದ ಸಿದ್ದಲಿಂಗ…

ಬಿಜೆಪಿಯ ಉಷಾ ದಾಸರಗೆ ಅಧ್ಯಕ್ಷ ಗದ್ದುಗೆ ಪಕ್ಕಾ ! ಕಾಂಗ್ರೆಸ್ ಪಟ್ಟಕ್ಕೆರಲು ಕೊನೆಯ ಕಸರತ್ತು

ಉತ್ತರಪ್ರಭಗದಗ: ಗದಗ ಬೆಟಗೇರಿ ನಗರ ಸಭೆಯ 35 ವಾರ್ಡಗಳಲ್ಲಿ 18 ವಾರ್ಡಗಳಲ್ಲಿ ಬಿಜೆಪಿ, 15 ವಾರ್ಡಗಳಲ್ಲಿ…

ಅಕ್ಟೋಬರ್ ನಲ್ಲಿ ಗ್ರಾಮ ಪಂಚಾಯತಿ ಚುನಾವಣೆ?

ಬೆಂಗಳೂರು: ಕೊರೊನಾ ಕಾರಣದಿಂದ ಗ್ರಾಮ ಪಂಚಾಯತಿ ಚುನಾವಣೆ ಮುಂದೂಡಲಾಗಿತ್ತು. ಇದಕ್ಕೆ ವಿರೋಧ ಪಕ್ಷದಿಂದ ವ್ಯಾಪಕ ವಿರೋಧವು…