ಧಾರವಾಡ : ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದಿದೆ.

2017ರಲ್ಲಿ ಯೋಗೀಶ್ ಗೌಡ ಅವರ ಕೊಲೆ ನಡೆದಿತ್ತು. ಇಲ್ಲಿಯ ಸಪ್ತಾಪುರ ಜಿಮ್‍ ಗೆ ತೆರಳಿದ್ದ ದುಷ್ಕರ್ಮಿಗಳು ಮಚ್ಚಿನಿಂದ ದಾಳಿ ನಡೆಸಿ ಕೊಲೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರನ್ನು ಬಂಧಿಸಿದ್ದರು.

ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಅವರ ಹೆಸರು ತಳಕು ಹಾಕಿಕೊಂಡಿರುವ ಹಿನ್ನೆಲೆಯಲ್ಲಿ ಅವರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ. ರಾಜ್ಯ ಸರ್ಕಾರವು 2019ರಲ್ಲಿ ಈ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಿತ್ತು. ತನಿಖೆ ಆರಂಭಿಸಿರುವ ಸಿಬಿಐ, ಪ್ರಕರಣದ ಆರೋಪಿಗಳಾದ ಬಸವರಾಜ ಶಿವಪ್ಪ, ವಿಕ್ರಮ್ ಬಳ್ಳಾರಿ, ಕೀರ್ತಿ ಕುಮಾರ್ ಕುರಹಟ್ಟಿ, ಸಂದೀಪ್ ಸೌದತ್ತಿ, ವಿನಾಯಕ ಕಟಗಿ ಹಾಗೂ ಮಹಾಬಲೇಶ್ವರ ಹೊಂಗಲ್ ಅವರ ವಿರುದ್ಧ ಪ್ರಕರಣ ದಾಖಲಿಸಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

You May Also Like

ಸಾಮಾಜಿಕ, ಆರ್ಥಿಕ, ಶೈಕ್ಷಣಿಕೆ ಸಮೀಕ್ಷೆ ವರದಿ ಜಾರಿಗೊಳಿಸಿ: ಸಿದ್ದರಾಮಯ್ಯ

ಸಾಮಾಜಿಕ ನ್ಯಾಯದ ಪರವಾಗಿದ್ದೇವೆ ಎಂದು ಬಾಯಿಮಾತಿನಲ್ಲಿ ಹೇಳಿದರೆ ಸಾಲದು, ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಲ್ಲಿಸಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ತಕ್ಷಣ ಜಾರಿಗೊಳಿಸಬೇಕು ಎಂದು ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಮತ್ತು ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಅವರನ್ನು ಒತ್ತಾಯಿಸುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

ಅಡಕೆ ನುಂಗಿದ ಮಗು ಉಸಿರುಗಟ್ಟಿ ಸಾವು

ತಾಲೂಕು ಹೆದ್ದೂರು ಗ್ರಾಮದಲ್ಲಿ ಶನಿವಾರ ಬೆಳಗ್ಗೆ ಈ ಘಟನೆ ಸಂಭವಿಸಿದೆ. 1 ವರ್ಷ ಒಂದು ತಿಂಗಳ ಮಗು ನಿಶಾನ್ ಮೃತಪಟ್ಟಿದೆ. ಸಂದೇಶ ಮತ್ತು ಅರ್ಚನಾ ದಂಪತಿಗಳ ಮಗು ನಿಶಾನ್ ಆರೋಗ್ಯವಾಗಿತ್ತು. ಆಟವಾಡುವಾಗ ಅಡಕೆ ನುಂಗಿದ್ದರಿಂದ, ಉಸಿರುರಾಡಲು ಕಷ್ಟವಾಗಿದೆ. ತಕ್ಷಣವೇ ಮಗುವನ್ನು ಕಟ್ಟೆಹಕ್ಕಲುವಿನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರಲಾಗಿದೆ. ಅಲ್ಲಿಂದ ತೀರ್ಥಹಳ್ಳಿಯ ಜೆ. ಸಿ. ಆಸ್ಪತ್ರೆಗೆ ಕರೆತಂದು ದಾಖಲು ಮಾಡಲಾಗಿದೆ. ಆದರೆ, ಉಸಿರಾಡಲು ಕಷ್ಟವಾಗಿ ಮಗು ಮೃತಪಟ್ಟಿದೆ.

ಐಪಿಎಲ್ ಬೆಟ್ಟಿಂಗ್ – ಧಾರವಾಡದಲ್ಲಿ ನಾಲ್ವರ ಬಂಧನ!

ಧಾರವಾಡ : ಅವಳಿ ನಗರದಲ್ಲಿ ಕ್ರಿಕೆಟ್ ಬೆಟ್ಟಿಂಗ್ ಜೋರಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬೆಟ್ಟಿಂಗ್ ಅಡ್ಡೆಯ ಮೇಲೆ ದಾಳಿ ಮಾಡಿದ ಪೊಲೀಸರು ನಾಲ್ವರನ್ನು ಬಂಧಿಸಲಾಗಿದೆ.