ತಿರುವನಂತಪುರಂ: ಅಯ್ಯಪ್ಪಸ್ವಾಮಿ ದೇಗುಲ ಶಬರಿಮಲೈಗೆ ಹೋಗುವ ಮುನ್ನ ಭಕ್ತಾದಿಗಳಿಗೆ ಹೊಸ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ.

ಶಬರಿಮಲೈನಲ್ಲಿ ನಡೆಯುವ ಮಂಡಲ-ಮಕರ ಹಾಗೂ ವಿಳಕ್ಕು ವರ್ಷದ ಕಾರ್ಯಕ್ರಮಕ್ಕೆ ತೆರಳುವ ಭಕ್ತಾದಿಗಳ ಆರೋಗ್ಯ ರಕ್ಷಣೆಗಾಗಿ ಹಾಗೂ ಸಾರ್ವಜನಕರ ಗಮನಕ್ಕೆ ಕೇರಳ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ. ಎಲ್ಲಾ ಯತ್ರಾರ್ಥಿಗಳು https://sabarimalaonline.org/ ವೆಬ್ ಸೈಟ್ ನ ಪೋರ್ಟಲ್ ನಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಳ್ಳಬೇಕು.

ಮಾರ್ಗಸೂಚಿಗಳು

  1. ಶಬರಿಮಲೈಗೆ ಭೇಟಿ ನೀಡುವ 48 ಗಂಟೆ ಅವಧಿಯ ಮೊದಲು ಕೋವಿಡ್-19 ನೆಗೆಟಿವ್ ಪ್ರಮಾಣ ಪತ್ರ ಹೊಂದಿರುವುದು ಕಡ್ಡಾಯ.
  2. ಪ್ರವೇಶ ಸ್ಥಳದಲ್ಲಿ Angtigen Test ಅವಕಾಶ ಕಲ್ಪಿಸಲಾಗಿದ್ದು, ಅದರ ವೆಚ್ಚವನ್ನು ಯಾತ್ರಾರ್ಥಿಗಳೇ ಭರಿಸಬೇಕಾಗಿರುತ್ತದೆ.
  3. ಹತ್ತು ವರ್ಷಗಳ ಒಳಪಟ್ಟು ಮತ್ತು 60-65 ವರ್ಷಗಳಿಗೆ ಮೇಲ್ಪಟ್ಟವರಿಗೆ ಹಾಗೂ ಅನಾರೋಗ್ಯದ/ ಕಾಯಿಲೆಯ ಲಕ್ಷಣಗಳು ಇರುವಂತಹವರಿಗೆ ಯಾತ್ರಾ ಪ್ರದೇಶಕ್ಕೆ ಅನುಮತಿ ಇರುವುದಿಲ್ಲ.
  4. ಬಿಪಿಇಲ್ ಕಾರ್ಡ್, ಆಯುಷ್ಮಾನ್ ಕಾರ್ಡ್ ಇತ್ಯಾದಿ ಕಾರ್ಡ್ ಹೊಂದಿರುವವರು ಯಾತ್ರೆಗೆ ತೆರಳುವ ಸಮಯದಲ್ಲಿ ಅದನ್ನು ಹೊಂದಿರಬೇಕು.
  5. ತುಪ್ಪದ ಅಭಿಷೇಕ, ಪಂಪಾ ನದಿ ಸ್ನಾನ, ಸನ್ನಿಧಾನದಲ್ಲಿ ರಾತ್ರಿ ತಂಗುವುದು ಹಾಗೂ ಪಂಪಾ ಮತ್ತು ಗಣಪತಿ ದೇವಸ್ಥಾನ ಅವಕಾಶವಿರುವುದಿಲ್ಲ.
  6. ಯಾತ್ರಾರ್ಥಿಗಳು ಎರುವೆಲು ಮತ್ತು ವೇದಸಾರಿಕ್ಕರ ಮಾರ್ಗದಲ್ಲಿ ಮಾತ್ರ ಪ್ರಯಾಣಿಸಲು ಅವಕಾಶ

