ಬೆಂಗಳೂರು : ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ.

ಈ ಕುರಿತು ಆರೋಗ್ಯ ಸಚಿವ ಡಾ. ಸುಧಾಕರ್ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಆಶಾ ಕಾರ್ಯಕರ್ತೆಯರಿಗೆ ಮಾಸಿಕ ರೂ. 12 ಸಾವಿರ ಗೌರವ ಧನ ನೀಡುವ ಕುರಿತು ಚಿಂತನೆ ನಡೆದಿದ್ದು, ಶೀಘ್ರದಲ್ಲಿಯೇ ಈ ಕುರಿತು ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಆಶಾ ಕಾರ್ಯಕರ್ತೆಯರಿಗೆ ರೂ. 12 ಸಾವಿರ ಗೌರವ ಧನ ನೀಡಬೇಕು ಎಂಬ ಕೂಗು ಬಹು ದಿನಗಳ ಬೇಡಿಕೆಯಾಗಿತ್ತು. ಈ ಕುರಿತು ರಾಜ್ಯ ಸಂಯುಕ್ತ ಕಾರ್ಯಕರ್ತೆಯರ ಸಂಘ ಆಗ್ರಹಿಸಿದೆ. ಹೀಗಾಗಿ ಕ್ರಮ ಕೈಗೊಳ್ಳುವ ಚಿಂತನೆ ಸರ್ಕಾರದ ಮಟ್ಟದಲ್ಲಿ ನಡೆದಿದೆ ಎಂದು ಅವರು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಆಶಾ ಕಾರ್ಯಕರ್ತೆಯರ ಗೌರವ ಧನ ನೀಡುವ ಕುರಿತು ಶೀಘ್ರದಲ್ಲಿಯೇ ಮಹತ್ವದ ಸಭೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಅಂಬಾಭವಾನಿ ಜಾತ್ರಾ ಉತ್ಸವ ಸಡಗರ ಸಂಭ್ರಮ ಕೃಷ್ಣೆ ತಟದಲ್ಲಿ ಕುಂಭ ಮೆರವಣಿಗೆ ಕಲರವ

ಚಿತ್ರ ವರದಿ : ಗುಲಾಬಚಂದ ಆರ್.ಜಾಧವಆಲಮಟ್ಟಿ :(ವಿಜಯಪುರ ಜಿಲ್ಲೆ) ಬೆಳ್ಳಂ ಬೆಳಿಗ್ಗೆ ತಂಪಾಗಿ ಸೂಸಿ ಬರುತ್ತಿದ್ದ…

ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ವರ್ಗಾವಣೆ

ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಡಿಪಿ & ಎಆರ್ (ಸರ್ವೀಸಸ್-1) ಇಲಾಖೆ ಇಂದು ಆದೇಶ ಹೊರಡಿಸಿದೆ.

ಕಾರ್ಮಿಕರ ಬದುಕಲ್ಲಿ ನಗೆ ಮೂಡಲಿ – ಕುಮಾರಸ್ವಾಮಿ!

ಕಾರ್ಮಿಕರ ದಿನಾಚರಣೆಯ ಹಿನ್ನೆಲೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ಟ್ವಿಟ್ ಮಾಡಿ ಶುಭಾಶಯ ಕೋರಿದ್ದಾರೆ.

ಮಾಸ್ಕ-ಸಾಮಾಜಿಕ ಅಂತರಕಡ್ಡಾಯ : ಪಾಲಿಸದಿದ್ದರೆ ದಂಡ

ಇಂದಿನಿಂದ ಮುಂದಿನ 15 ದಿನಗಳ ವರೆಗೆ ರಾಜ್ಯದಲ್ಲಿ ಯಾವುದೇ ಪ್ರತಿಭಟನೆ, ರ್ಯಾಲಿಗೆ ಅವಕಾಶವಿಲ್ಲ. ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯವಾಗಿದೆ. ನಿಯಮ ಪಾಲಿಸದಿದ್ದರೇ ದಂಡ ವಿಧಿಸಲಾಗುತ್ತದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.