ಬಳ್ಳಾರಿ : ವಿಶ್ವವಿಖ್ಯಾತ ಹಂಪಿ ಉತ್ಸವವನ್ನು ಈ ವರ್ಷ ಒಂದೇ ದಿನ ಆಚರಿಸಲು ನಿರ್ಧರಿಸಲಾಗಿದೆ. ನ.13 ರಂದು ಈ ಬಾರಿ ಒಂದೇ ದಿನದ ಮಟ್ಟಿಗೆ ಗತ ವೈಭವ ಸಾರುವ ಈ ಉತ್ಸವವನ್ನು ಆಚರಿಸಲು ನಿರ್ಧರಿಸಲಾಗಿದೆ. ಈ ಹಿಂದೆ ಈ ಉತ್ಸವ ಮೂರು ದಿನಗಳ ಮಟ್ಟಿಗೆ ನಡೆಯುತ್ತಿತ್ತು. ಆದರೆ, ಈ ವರ್ಷ ಕೊರೊನಾದಿಂದಾಗಿ ಕೇವಲ ಒಂದೇ ದಿನ ಹಂಪಿ ಉತ್ಸವ ಆಚರಿಸಲು ನಿರ್ಧರಸಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್, ಈ ಬಾರಿ ಹಂಪಿ‌ ಉತ್ಸವವನ್ನು ನ. 13ರಂದು ಒಂದು ದಿನ ಮಾತ್ರ ನಡೆಸಲು ತೀರ್ಮಾನಿಸಿದೆ. ಈ ಉತ್ಸವವನ್ನು ವಿಜಯನಗರ ಸಾಮ್ರಾಜ್ಯದ ಗತ ವೈಭವವವನ್ನು ಇಂದಿನ‌ ಪೀಳಿಗೆಗೆ ಪರಿಚಯಿಸಲು ಹಮ್ಮಿಕೊಳ್ಳುತ್ತ ಬರುತ್ತಿದೆ. ಈ ಬಾರಿ ಕೊರೊನಾದಿಂದಾಗಿ ಈ ವರ್ಷ ಒಂದೇ ದಿನ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.

ಈ ಬಾರಿ ಒಂದೇ ದಿನ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ವೇದಿಕೆ ಕಾರ್ಯಕ್ರಮಗಳು ಇರುವುದಿಲ್ಲ. ಅಂದು ಸಂಜೆ ಹಂಪಿಯ ಉದ್ದಾನ ವೀರಭದ್ರೇಶ್ವರ ದೇವಸ್ಥಾನದಿಂದ ವೀರೂಪಾಕ್ಷ ದೇವಸ್ಥಾನದ ವರೆಗೆ ಜನಪದ ಕಲಾ ತಂಡಗಳೊಂದಿಗೆ ದೇವರ ಮೂರ್ತಿಯ ಶೊಭಾಯಾತ್ರೆ ನಡೆಯಲಿದೆ.

ಪ್ರತಿ ತಾಲೂಕಿನಿಂದ ಎರಡೆರಡು ಜನಪದ ಕಲಾ ತಂಡಗಳು ಪಾಲ್ಗೋಳ್ಳಲಿವೆ. ಆ ನಂತರ ವಿರೂಪಾಕ್ಷ ದೇವಸ್ಥಾನದ ಹತ್ತಿರ ಹರಿಯುತ್ತಿರುವ ತುಂಗಭದ್ರಾ ನದಿ ತಟದಲ್ಲಿ ತುಂಗಾ ಆರತಿ ನಡೆಯಲಿದೆ.

Leave a Reply

Your email address will not be published. Required fields are marked *

You May Also Like

ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ ಪೆನ್ಷನ್ ಸ್ಕೀಮ್:ಕಂದಾಯ ಸಚಿವ ಆರ್.ಅಶೋಕ್

ಗದಗ: ಇನ್ಮುಂದೆ ನೋ ಪೊಸ್ಟ್ ಆಫೀಸ್ ಓನ್ಲಿ ಬ್ಯಾಂಕ್ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.ಗದಗನಲ್ಲಿ…

ನಾಳೆ ಮದುವೆ ಇತ್ತು: ಆದ್ರೆ ಇಂದು ವಧುವಿನ ತಂದೆ, ತಂಗಿಗೆ ಸೋಂಕು ಪತ್ತೆ..!

ಯಾದಗಿರಿ: ಕೊರೊನಾ ವೈರಸ್, ಈಗ ಜಿಲ್ಲೆಯ ಮದುವೆ ಮನೆಯೊಂದರ ಬಾಗಿಲಿಗೆ ತೆರಳಿದೆ. ನಾಳೆ ಮದುವೆಯಾಗಬೇಕಿದ್ದ ವಧುವಿನ…

ಎ.ಪಿ.ಎಮ್.ಸಿ ಅಧ್ಯಕ್ಷರ ಆಯ್ಕೆ: ತಡೆಯಾಜ್ಞೆ ತೆರವು ಗೊಳಸಿ ಪ್ರಕರಣ ಮುಂದುವರೆಸಿದ ನ್ಯಾಯಾಲಯ

ಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಪ್ರಕ್ರಿಯೇ ನಡೆದಿತ್ತು. ಇದರಲ್ಲಿ ಬಿಜೆಪಿಯ ರವೀಂದ್ರ ಉಪ್ಪಿನಬೆಟಗೇರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ನಂತರದ ಬೆಳವಣಿಗೆಯಲ್ಲಿ ಈ ಬಗ್ಗೆ ಚುನಾವಣೆ ಪ್ರಕ್ರಿಯೇ ಪ್ರಶ್ನಿಸಿ ಹಿಂದಿನ ಅವಧಿಯ ಅಧ್ಯಕ್ಷ ಶಿವಕುಮಾರಗೌಡ ಪಾಟೀಲ್ ನ್ಯಾಯಾಲಯ ಮೆಟ್ಟಿಲೇರಿದ್ದರು. ಇದರಿಂದ ಜಿಲ್ಲಾ ನ್ಯಾಯಾಲಯ ತಡೆಯಾಜ್ಞೆ ನೀಡಿತ್ತು.

ಶಾಲೆ ಆರಂಭಕ್ಕೆ ಸಿದ್ದರಾಮಯ್ಯ ವಿರೋಧ

ರಾಜ್ಯ ಸರ್ಕಾರ ಶಾಲೆ ಆರಂಭಕ್ಕೆ ಚಿಂತನೆ ನಡೆಸಿದ್ದು ಇದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದ್ದಾರೆ.