ಮಂಗಳೂರು : ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ವಿಚಾರಣೆಗೆ ಒಳಪಡಿಸಿದೆ. ಈ ವಿಷಯವಾಗಿ ಸಿಎಂ ಯಡಿಯೂರಪ್ಪ ಅವರು ಮಾತನಾಡಿದ್ದಾರೆ.

ಜಿಪಂನ ಮಾಜಿ ಸದಸ್ಯ ಯೋಗೇಶ್ ಗೌಡ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ಈ ಕುರಿತು ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಕೊಲೆಯಿಂದಾಗಿ ಯೋಗೇಶ್ ಗೌಡ ಅವರ ಕುಟುಂಬಸ್ಥರು ಸಾಕಷ್ಟು ನೋವು ಅನುಭವಿಸಿದ್ದಾರೆ. ಆದರೆ, ಸಿಬಿಐ ತನಿಖೆಯಿಂದ ಇದರ ಹಿಂದಿನ ಸತ್ಯ ಹೊರ ಬರಲಿದೆ. ಈ ಪ್ರಕರಣಕ್ಕೆ ನ್ಯಾಯ ಸಿಗುವಂತಾಗಲಿ. ಸಿಬಿಐ ತನಿಖೆಯಿಂದ ನಿಜಾಂಶ ಹೊರಗೆ ಬರಲಿ. ಅಲ್ಲದೇ, ಯೋಗೇಶ್ ಗೌಡ ಅವರ ಕುಟುಂಬಕ್ಕೆ ನ್ಯಾಯ ಸಿಗುವಂತೆ ಆಗಲಿ ಎಂದು ಹೇಳಿದ್ದಾರೆ.

ಸಿಬಿಐ ತನಿಖೆಯಲ್ಲಿ ತಮ್ಮ ಹಸ್ತಕ್ಷೇಪ ಇದೆ ಎಂದು ಹಲವರು ಮಾತನಾಡಿಕೊಳ್ಳುತ್ತಿದ್ದಾರೆ. ಆದರೆ, ಇದರಲ್ಲಿ ಯಾವುದೇ ಹುರುಳು ಇಲ್ಲ.

ಇದರಲ್ಲಿ ರಾಜ್ಯ ಸರ್ಕಾರ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ. ವಿನಯ್ ಕುಲಕರ್ಣಿ ಅವರು ಬಿಜೆಪಿ ಸೇರುವ ಸಂಗತಿ ಸತ್ಯಕ್ಕೆ ದೂರ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಜಾನಪದ ಸಾಹಿತ್ಯ ವಿಶ್ವದಲ್ಲೇ ಶ್ರೇಷ್ಠ ಸಾಹಿತ್ಯ -ಡಾ.ಎಸ್ ಬಾಲಾಜಿ

ಗದಗ: ವಿಶ್ವವಿದ್ಯಾಲಯಗಳು ಜಾನಪದಕ್ಕೆ ಸಂಬಂಧಿಸಿದ ಕ್ಷೇತ್ರಕಾರ್ಯ ಹಾಗೂ ದಾಖಲೀಕರಣದ ಕಾರ್ಯಗಳನ್ನು ನಿಲ್ಲಿಸಿರುವುದು ವಿಷಾದನೀಯ ಎಂದು ರಾಜ್ಯಾಧ್ಯಕ್ಷ…

ಮಹಿಳಾ ನರ್ಸ್ ಚಿಕಿತ್ಸೆ ನೀಡುವಂತೆ ಆಸ್ಪತ್ರ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಯುವಕರು

ಅಪಘಾತದಲ್ಲಿ ತಮಗೆ ಗಾಯವಾಗಿದೆ ಎಂದು ಆಸ್ಪತ್ರೆಗೆ ಆಗಮಿಸಿದ ಇಬ್ಬರು ನಮಗೆ ಮಹಿಳಾ ನರ್ಸ್ ಚಿಕಿತ್ಸೆ ನಿಡಬೇಕು ಎಂದು ಆಸ್ಪತ್ರೆಯ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ವ್ಯಂಗ್ಯವಾಡಿದ ಬಿಜೆಪಿ!

ಬೆಂಗಳೂರು : ಉಪ ಚುನಾವಣೆಯ ಫಲಿತಾಂಶ ಹೊರ ಬೀಳುತ್ತಿದ್ದಂತೆ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಮಾತಿನ ಸಮರ ಜೋರಾಗಿದೆ.

ಲಕ್ಷ್ಮೇಶ್ವರದಲ್ಲಿ ಗೊಬ್ಬರ ಖರೀದಿಗಾಗಿ ಕ್ಯೂ..!

ಲಕ್ಷ್ಮೇಶ್ವರ: ಜಿಲ್ಲೆಯಾದ್ಯಂತ ಮುಂಗಾರು ಬಿತ್ತನೆ ಅಬ್ಬರ ಜೋರಾಗಿದೆ. ಮುಂಗಾರು ಹಂಗಾಮಿನ ಹತ್ತಿ, ಹೆಸರು, ಶೇಂಗಾ, ಗೋವಿನ ಜೋಳ ಬಿತ್ತನೆಗೆ ಬೀಜ, ಗೊಬ್ಬರ ಖರೀದಿಯಲ್ಲಿ ರೈತರು ತಲ್ಲೀನರಾಗಿದ್ದಾರೆ.