ಹಾವೇರಿ : ಸಾಲದಿಂದ ನರಳಿದ್ದ ಒಂದೇ ಗ್ರಾಮದ ಇಬ್ಬರು ರೈತರು, ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಈ ಘಟನೆ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ನಿಟ್ಟೂರು ಗ್ರಾಮದಲ್ಲಿ ನಡೆದಿದೆ. ಮೂರು ಎಕರೆ ಜಮೀನು ಹೊಂದಿದ್ದ ಮಂಜಪ್ಪ, ಬ್ಯಾಂಕ್ ಮತ್ತು ಕೈಗಡವೆದು ಸುಮಾರು ರೂ. 8 ಲಕ್ಷ ಸಾಲ ಮಾಡಿಕೊಂಡಿದ್ದರು. ಮೆಕ್ಕೆ ಜೋಳ ಮತ್ತು ಈರುಳ್ಳಿ ಬೆಳೆ ಹಾಳಾಗಿದ್ದಕ್ಕೆ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.  

ಮಹೇಶ್ ಪರಸಳ್ಳಿ(38) ಮತ್ತು ಮಂಜಪ್ಪ ಕರಿಯಪ್ಪನವರ (44) ಆತ್ಮಹತ್ಯೆ ಮಾಡಿಕೊಂಡ ರೈತರು. ಒಂದೂವರೆ ಎಕರೆ ಜಮೀನು ಹೊಂದಿದ್ದ ಮಹೇಶ್, ಬ್ಯಾಂಕ್ ಮತ್ತು ಕೈಗಡವೆಂದು ಸುಮಾರು ರೂ. 4.5 ಲಕ್ಷ ಸಾಲ ಮಾಡಿಕೊಂಡಿದ್ದರು. ಈ ರೈತರು ಮೆಕ್ಕೆಜೋಳ ಮತ್ತು ಈರುಳ್ಳಿ ಬೆಳೆ ಬೆಳೆದಿದ್ದರು. ಬೆಳೆ ಹಾಳಾಗಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. 

ರೈತರ ಮನೆಗೆ ಹಲಗೇರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿದ್ದಾರೆ. 

Leave a Reply

Your email address will not be published. Required fields are marked *

You May Also Like

ವಿಧಾನಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ ಜಾಣತನಕ್ಕೆ ಶಾಸಕ ಎಚ್ಕೆ ಪಾಟೀಲರ ಜಾಣ ಉತ್ತರ

ಸಾರ್ವಜನಿಕ ಲೆಕ್ಕ ಪತ್ರ ಸಮೀತಿ ಅಧ್ಯಕ್ಷ ಎಚ್.ಕೆ.ಪಾಟೀಲ್ ಈಗಾಗಲೇ ವಿಧಾನಸಭಾಧ್ಯಕ್ಷರಿಗೆ ಸಭೆ ನಡೆಸುವ ಕುರಿತು ಪತ್ರ ಬರೆದಿದ್ದರೂ ಅವರ ಆಪ್ತ ಕಾರ್ಯದರ್ಶಿ ಎಷ್ಟು ದಿನವಾದ್ರು ಪತ್ರ ತಲುಪಿರಲಿಲ್ಲ ನಿನ್ನೆಯಷ್ಟೆ ಪತ್ರ ತಲುಪಿದೆ ಎಂದು ಜಾಣತನ ಪ್ರದರ್ಶಿಸಿದ್ದರು.

ವಿದ್ಯುತ್ ನಿಲುಗಡೆ

110 ಕೆವ್ಹಿ ಶಿರಹಟ್ಟಿ ಉಪ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸ ಕೈಗೊಳ್ಳುವುದರಿಂದ ಮಾ.16 ರಂದು ಬೆಳಗ್ಗೆ 10 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಆನ್ ಲೈನ್ ಶಿಕ್ಷಣದ ಬಗ್ಗೆ ನಾಳೆ ಮಹತ್ವದ ಸಭೆ: ಸಚಿವ ಸುರೇಶ್ ಕುಮಾರ್

ಎಲ್ ಕೆಜಿ, ಯುಕೆಜಿ ಆನ್ ಲೈನ್ ಶಿಕ್ಷಣ ಒಳಿತಲ್ಲ. ಪ್ರಾಥಮಿಕ ಮಕ್ಕಳಿಗೂ ಆನ್ ಲೈನ್ ಶಿಕ್ಷಣ ಒಳಿತಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.

ಗದಗ, ಶಿರಹಟ್ಟಿ, ರೋಣ, ಮುಂಡರಗಿ ಸೇರಿ 19ಪಾಸಿಟಿವ್, ಗದಗನಲ್ಲೇ ಅತಿ ಹೆಚ್ಚು

ಗದಗ ಜಿಲ್ಲೆಯಲ್ಲಿ ಇಂದು ಪತ್ತೆಯಾದ ಸೋಂಕಿತರಲ್ಲಿ ಗದಗ ತಾಲೂಕಿನಲ್ಲಿಯೇ ಹೆಚ್ಚು ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.