ತುಮಕೂರು : ಶಿರಾದಲ್ಲಿ ಉಪಚುನಾವಣೆ ಜರುಗಿದ ಕಾರಣ ಜನದಟ್ಟಣೆ ಉಂಟಾಗಿ ಶೇ. 20ರಷ್ಟು ಜನರಲ್ಲಿ ಸೋಂಕು ಕಂಡು ಬಂದಿದೆ ಎನ್ನಲಾಗುತ್ತಿದೆ.

ಸದ್ಯ ಕೊರೋನಾ ಪಾಸಿಟಿವ್ ಕಂಡು ಬಂದ ಹಿನ್ನೆಲೆಯಲ್ಲಿ ಶಿರಾದಲ್ಲಿ 50 ಮಂದಿ ಐಸೋಲೇಟ್ ನಲ್ಲಿದ್ದಾರೆ. ಸದ್ಯ ಜನರ ಕೊರೊನಾ ಪರೀಕ್ಷೆಗೆ ಒಳಪಡಿಸುವಂತೆ ಸರ್ಕಾರ ಸೂಚಿಸಿತ್ತು.

ಸದ್ಯ 45 ಸಾವಿರ ಜನರು ಕೊರೊನಾ ಪರೀಕ್ಷೆಗೆ ಒಳಪಡಲಿದ್ದಾರೆ. ಇವರೆಲ್ಲ ಚುನಾವಣೆ ಪ್ರಚಾರ ಹಾಗೂ ಸಮಾವೇಶಗಳಲ್ಲಿ ಭಾಗವಹಿಸಿದ್ದರು. ಈ ಪೈಕಿ ಈಗಾಗಲೇ ಶುಕ್ರವಾರ 3,768 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. 35 ಗ್ರಾಪಂ ವ್ಯಾಪ್ತಿಯಲ್ಲಿ ಪರೀಕ್ಷೆ ನಡೆಸಲು 45 ತಂಡ ರಚಿಸಲಾಗಿದೆ.

ಈ ಪ್ರಕ್ರಿಯೆ ನ. 14ರ ವರೆಗೂ ನಡೆಯಲಿದೆ. 135 ಆರೋಗ್ಯ ಅಧಿಕಾರಿಗಳು ಹಾಗೂ ಗ್ರಾಪಂ ಸಿಬ್ಬಂದಿ ಈ ಪ್ರಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ. ಅಲ್ಲದೇ, ತಾಲೂಕು ಕಚೇರಿ ಅಧಿಕಾರಿಗಳನ್ನು ಹಾಗೂ ಪೊಲೀಸ್ ಸಿಬ್ಬಂದಿಯನ್ನು ಈ ಪರೀಕ್ಷೆಗೆ ಒಳಪಡಿಸಲಾಗುವುದು. ಆದರೆ, ತಾಲೂಕು ಕಚೇರಿ ಅಧಿಕಾರಿಗಳ ವರದಿ ನೆಗೆಟಿವ್ ಬಂದಿದೆ.

Leave a Reply

Your email address will not be published. Required fields are marked *

You May Also Like

ಪಂಚಮಸಾಲಿ ಸಮಾಜಕ್ಕೆ 2ಎ ಮಿಸಲಾತಿ ಅವಶ್ಯವಿದೆ: ಮೋಹನ ಮಾಳಿಶೆಟ್ಟಿ

ಪಂಚಮಸಾಲಿ 2ಎ ಮಿಸಲಾತಿಗೆ ಸೇರಿಸಬೇಕು ಎಂದು ಒತ್ತಾಯಿಸಿ ಫೆ.21 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಬೃಹತ್ ಸಮಾವೇಶದಲ್ಲಿ ಜಿಲ್ಲೆಯ ಸಮಾಜದ ಜನರು ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾಧ್ಯಕ್ಷ ಮೋಹನ ಮಾಳಿಶೆಟ್ಟಿ ಹೇಳಿದರು.

ಗದಗ ಜಿಲ್ಲೆಯ ಖಾಕಿ ಖದರ್ ಗೆ ಜನರು ಖುಷ್..!: ಕಳೆದ ವಸ್ತುಗಳು ಕೈಸೇರಿದ್ದಕ್ಕೆ ಜನ್ರು ಖುಷ್ !

ಖಾಕಿ ತನ್ನ ಖದರ್ ತೋರಿಸಿದರೆ ಏನೆಲ್ಲ ಮಾಡಬಹುದು ಎನ್ನುವುದಕ್ಕೆ ಗದಗ ಜಿಲ್ಲೆಯ ಪೊಲೀಸರು ತಾಜಾ ಉದಾಹರಣೆ. ಒಂದು ವರ್ಷದಿಂದ ಜಿಲ್ಲೆಯಲ್ಲಿ ಆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳ್ಳತನ ಜಾಲ ಭೇದಿಸಿ ಕಳ್ಳರ ಹೆಡೆಮುರಿ ಕಟ್ಟಿ ಜನರು ಕಳೆದುಕೊಂಡ ವಸ್ತುಗಳನ್ನು ಮರಳಿಸುವ ಮೂಲಕ ಜಿಲ್ಲಾ ಪೊಲೀಸ್ ಇಂದು ಜನರ ಮೆಚ್ಚುಗೆಗೆ ಪಾತ್ರವಾಯಿತು.

ಮುಖ್ಯಮಂತ್ರಿ ಬಸವರಾಜ ಬೋಮ್ಮಾಯಿ ಮತ್ತು ಶಿವರಾಜ ಕುಮಾರ ಕೆಲವೇ ಕ್ಷಣಗಳಲ್ಲಿ ಜಂಟಿ ಸುದ್ದಿ ಗೋಷ್ಠಿ

ಬೆಂಗಳೂರಿನ ವಿಕ್ರಮ್ ಆಸ್ಪತ್ರೆ ಅವರ ಅಭಿಮಾನಿಗಳು ದೌಡು ಹೆಚ್ಚಿನ ಪೊಲೀಸ್ ಬೀಗಿ ಬಂದೋಬಸ್ತ ಮಾಡಲಾಗಿದ್ದು .ರಾಜ್ಯಾದ್ಯಂತ ಅವರ ಅಭಿಮಾನಿಗಳು ಬೇಗ ಗುಣಮುಖರಾಗಿ ಅಪ್ಪು ಬರಲಿ ಎಂದು ಪ್ರಾರ್ಥನೆ ಮಾಡುತ್ತಿರುವ ಬೆನ್ನಲ್ಲೆ ಕೆಲವೇ ಕ್ಷಣದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಸಿಎಂ ಮಾತನಾಡಲಿದ್ದಾರೆ. ಅಸ್ಪತ್ರೆಯತ್ತ ಚಿತ್ರರಂಗದ ಗಣ್ಯರು ,ರಾಜಕೀಯ ಮುಖಂಡರು ಚಿತ್ರರಂಗದ ಚಟುವಟಿಕೆಗಳನ್ನು ಬದಿಗೊತ್ತಿ ಎಲ್ಲರೂ ವಿಕ್ರಮ್ ಆಸ್ಪತ್ರೆಯತ್ತ ಬರುತ್ತಿದ್ದು ಕ್ಷಣಕ್ಷಣಕ್ಕೂ ಪುನೀತ್ ರಾಜಕುಮಾರ ಅವರ ಆರೋಗ್ಯ