ಬೆಂಗಳೂರು : ರಾಜ್ಯದಲ್ಲಿ ಗ್ರಾಪಂಗೆ ಡಿಸೆಂಬರ್ ಸಮಯದಲ್ಲಿ ಚುನಾವಣೆ ನಡೆಯಬೇಕಿತ್ತು. ಆದರೆ, ಸದ್ಯ ಈ ಚುನಾವಣೆಯನ್ನು ಮುಂದೂಡುವ ಸಾಧ್ಯತೆ ಹೆಚ್ಚಾಗಿದೆ ಎನ್ನಲಾಗುತ್ತಿದೆ.

ಪ್ರಸಕ್ತ ಸಾಲಿನ ಗ್ರಾಪಂ ಚುನಾವಣೆಯನ್ನು 2021ರ ಫೆಬ್ರವರಿ ಸಂದರ್ಭದಲ್ಲಿ ನಡೆಸುವ ಸಾಧ್ಯತೆ ದಟ್ಟವಾಗಿದೆ. ಚುನಾವಣೆ ನಡೆಸುವ ಕುರಿತು ಡಾ. ಎಂ.ಕೆ. ಸುದರ್ಶನ್ ನೇತೃತ್ವದ ತಜ್ಞರ ಸಮಿತಿಯು ಸರ್ಕಾರಕ್ಕೆ ವರದಿ ಸಲ್ಲಿಸಿದೆ.

ಡಿಸೆಂಬರ್ ಸಮಯದಲ್ಲಿ ಗ್ರಾಪಂ ಚುನಾವಣೆ ನಡೆಸುವುದರಿಂದಾಗಿ ಗ್ರಾಮೀಣ ಪ್ರದೇಶಗಳಲ್ಲಿಯೂ ಸೋಂಕು ಹೆಚ್ಚಾಗಲು ದಾರಿ ಮಾಡಿ ಕೊಟ್ಟಂತಾಗುತ್ತದೆ. ಒಂದು ವೇಳೆ ಈ ಸಂದರ್ಭದಲ್ಲಿ ಚುನಾವಣೆ ನಡೆಸಿದರೆ, ನಾವೇ ಮನೆ ಬಾಗಿಲುವರೆಗೆ ಸೋಂಕು ತಂದತ್ತಾಗುತ್ತದೆ ಎಂದು ಸಮಿತಿಯ ಸದಸ್ಯರೊಬ್ಬರು ಹೇಳಿದ್ದಾರೆ.
ಡಿಸೆಂಬರ್ ಸಂದರ್ಭದಲ್ಲಿ ಚುನಾವಣೆ ನಡೆಸಬಾರದು ಎಂಬುವುದು ತಜ್ಞರ ಒಟ್ಟಾರೆ ಅಭಿಪ್ರಾಯವಾಗಿದೆ. ಹೀಗಾಗಿ ಫೆಬ್ರವರಿ ಸಮಯಕ್ಕೆ ಇದನ್ನು ಮುಂದೂಡಬೇಕು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಈ ಹಿಂದೆ ನವೆಂಬರ್ ಅಥವಾ ಡಿಸೆಂಬರ್ ಸಮಯದಲ್ಲಿ ಗ್ರಾಪಂ ಚುನಾವಣೆ ನಡೆಸಬೇಕೆಂದು ಸರ್ಕಾರ, ಚುನಾವಣಾ ಆಯೋಗಕ್ಕೆ ತಿಳಿಸಿತ್ತು. ಪ್ರಕರಣ ನ್ಯಾಯಾಲಯದಲ್ಲಿದ್ದು, ಕೋರ್ಟ್ ಮತ್ತು ಆಯೋಗ ಚುನಾವಣಾ ದಿನಾಂಕವನ್ನು ನಿಗದಿ ಪಡಿಸಲಿದೆ, ಆದರೆ ನಾವು ಚುನಾವಣೆಯನ್ನು ಫೆಬ್ರವರಿಗೆ ಮುಂದೂಡುವಂತೆ ಮನವಿ ಮಾಡಿದ್ದೇವೆ ಎಂದು ಸುಧಾಕರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಸಲೂನ್ ಪಾರ್ಲರ್ ಗಳಿಗೆ ಹೋಗುವ ಮುನ್ನ ಈ ಸುಚನೆಗಳನ್ನೊಮ್ಮೆ ಓದಿ..

ಬೆಂಗಳೂರು: ಸರ್ಕಾರದಿಂದ ಅನುಮತಿ ದೊರೆತ ಹಿನ್ನೆಲೆಯಲ್ಲಿ 58 ದಿನ ಬಂದ್ ಆಗಿದ್ದ ನಗರದ ಸಲೂನ್, ಪಾರ್ಲರ್’ಗಳು…

ಸರಿಯಾಗಿ ಕರ್ತವ್ಯ ನಿರ್ವಹಿಸದ ಸೂಪರ್ ಸ್ಪೆಷಾಲಿಟಿ ವೈದ್ಯರುಗಳ ವಿರುದ್ಧ ಕಠಿಣ ಕ್ರಮ – ಡಾ.ಸುಧಾಕರ್

ರಾಯಚೂರು: ಒಪೆಕ್ ಆಸ್ಪತ್ರೆಯನ್ನು ದುಃಸ್ಥಿತಿಯಿಂದ ಮುಕ್ತಗೊಳಿಸಿ ಅದನ್ನು ಗುಣಮಟ್ಟದ ಶ್ರೇಷ್ಠ ಆಸ್ಪತ್ರೆಯಾಗಿ ಪರಿವರ್ತಿಸಲು ಶ್ರಮಿಸುವಂತೆ ವೈದ್ಯಕೀಯ…

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಗುಡ್ ನ್ಯೂಸ್

ಅಂಗನವಾಡಿ ಕಾರ್ಯಕರ್ತರು, ಸಹಾಯಕಿಯರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಶಶಿಕಲಾ ಜೊಲ್ಲೆ ಸಿಹಿಸುದ್ದಿ ನೀಡಿದ್ದು, ಮುಂಬರುವ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯಕರ್ತರು, ಸಹಾಯಕಿಯರ ಗೌರವಧನ ಹೆಚ್ಚಳ ಮಾಡಲು ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಮಗುವಿಗಾಗಿ ಆಹಾರ ಅರಸಿದ ತಾಯಿ..! ಇದು ಮಂಗಗಳ ಮಂಕಿಬಾತ್!

ದೇಶದೊಳಗ ಲಾಕ್ ಡೌನ್ ಶುರುವಾಗಿ 42 ದಿನದ ಹೊತ್ತಾಯಿತು. ಇಂಥಾದ್ರಾಗ, ಬಾಯಿದ್ದ ಮನುಷಾರಾ ಅನ್ನಕ್ಕಾಗಿ ಬಾಯಿ ಬಿಡುವಂಗಾಗೈತಿ. ಪಾಪ ಆ ತಾಯಿ ಹೃದಯ ತನ್ನ ಮಗಿವಿನ ಅನ್ನಕ್ಕಾಗಿ ಎಷ್ಟು ಪರದಾಡ್ತು ಅಂತಿರಿ. ಈ ದೃಷ್ಯ ಎಂಥವರ ಕರಳು ಹಿಂಡುತ್ತೆ..!