ರಾಜಕೀಯ ಒಳ ಸಂಚಿನಿಂದಾಗಿ ವಿನಯ್ ಕುಲಕರ್ಣಿಯನ್ನು ವಿಚಾರಣೆಗೊಳಪಡಿಸಲಾಗುತ್ತಿದೆ – ಪಂಚಮಸಾಲಿ ಪೀಠದ ಶ್ರೀ!

ಹುಬ್ಬಳ್ಳಿ : ಜಿಪಂನ ಮಾಜಿ ಸದಸ್ಯ ಯೋಗೇಶ್ ಗೌಡ ಗೌಡರ ಹತ್ಯೆಗೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಇಂದು ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಹೀಗಾಗಿ ಇದಕ್ಕೆ ಹಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಇದಕ್ಕೆ ಲಿಂಗಾಯಿತ ಪಂಚಮ ಸಾಲಿ ಮಠದ ಜಯ ಮೃತ್ಯುಂಜಯ ಶ್ರೀ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರಭಾವಿ ವ್ಯಕ್ತಿಗಳ ಕೈವಾಡ ಇದರಲ್ಲಿ ಇದೆ ಎಂದು ಆರೋಪಿಸಿದ್ದಾರೆ.

ಲಿಂಗಾಯತ ಸಮಾಜದ ಮುಖಂಡರೊಬ್ಬರನ್ನು ಸಿಬಿಐ ಪೋಲಿಸರು ಬಂದಿಸಿರುವುದು ಖಂಡನೀಯ. ಉತ್ತಮ ಕುಟುಂಬದಿಂದ ಬಂದ ವ್ಯಕ್ತಿಯನ್ನು ಏಕಾಏಕಿ ಬಂಧಿಸಿರುವುದು ಸರಿಯಲ್ಲ. ಮೊದಲು ನೊಟೀಸ್ ನೀಡಬೇಕಿತ್ತು. ಈ ನಾಯಕರು ಚುನಾವಣೆಯಲ್ಲಿ ಮಾತ್ರ ಲಿಂಗಾಯತ ಸಮುದಾಯ ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಶ್ರೀಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿನಯ್ ಕುಲಕರ್ಣಿ ಅವರು ಈ ಪ್ರಕರಣದಲ್ಲಿ ಅಪರಾಧಿಯಲ್ಲ. ಹೀಗಾಗಿ ಅವರನ್ನು ವಿಚಾರಣೆಗೊಳಪಡಿಸುವುದು ಸರಿಯಲ್ಲ. ಸಿಎಂ ಈ ವಿಚಾರದಲ್ಲಿ ಸಕಾರಾತ್ಮಕ ನಿರ್ಧಾರ ತೆಗೆದುಕೊಳ್ಳಬೇಕಿದೆ ಎಂದು ಅವರು ಒತ್ತಾಯಿಸಿದ್ದಾರೆ.

ಪಂಚಾಮ ಸಾಲಿ ಮಠ ಹಾಗೂ ನಮ್ಮ ಸಮುದಾಯ ಅವರೊಂದಿಗೆ ಇದೆ. ವಿನಯ್ ಕುಲಕರ್ಣಿ ಅವರ ಬಗ್ಗೆ ಇಡೀ ಜಿಲ್ಲೆಯ ಜನರಿಗೆ ಗೊತ್ತಿದೆ. ರಾಜಕೀಯವಾಗಿ ಹತ್ತಿಕ್ಕಲು ಈ ಪ್ರಯತ್ನ ನಡೆದಿದೆ ಎಂದು ಆರೋಪಿಸಿದ್ದಾರೆ.

Exit mobile version