ಬೆಂಗಳೂರು : ರಾಜ್ಯದಲ್ಲಿ ಎರಡು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದ ಬೆನ್ನಲ್ಲಿಯೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ತೆರಳಿದ್ದಾರೆ.

2 ಕ್ಷೇತ್ರಗಳ ಫಲಿತಾಂಶ ಬರುವುದಕ್ಕೆ ಇನ್ನೂ ನಾಲ್ಕು ದಿನ ಬಾಕಿ ಇರುವಂತೆ ಕೆಪಿಸಿಸಿ ಅಧ್ಯಕ್ಷರು ಏಕಾ ಏಕಿ ದೆಹಲಿಗೆ ತೆರಳಿರುವುದು ಅಚ್ಚರಿ ಮೂಡಿಸಿದೆ. ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು ಎಂಬ ಹೇಳಿಕೆಗಳ ಕೂಗು ಉಪ ಚುನಾವಣೆ ಸಂದರ್ಭದಲ್ಲಿ ಕೇಳಿ ಬಂದಿದ್ದವು. ಇದು ಹಲವರ ಬೇಸರಕ್ಕೆ ಕಾರಣವಾಗಿತ್ತು. ಹೀಗಾಗಿಯೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ದೆಹಲಿ ಪ್ರವಾಸಕ್ಕೆ ಕಾರಣವಾಗಿರಬಹುದು ಎಂಬ ಸಂಶಯ  ಕೂಡ ರಾಜಕೀಯ ಪಡಸಾಲೆಯಲ್ಲಿ ಕೇಳಿ ಬರುತ್ತಿದೆ. 

ವಿಧಾನಸಭಾ ಚುನಾವಣೆಗೆ ಇನ್ನೂ ಎರಡೂವರೆ ವರ್ಷ ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಸಿಎಂ ಗಾದಿ ಬಗ್ಗೆ ಈಗ ಬಹಿರಂಗ ಹೇಳಿಕೆ ನೀಡದಂತೆ ಸಿದ್ದರಾಮಯ್ಯ ಹಾಗೂ ಅವರ ಬೆಂಬಲಿಗರಿಗೆ ಹೇಳಬೇಕು. ಪಕ್ಷದಲ್ಲಿನ ಸಮನ್ವಯತೆಗೆ ಇಂತಹ ಹೇಳಿಕೆಗಳು ಧಕ್ಕೆ ಉಂಟು ಮಾಡುತ್ತವೆ ಎಂದು ಡಿಕೆಶಿ ಹೇಳಬಹುದು ಎನ್ನಲಾಗುತ್ತಿದೆ. 

Leave a Reply

Your email address will not be published. Required fields are marked *

You May Also Like

ತಂದೆಯ ಮೇಲಿನ ಕೋಪಕ್ಕೆ ಕೆರೆಗೆ ಹಾರಿದ ಮಗ…ಹಿಂದೆಯೇ ಹೋಗಿದ್ದ ಬಾಮೈದ ಕೂಡ ಮರಳಲಿಲ್ಲ!

ಮೈಸೂರು : ಯುವಕನೊಬ್ಬ ನೀರಿನಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನನ್ನು ರಕ್ಷಿಸಲು ಹೋದ, ಬಾಮೈದುನ ಕೂಡ ಸಾವನ್ನಪ್ಪಿರುವ ಘಟನೆ ನಡೆದಿದೆ.

ಯುವ ಘಟಕದ ಅಧ್ಯಕ್ಷರಾಗಿ ಅನಿಲ್ ಸಿದ್ದಮ್ಮನಹಳ್ಳಿ ನೇಮಕ

ಅನಿಲ್ ಕುಮಾರ್ ಸಿದ್ದಮ್ಮನಹಳ್ಳಿ ಅವರನ್ನು ಯುವ ಘಟಕದ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿದ ಪತ್ರವನ್ನು ವಿತರಿಸಲಾಯಿತು.

ನಾಳೆಯಿಂದ ರಾಜ್ಯದಲ್ಲಿ ಏನಿರುತ್ತೆ?-ಏನಿರಲ್ಲ?: ಲಾಕ್ ಡೌನ್ ಸಡಿಲಿಕೆ ನಿಯಮಗಳೇನು?

ಈಗಾಗಲೇ ಕೇಂದ್ರ ಸರ್ಕಾರ ಲಾಕ್ ಡೌನ್ 4 ರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ ಬೆನ್ನಲ್ಲೆ ಇಂದು ಸಂಪುಟ ಸಭೆ ಕರೆದ ಸಿಎಂ ಹಲವು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ. ಇದರಿಂದಾಗಿ ನಾಳೆಯಿಂದ ರಾಜ್ಯದಲ್ಲಿ ಏನೆಲ್ಲ ಆರಂಭವಾಗಲಿವೆ..?

ಅ.25ರಂದು ನೀಲಾನಗರ ದುರ್ಗಾದೇವಿ ಜಾತ್ರೆ ಸರಳವಾಗಿ ಆಚರಣೆ

ಸಮೀಪ ನೀಲಾನಗರದ ದುರ್ಗಾದೇವಿ ಜಾತ್ರೆಯನ್ನು ಸರಳವಾಗಿ ಆಚರಣೆ ಮಾಡಲಾಗುವುದು ಎಂದು ಬಂಜಾರ ಪೀಠಾಧಿಪತಿ ಕುಮಾರ ಮಹಾರಾಜ ತಿಳಿಸಿದರು.