ಲಕ್ಷ್ಮೇಶ್ವರ: ಇಲ್ಲಿನ ಪುರಸಭೆಗೆ ಚುನಾವಣೆ ನಡೆದು 23 ತಿಂಗಳ ನಂತರ ಇಂದು ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಎರಡು ಸ್ಥಾನಗಳು ಅವಿರೋಧವಾಗಿ ಆಯ್ಕೆಯಾದವು.

ಅಧ್ಯಕ್ಷ ಸ್ಥಾನಕ್ಕೆ ಪೂರ್ಣಿಮಾ ಎಂ.ಪಾಟೀಲ್ ಒಬ್ಬರೆ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣೆ ಅಧಿಕಾರಿಯಾಗಿದ್ದ ತಹಶೀಲ್ದಾರ ಭ್ರಮರಾಂಭ ಗುಬ್ಬಿಶೆಟ್ಟಿ ಅಧ್ಯಕ್ಷ ಸ್ಥಾನದ ಅವಿರೋಧವಾಗಿ ಆಯ್ಕೆ ಕುರಿತು ಘೋಷಿಸಿದರು. ಇನ್ನು ಉಪಾಧ್ಯಕ್ಷ ಸ್ಥಾನಕ್ಕೆ ರಾಮಪ್ಪ ಬಿ.ಗಡದವರ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅದು ಕೂಡ ಅವಿರೋಧ ಆಯ್ಕೆಯಾಯಿತು.

ನೂತನ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕಿಯೆ ಸಂದರ್ಭದಲ್ಲಿ ಎಲ್ಲಾ ಸದಸ್ಯರು ಸಭೆಯಲ್ಲಿ ಹಾಜರಿದ್ದರು. ಚುನಾವಣೆ ಅಧಿಕಾರಿಯಾಗಿ ತಹಶೀಲ್ದಾರ ಭ್ರಮರಾಂಭ ಗುಬ್ಬಿಶೆಟ್ಟಿ ಹಾಗೂ ಉಪತಹಶೀಲ್ದಾರ ಮಂಜುನಾಥ ದಾಸಪ್ಪನವರ, ಕಂದಾಯ ನಿರೀಕ್ಷಕ ಬಸವರಾಜ ಕಾತರಾಳ, ಮುಖ್ಯಾಧಿಕಾರಿ ಎಸ್.ಎಸ್.ಹುಲ್ಲಮ್ಮನವರ, ಆನಂದ ಬದಿ, ಮಂಜುನಾಥ ಮುದಗಲ್ ಆರ್.ಎಂ.ಪಾಟೀಲ್ ಹಾಜರಿದ್ದರು. ಸಿಪಿಐ ವಿಕಾಸ್ ಲಮಾಣಿ ನೇತೃತ್ವದಲ್ಲಿ ಪಿಎಸ್ಐ ಶಿವಯೋಗಿ ಲೋಹಾರ ಬಂದೋಬಸ್ತ ಒದಗಿಸಿದ್ದರು.

Leave a Reply

Your email address will not be published. Required fields are marked *

You May Also Like

ಪೊಲೀಸರಿಂದಲೇ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ!

ಒಡಿಶಾ : ಅಪ್ರಾಪ್ತ ಬಾಲಕಿಯ ಮೇಲೆ ಪೊಲೀಸ್ ಠಾಣೆಯ ಸಿಬ್ಬಂದಿಯೇ ಸಾಮೂಹಿಕ ಅತ್ಯಾಚಾರ ಮಾಡಿರುವ ಅಮಾನವೀಯ…

ಪುರಾಣ ಕವಿ ರಾಮಣ್ಣ ಬ್ಯಾಟಿ ಇನ್ನಿಲ್ಲ

ಗದಗ: ಕರ್ನಾಟಕ ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ ಗದುಗಿನ ತೋಂಟದಾರ್ಯ ಲಿಂಗೈಕ್ಯ ಪರಮಪೂಜ್ಯ ಡಾಕ್ಟರ್ ತೋಂಟದ ಸಿದ್ದಲಿಂಗ…

ಜಿಲ್ಲಾ ಹಾಗು ತಾಲೂಕು ಪಂಚಾಯಿತಿ ಚುನಾವಣೆ ಮುಂದೂಡಿಕೆಗೆ ಚಿಂತನೆ: ಸಚಿವ ಈಶ್ವರಪ್ಪ

ಕೊರೊನಾ ಹಿನ್ನೆಲೆ ರಾಜ್ಯದಲ್ಲಿ ನಡೆಯಬೇಕಿದ್ದ ಜಿಲ್ಲಾ ಹಾಗು ತಾಲೂಕು ಪಂಚಾಯತಿ ಚುನಾವಣೆಗಳನ್ನು‌ ಮುಂದೂಡಲು ಗ್ರಾಮೀಣಾಭಿವೃದ್ಧಿ ಇಲಾಖೆ ತೀರ್ಮಾನಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ಯಡಿಯೂರಪ್ಪ ದಮ್ ನಿಂದಲೇ ಸಿದ್ದು ವಿಪಕ್ಷ ನಾಯಕ: ಬಿ.ಸಿ.ಪಾಟೀಲ್

ಹಾವೇರಿ: ಯಡಿಯೂರಪ್ಪ ದಮ್ ನಿಂದಲೇ ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕನಾಗಿರೋದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್…