ಹೊಳೆಯಾಲೂರು: ಮಲಪ್ರಭಾ ನದಿಯಲ್ಲಿ ನಿನ್ನೆಯಷ್ಟೆ ಮೊಸಳೆ ಪ್ರತ್ಯಕ್ಷವಾಗಿದ್ದು, ಗ್ರಾಮದ ಜನರಲ್ಲಿ ಆತಂಕ ಮನೆ ಮಾಡಿತ್ತು. ಜಿಲ್ಲೆ ರೋಣ ತಾಲೂಕಿನ ಹೊಳೆಆಲೂರ ಗ್ರಾಮದ ಬಳಿಯ ಮಲಪ್ರಭಾ ನದಿಯಲ್ಲಿಯೇ ಮೊಸಳೆ ಕಂಡು ಬಂದಿತ್ತು.  

ನಿನ್ನೆ ಏಕಾಏಕಿ ಬೃಹತ್ ಮೊಸಳೆ ಗ್ರಾಮಸ್ಥರ ಕಣ್ಣೆಗೆ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಇಂದು ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಬೆಳಿಗ್ಗೆಯಿಂದ ಅಧಿಕಾರಿಗಳು ಪರಿಶೀಲನೆ ಕಾರ್ಯ ನಡೆಸಿದರು. ಹಲವು ಗಂಟೆಗಳ ಕಾಲ ಪರಿಶೀಲಿಸಿದರೂ ಮೊಸಳೆ ಪತ್ತೆಯಾಗಿಲ್ಲ.

ಅರಣ್ಯ ಇಲಾಖೆ ಸಿಬ್ಬಂದಿ, ಗ್ರಾಪಂ ಸಿಬ್ಬಂದಿ ಗ್ರಾಮಸ್ಥರಿಂದ ಮೊಸಳೆ ಪತ್ತೆ ಕಾರ್ಯ ನಡೆಯಿತು.  ಮೊಸಳೆಯು ಮತ್ತೊಮ್ಮೆ ಪತ್ತೆಯಾದರೆ ಅದನ್ನು ಹಿಡಿಯುತ್ತೇವೆ ಎಂದು ಅಧಿಕಾರಿಗಳು ಹೇಳಿದರು.  

ಆದರೆ, ಹೊಳೆ ಆಲೂರು ಗ್ರಾಮದಲ್ಲಿ ಮಾತ್ರ ಆತಂಕ ಮುಂದುವರೆದಿದೆ. ಮಲಪ್ರಭ ತೀರದಲ್ಲಿ ಹೆಚ್ಚಿನ ಮಳೆಯಾದ ಹಿನ್ನೆಲೆಯಲ್ಲಿ ಪ್ರವಾಹ ಉಂಟಾಗಿದ್ದರಿಂದಾಗಿ ಈ ಮೊಸಳೆ ಬಂದಿರಬಹುದು ಎಂದು ಶಂಕಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಹುಲಕೋಟಿ ಬಳಿ ಕಾರು-ಲಾರಿ ಡಿಕ್ಕಿ

ಕಾರ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದ್ದು, ಸ್ಥಳದಲ್ಲೆ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಸಮೀಪದ ಹುಲಕೋಟಿ ಹೊರವಲಯದ ರೂರಲ್ ಇಂಜನಿಯರಿಂಗ್ ಕಾಲೇಜ್ ಬಳಿ ಘಟನೆ ನಡೆದಿದೆ.

ಗದಗ ಜಿಲ್ಲೆಯಲ್ಲಿ 72; ರಾಜ್ಯದಲ್ಲಿಂದು 10,947 ಕೊರೊನಾ ಪಾಸಿಟಿವ್!

ಜಿಲ್ಲೆಯಲ್ಲಿಂದು 72 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 9700ಕ್ಕೆ ಏರಿಕೆಯಾಗಿದೆ. ಒಟ್ಟು ಸಕ್ರೀಯ 676 ಪ್ರಕರಣಗಳಿವೆ. ಇಂದು 63 ಜನರು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು ಬಿಡುಗಡೆಯಾಗಿರುವ ಪ್ರಕರಣಗಳ ಸಂಖ್ಯೆ 8889. ಒಟ್ಟು ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 135ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

ಕೊರೊನಾ ವಾರಿಯರ್ಸ್ ನಿಜವಾದ ಹಿರೋಗಳು: ಜನಜಾಗೃತಿಯ ಸಂದೇಶ ನೀಡುವ ಚಿತ್ರರಂಗದ ದಿಗ್ಗಜರ ದೃಶ್ಯರೂಪಕ

ಕೊರೊನಾ ಜಾಗೃತಿಗಾಗಿ ಕನ್ನಡ ಚಿತ್ರರಂಗದ ದಿಗ್ಗಜರು ಸಂದೇಶ ನೀಡಿದ ದೃಶ್ಯ ರೂಪಕವನ್ನು ನೀವು ನೋಡಬಹುದು.

ಮಾ.4 ರಿಂದ ರಾಜ್ಯ ಬಜೆಟ್ ಅಧಿವೇಶನ: ಮೀಸಲಾತಿ ವಿಚಾರ ಸಂಪುಟ ಸಭೆಯಲ್ಲಿ ಚರ್ಚೆ!

ಮಾರ್ಚ್ ತಿಂಗಳ ಕೊನೆಯವರೆಗೂ ಬಜೆಟ್ ಅಧಿವೇಶನ ನಡೆಸಲಾಗುತ್ತಿದ್ದು, ಮಾರ್ಚ್ 4 ಮತ್ತು 5 ಎರಡು ದಿನ ಒಂದು ದೇಶ ಒಂದು ಚುನಾವಣೆ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದರು.