ಬಳ್ಳಾರಿ : ವಿಶ್ವವಿಖ್ಯಾತ ಹಂಪಿ ಉತ್ಸವವನ್ನು ಈ ವರ್ಷ ಒಂದೇ ದಿನ ಆಚರಿಸಲು ನಿರ್ಧರಿಸಲಾಗಿದೆ. ನ.13 ರಂದು ಈ ಬಾರಿ ಒಂದೇ ದಿನದ ಮಟ್ಟಿಗೆ ಗತ ವೈಭವ ಸಾರುವ ಈ ಉತ್ಸವವನ್ನು ಆಚರಿಸಲು ನಿರ್ಧರಿಸಲಾಗಿದೆ. ಈ ಹಿಂದೆ ಈ ಉತ್ಸವ ಮೂರು ದಿನಗಳ ಮಟ್ಟಿಗೆ ನಡೆಯುತ್ತಿತ್ತು. ಆದರೆ, ಈ ವರ್ಷ ಕೊರೊನಾದಿಂದಾಗಿ ಕೇವಲ ಒಂದೇ ದಿನ ಹಂಪಿ ಉತ್ಸವ ಆಚರಿಸಲು ನಿರ್ಧರಸಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್, ಈ ಬಾರಿ ಹಂಪಿ ಉತ್ಸವವನ್ನು ನ. 13ರಂದು ಒಂದು ದಿನ ಮಾತ್ರ ನಡೆಸಲು ತೀರ್ಮಾನಿಸಿದೆ. ಈ ಉತ್ಸವವನ್ನು ವಿಜಯನಗರ ಸಾಮ್ರಾಜ್ಯದ ಗತ ವೈಭವವವನ್ನು ಇಂದಿನ ಪೀಳಿಗೆಗೆ ಪರಿಚಯಿಸಲು ಹಮ್ಮಿಕೊಳ್ಳುತ್ತ ಬರುತ್ತಿದೆ. ಈ ಬಾರಿ ಕೊರೊನಾದಿಂದಾಗಿ ಈ ವರ್ಷ ಒಂದೇ ದಿನ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.
ಈ ಬಾರಿ ಒಂದೇ ದಿನ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ವೇದಿಕೆ ಕಾರ್ಯಕ್ರಮಗಳು ಇರುವುದಿಲ್ಲ. ಅಂದು ಸಂಜೆ ಹಂಪಿಯ ಉದ್ದಾನ ವೀರಭದ್ರೇಶ್ವರ ದೇವಸ್ಥಾನದಿಂದ ವೀರೂಪಾಕ್ಷ ದೇವಸ್ಥಾನದ ವರೆಗೆ ಜನಪದ ಕಲಾ ತಂಡಗಳೊಂದಿಗೆ ದೇವರ ಮೂರ್ತಿಯ ಶೊಭಾಯಾತ್ರೆ ನಡೆಯಲಿದೆ.
ಪ್ರತಿ ತಾಲೂಕಿನಿಂದ ಎರಡೆರಡು ಜನಪದ ಕಲಾ ತಂಡಗಳು ಪಾಲ್ಗೋಳ್ಳಲಿವೆ. ಆ ನಂತರ ವಿರೂಪಾಕ್ಷ ದೇವಸ್ಥಾನದ ಹತ್ತಿರ ಹರಿಯುತ್ತಿರುವ ತುಂಗಭದ್ರಾ ನದಿ ತಟದಲ್ಲಿ ತುಂಗಾ ಆರತಿ ನಡೆಯಲಿದೆ.