ಶಬರಿಮಲೈ ದೇವಾಲಯದ ಇತಿಹಾಸದಲ್ಲೇ ಮೊದಲ ಬಾರಿಗೆ ನ.16ರಿಂದ ಆರಂಭವಾಗುವ ಹಬ್ಬದ ದಿನಗಳಲ್ಲಿ ಎಲ್ಲಾ ಭಕ್ತರನ್ನು ವರ್ಚುವಲ್ ಕ್ಯೂ ವ್ಯವಸ್ಥೆಯ ಮೂಲಕ ನಿಯಂತ್ರಿಸಲಾಗುತ್ತದೆ ಎಂದು ತಿರುಬಂಕೂರು ದೇವಸ್ವಂ ಮಂಡಳಿ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ಶಾಂತಿಯಿಂದ ಹೋಳಿ ಆಚರಿಸಿ

ಯಾರಿಗೂ ತೊಂದರೆಯಾಗದಂತೆ ಹೋಳಿ ಹಬ್ಬವನ್ನು ಆಚರಿಸಬೇಕು. ಹಬ್ಬದ ನೆಪದಲ್ಲಿ, ಸಾವರ್ಜನಿಕ ಸ್ಥಳಗಳಲ್ಲಿ ಅಶ್ಲೀಲ ಬರಹಗಳನ್ನು ಬರೆಯುವುದು, ಶಾಲಾ ಕಾಲೇಜುಗಳ ಗೋಡೆಗಳಿಗೆ ಬಣ್ಣ ಎರೆಚುವುದು ಕಂಡುಬಂದಲ್ಲಿ ಅಥವಾ ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿ ಮಾಡಿದರೆ ಅಂತಹವರ ವಿರುದ್ಧ ಕಠೀಣ ಕ್ರಮ ಕೈಗೊಳ್ಳಲಾಗುವುದು.

ಕೊರೋನಾ: ರಾಜ್ಯದಲ್ಲಿ ಸಾವಿನ ಸಂಖ್ಯೆ 38 ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮಹಾಮಾರಿಗೆ ಬಳ್ಳಾರಿ ಜಿಲ್ಲೆಯಲ್ಲಿ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ‌. ಈ ಮೂಲಕ…

ಗದಗ ಜಿಲ್ಲೆಯಲ್ಲಿ ಬಾರ್ ಗಳ ಮುಂದೆ ಜನವೋ ಜನ

ಒಂದುವರೆ ತಿಂಗಳಿಂದ ಲಾಕ್ ಡೌನ್ ಹಿನ್ನೆಲೆ ಬಾರ್ ಗಳನ್ನು ಬಂದ್ ಮಾಡಲಾಗಿತ್ತು. ಇನ್ನೇನು ಸರ್ಕಾರ ಲಾಕ್ ಡೌನ್ ಸಡಿಲಗೊಳಿಸಿ ಕೆಲವು ನಿಯಮ ವಿಧಿಸಿ ಬಾರ್ ಆರಂಭಿಸಲು ಸರ್ಕಾರ ಅನುಮತಿ ನೀಡಿದ್ದೆ ತಡ ಬಾರ್ ಗಳ ಮುಂದೆ ಜನವೋ ಜನ.

ಹದಗೆಟ್ಟ ಸೊರಟೂರ – ಮುಳಗುಂದ ರಸ್ತೆ: ದಶಕ ಗತಿಸಿದರೂ ದುರಸ್ಥಿ ಭಾಗ್ಯ ಕಾಣದ ರಸ್ತೆ!

ಮುಳಗುಂದ: ಸಮೀಪದ ಸೊರಟೂರ ಗ್ರಾಮದಿಂದ ಮುಳಗುಂದಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಾಕಷ್ಟು ಪ್ರಮಾಣದಲ್ಲಿ ಹಾಳಾಗಿದ್ದು ದುರಸ್ಥಿ ಕಾಮಗಾರಿ ಕೈಗೊಳ್ಳಬೇಕಿದೆ.