ಬೆಂಗಳೂರು : ಮಹಾಮಾರಿ ಸೋಂಕಿಗೆ ಬಲಿಯಾಗಿ ಗುಣಮುಖರಾದವರಲ್ಲಿ ಅನಾರೋಗ್ಯ ಕಂಡು ಬರುತ್ತಿದೆ. ಈ ರೀತಿಯ ಬಹುತೇಕ ಜನರಲ್ಲಿ ಕಂಡು ಬಂದಿರುವುದು ಬೆಳಕಿಗೆ ಬರುತ್ತಿದೆ. ಅಲ್ಲದೇ, ಸದ್ಯ ಇಂತಹ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದೆ.

ದೇಹಕ್ಕೆ ಅಂಟಿಕೊಂಡ ಕೊರೊನಾ ಸೋಂಕು ಸಾಮಾನ್ಯವಾಗಿ 7 ರಿಂದ 11 ದಿನಗಳ ನಂತರ ಕಡಿಮೆಯಾಗುತ್ತದೆ ಎಂದು ತಿಳಿದು ಬಂದಿದೆ. ಆದರೆ, ಇದರ ಪರಿಣಾಮ ಮಾತ್ರ 4 ವಾರಗಳಿಂದ 6 ವಾರಗಳವರೆಗೂ ಇರುತ್ತದೆ ಎನ್ನಲಾಗಿದೆ. ಈ ಪರಿಣಾಮದಿಂದಾಗಿ ತೀವ್ರ ಆರೋಗ್ಯ ಸಮಸ್ಯೆ ಕೂಡ ಕಂಡು ಬರುವ ಸಾಧ್ಯತೆ ಇದೆ ಎನ್ನಲಾಗಿದೆ.

ಸೋಂಕು ತಗುಲಿದ ಶೇ. 90ರಷ್ಟು ಜನರಲ್ಲಿ ರೋಗ ನಿರೋಧಕ ಶಕ್ತಿಯಿಂದಲೇ ವೈರಸ್ ತಾನಾಗಿಯೇ ಹೊರ ಹೋಗುತ್ತದೆ. ರೋಗ ನಿರೋಧಕ ಶಕ್ತಿಯ ಆಧಾರದ ಮೇಲೆಯೇ ಕೊರೊನಾ ತೀವ್ರತೆ ಕಾಡುತ್ತದೆ ಎಂದು ತಿಳಿದು ಬಂದಿದೆ.

ಆದರೆ, ಸದ್ಯದ ಮಾಹಿತಿಯಂತೆ ಒಮ್ಮೆ ಸೋಂಕು ಬಂದವರಿಗೆ ಮತ್ತೆ ತಗಲುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ. ಏಕೆಂದರೆ ಸೋಂಕಿನ ವಿರುದ್ಧ ಪ್ರತಿಕಾಯ ಶಕ್ತಿ ಅಧಿಕವಾಗಿರುತ್ತದೆ ಎಂಬುವುದು ಅಧ್ಯಯನದ ಮೂಲಕ ಸಾಬೀತಾಗಿದೆ. ಆದರೆ, ಹಲವು ಪ್ರಕರಣಗಳಲ್ಲಿ ಗುಣಮುಖರಾದವರಿಗೂ ಸೋಂಕು ತಗುಲಿದೆ. ಕಿಡ್ನಿ, ಹೃದಯ, ಸ್ವಾಶಕೋಶ, ಮಧುಮೇಹ ಇರುವವರಲ್ಲಿ ಹೆಚ್ಚಾಗಿ ರೋಗ ಕಾಣಿಸಿಕೊಳ್ಳುತ್ತಿದೆ ಎಂದು ವೈದ್ಯರು ಹೇಳುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ನಕಲಿ ಜಾತಿ ಪ್ರಮಾಣ ಪತ್ರ ಆರೋಪ: ಪಟ್ಟಣ ಪಂಚಾಯ್ತಿ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲು ಜಿಲ್ಲಾಧಿಕಾರಿಗಳಿಗೆ ಮನವಿ

