ಚೆನ್ನೈ : ಮೊಬೈಲ್ ಬಳಸುವ ಬಗ್ಗೆ ಬುದ್ಧಿವಾದ ಹೇಳಿದ್ದಕ್ಕೆ 16 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಈ ಘಟನೆ ತಮಿಳುನಾಡಿನ ಮಧುರೈ ಜಿಲ್ಲೆಯಲ್ಲಿ ನಡೆದಿದೆ. ಈ ಬಾಲಕ ಯಾವಾಗಲೂ ಮೊಬೈಲ್ ನಲ್ಲಿಯೇ ಮುಳುಗಿರುತ್ತಿದ್ದ. ಹೀಗಾಗಿ ಪಾಲಕರು ಬುದ್ಧಿವಾದ ಹೇಳಿದ್ದಾರೆ. ಇದಕ್ಕೆ ಕೋಪಗೊಂಡ ಬಾಲಕ ಆತ್ಮಹತ್ಯೆಗೆ ಶರಣಾಗಿದ್ದಾನೆ. 

ಲಾಕ್‍ ಡೌನ್ ಸಂದರ್ಭದಲ್ಲಿ ಈ ಬಾಲಕ ಗೇಮ್ ಆಡುವುದರೊಂದಿಗೆ ಸಮಯ ಕಳೆಯುತ್ತಿದ್ದ. ಹೀಗಾಗಿ ಆತ ಗೇಮ್ ವ್ಯಸನಿಯಾಗಿದ್ದ. ಪೋಷಕರು ಎಷ್ಟೇ ಬುದ್ದಿಯ ಮಾತುಗಳನ್ನು ಹೇಳಿದರೂ ಮೊಬೈಲ್ ನಲ್ಲಿಯೇ ಕಾಲ ಕಳೆಯುತ್ತಿದ್ದ. ಹೀಗಾಗಿ ಪಾಲಕರು ಮೊಬೈಲ್ ಕಸಿದುಕೊಂಡಿದ್ದರು. ಇದರಿಂದಾಗಿ ಬಾಲಕ ಕೋಪಗೊಂಡಿದ್ದ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. 

ಮರಳಿ ಮನೆಗೆ ಬಂದಿದ್ದ ಪಾಲಕರು, ಬಾಲಕನ ಮೃತದೇಹ ಕಂಡು ಆಘಾತಗೊಂಡಿದ್ದಾರೆ. ಆ ನಂತರ ಪುದೂರ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರಾಜಾಜಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದ್ದು, ಬಾಲಕನ ತಂದೆ ನೀಡಿದ ದೂರಿನ ಆಧಾರದ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಹಳ್ಳಿ ಕಡೆಗೆ ಕೊರೋನಾ ನಡಿಗೆ…!

ಬೆಂಗಳೂರು: ಇತ್ತಿಚಿನ ಕೊರೋನಾ ಸೋಂಕಿತರ ಸಂಖ್ಯೆಯನ್ನು ಗಮನಿಸಿದರೆ ಹಳ್ಳಿ ಕಡೆಗೆ ನನ್ನ ನಡಿಗೆ ಎಂದು ಕೊರೋನಾ…

ಸ್ತ್ರೀ ಅವತಾರದಲ್ಲಿ ಮದುವೆ ಮನೆಗೆ ಭೇಟಿ ನೀಡಿದ ಪ್ರಿಯತಮ

ಭಾಡೋಧಿ ಜಿಲ್ಲೆಯ ವ್ಯಕ್ತಿಯೊಬ್ಬ ತನ್ನ ಹುಡುಗಿ ಬೇರೆಯವನೊಂದಿಗೆ ವಿವಾಹವಾಗುತ್ತಿದ್ದ ಸಂದರ್ಭದಲ್ಲಿ ಈತ ಸ್ತ್ರೀ ಅವತಾರದಲ್ಲಿ ತಯಾರಾಗಿ ಗರ್ಲ್ ಫ್ರೆಂಡ್​ ಮನೆಗೆ ಎಂಟ್ರಿ ಕೊಟ್ಟಿದ್ದಾನೆ.

ಲಾಕ್ ಡೌನ್ ನಿಂದಾಗಿ ಸಾಯಿಬಾಬಾ ಮಂದಿರಕ್ಕೆ ಆಗುತ್ತಿರುವ ನಷ್ಟ ಎಷ್ಟು ಗೊತ್ತಾ?

ಕೊರೊನಾ ಸೋಂಕು ನಿಯಂತ್ರಣ ದೃಷ್ಟಿಯಿಂದ ದೇಶವನ್ನು ಲಾಕ್ ಡೌನ್ ಮಾಡಲಾಗಿದ್ದು, ಇದರಿಂದ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಪ್ರತಿದಿನ ನಷ್ಟ ಅನುಭವಿಸುವಂತಾಗಿದೆ.

ದೇಶದಲ್ಲಿಯೂ ಭಯ ಹುಟ್ಟಿಸಲು ಪ್ರಾರಂಭಿಸಿದೆ ಕೊರೊನಾ ಸೋಂಕು!

ಕೊರೊನಾ ಯೋಧರಿಗೂ ಸೋಂಕು ತಗುಲುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ದೇಶಾದ್ಯಂತ ಇಲ್ಲಿಯವರೆಗೂ 548 ವೈದ್ಯರು, ದಾದಿಯರಿಗೆ ಕೊರೊನಾ ತಗುಲಿದ್ದು, ಅವರ ಸಂಪರ್ಕಕ್ಕೆ ಬಂದವರನ್ನು ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