ಸ್ಥಳೀಯ ಪಟ್ಟಣ ಪಂಚಾಯತಿಗೆ 2018 ರ ಚುನಾವಣೆಯಲ್ಲಿ ಎಸ್‌.ಸಿ ಮೀಸಲಿದ್ದ 11ನೇ ವಾರ್ಡನಿಂದ ಆಯ್ಕೆಯಾಗಿರುವ ಬಸವಂತಪ್ಪ ಶಿ. ಹಾರೋಗೇರಿ ಅವರ ಜಾತಿ ಪ್ರಮಾಣ ಪತ್ರ ನಕಲಿ ಇದ್ದು ತನಿಖೆ ನಡೆಸಿ ಪಪಂ ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಪ್ರತಿಸ್ಪರ್ದಿ ಮರಿಯಪ್ಪ ನೀ. ನಡಗೇರಿ ಆಗ್ರಹಿಸಿದರು.

ಕುಣಿಯೊಳಗಿಳಿದು ಸ್ವ್ಯಾಬ್ ಟೆಸ್ಟ್: ಕಥೆಯ ಹಿಂದಿನ ಟ್ವಿಸ್ಟ್

ಕೊರೋನಾ ಕಷ್ಟಕಾಲದಲ್ಲಿ ಕೆಲಸ ಮಾಡುವುದು ಬಹಳಷ್ಟು ಕಷ್ಟದ ಕೆಲಸವಾಗಿದೆ. ಮೃತ ವೃದ್ಧನ ಸ್ವ್ಯಾಬ್ ಟೆಸ್ಟ್ ಮಾಡಿದ ತಪ್ಪಿಗೆ ಲ್ಯಾಬ್ ಟೆಕ್ನಿಷೀಯನ್ ಒಬ್ಬರು ಕುಟುಂಬದಿಂದಲೇ ಬಹಿಷ್ಕಾರಕ್ಕೆ ಒಳಗಾಗುವಂತಾಗಿದೆ. ಮುಖ್ಯವಾಗಿ ಹೆತ್ತ ಮಗನೇ ತಾಯಿಯ ಸಮೀಪಕ್ಕೂ ಬಾರದಂತಾಗಿದೆ.

ಕೆ.ಪಿ.ಎಸ್.ಸಿ ಪರೀಕ್ಷೆ ದಿನಾಂಕ ನಿಗದಿ

ಸಹಾಯಕ/ ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ದಿನಾಂಕ 24-1-21 ರಂದು ನಡೆಯಬೇಕಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಮುಂದೂಡಲಾಗಿರುತ್ತದೆ.

ರೋಣ: ತಾಲೂಕಿನ ಸಮಗ್ರ ಅಭಿವೃದ್ಧಿಗೆ ಒತ್ತಾಯಿಸಿ ಧರಣಿ; ಐಷಾರಾಮಿ ವಾಹನದಲ್ಲಿ ಓಡಾಡುವವರಿಗೆ ನಮ್ಮ ಕಷ್ಟ ಗೊತ್ತಾಗೋದು ಹೇಗೆ?

ಸಾರ್ವಜನಿಕರು ಪ್ರತಿನಿತ್ಯ ಪರದಾಡುತ್ತಿರುವಾಗ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಐಷಾರಾಮಿ ವಾಹನದಲ್ಲಿ ಅಡ್ಡಾಡುತ್ತಿರುವಾಗ ನಮ್ಮಂತವರ ಕಷ್ಟ ನಿಮಗೆ ಹೇಗೆ ಗೊತ್ತಾಗುತ್ತದೆ ಎಂದು ತಾಲೂಕು ದಲಿತ ಸಂಘಟನೆಯ ಮುಖಂಡ ವೀರಪ್ಪ ತೆಗ್ಗಿನಮನಿ ಆಕ್ರೋಶ ವ್ಯಕ್ತಪಡಿಸಿದರು.