ಹೊಳೆ ಆಲೂರು: ಇಲ್ಲಿನ ಮಲಪ್ರಭ ನದಿಯಲ್ಲಿ ಮೊಸಳೆ ಮೃತದೇಹ ಪತ್ತೆಯಾಗಿದೆ. ಕಳೆದ ಎರಡು ದಿನಗಳ ಹಿಂದೆ ಗದಗ ಜಿಲ್ಲೆ ಹೊಳೆಯಾಲೂರು ಗ್ರಾಮದಲ್ಲಿ ಮೊಸಳೆ ಪತ್ತೆಯಾಗಿತ್ತು. ಇದರಿಂದ ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿತ್ತು. ಇನ್ನು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಕೂಡ ಭೇಟಿ ನೀಡಿದ್ದರು. ನದಿ ದಡಕ್ಕೆ ಹೋಗದಂತೆ ಗ್ರಾಮ ಪಂಚಾಯತಿ ವತಿಯಿಂದ ಡಂಗುರ ಸಾರಲಾಗಿತ್ತು. ಆದರೆ ಇಂದು ಅದೇ ಸ್ಥಳದಲ್ಲಿ ಮೊಸಳೆಯ ಮೃತದೇಹ ಪತ್ತೆಯಾಗಿದ್ದು, ಬುಧುವಾರ ಇಲ್ಲಿ ಕಾಣಿಸಿಕೊಂಡ ಮೊಸಳೆ ಸಾವನ್ನಪ್ಪಿದಾಗಿರಬಹುದು ಎನ್ನಲಾಗಿದೆ.

ಹೊಳೆ ಆಲೂರು ಗ್ರಾಮದ ಮಲಪ್ರಭ ನದಿ ದಡದಲ್ಲಿ ಪತ್ತೆಯಾದ ಮೊಸಳೆ ಮೃತದೇಹವನ್ನು ಅರಣ್ಯ ಇಲಾಖೆ ಸಿಬ್ಬಂದಿ ಹಾಗು ಗ್ರಾಮಸ್ಥರು ಹೊರತೆಗೆದರು. ಆದರೆ ಇತ್ತಿಚೆಗೆ ಜನರ ಕಣ್ಣಿಗೆ ಬಿದ್ದ ಮೊಸಳೆ ಇದೆನಾ? ಎನ್ನುವ ಚರ್ಚೆ ಒಂದೆಡೆಯಾಗಿದೆ. ಇನ್ನು ಮತ್ತೊಂದೆಡೆ ಮೊಸಳೆ ಸಾವಿನ ಬಗೆಗೆ ಹತ್ತು ಹಲವು ಅನುಮಾನಗಳು ಮೂಡಿವೆ. ಮೊಸಳೆಯ ಶವ ಪರೀಕ್ಷೆ ನಂತರ  ಈ ಬಗ್ಗೆ ನಿಖರ ಕಾರಣ ಗೊತ್ತಾಗಬೇಕಿದೆ.

Leave a Reply

Your email address will not be published. Required fields are marked *

You May Also Like

ಗದಗ ಜಿಪಂ ಅಧ್ಯಕ್ಷರಾಗಿ ರಾಜೂಗೌಡ ಪಾಟೀಲ್ ಅವಿರೋಧ ಆಯ್ಕೆ

ಗದಗ: ಜಿಲ್ಲಾ ಪಂಚಾಯತಿಯ ಅಧ್ಯಕ್ಷರಾಗಿ ರಾಜೂಗೌಡ ಕೆಂಚನಗೌಡ್ರ (ಪಾಟೀಲ) ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಜಿ.ಪಂ.…

ಬಿಜೆಪಿ ಸರಕಾರ ಬರಲು ಶ್ರಮಿಸಿ: ಮಾಜಿ ಶಾಸಕ‌ ಪ್ರತಾಪಗೌಡ ಕರೆ

ಮಸ್ಕಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಮತ್ತೆ ಅಧಿಕಾರಕ್ಕೆ‌‌ ಬರುವುದಕ್ಕೆ ಕಾರ್ಯಕರ್ತರು ಶ್ರಮಿಸಬೇಕೆಂದು‌ ಮಾಜಿ‌‌…

ಫೇಸ್ ಬುಕ್ ಗೆಳೆಯನೊಂದಿಗೆ ಓಡಿ ಹೋದ ರಾಜಕೀಯ ಮುಖಂಡನ ಪತ್ನಿ!

ಲಕ್ನೋ : ರಾಜಕೀಯ ಮುಖಂಡರೊಬ್ಬರ ಪತ್ನಿ ಫೇಸ್‍ ಬುಕ್ ಗೆಳೆಯನ ಜೊತೆ ಓಡಿ ಹೋಗಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹ ನಗರದ ಕೊತವಾಲಿಯಲ್ಲಿ ನಡೆದಿದೆ.

ಗದಗ ಜಿಲ್ಲೆಯಲ್ಲಿ ಮತ್ತೆ ಮೂಡಿವೆ ಬಲ್ದೋಟ ಹೆಜ್ಜೆ.! : ಕಪ್ಪತ್ತಗುಡ್ಡಕ್ಕೆ ಕನ್ನಹಾಕಲು ನಡೆದಿದೆಯಾ ಯತ್ನ..?

ಇನ್ನೇನು ಕಪ್ಪತ್ತಗುಡ್ಡ ಸಂರಕ್ಷಿತ ಅರಣ್ಯ ಪ್ರದೇಶ ಜೊತೆಗೆ ವನ್ಯಧಾಮ ಆಯಿತಲ್ಲ ಬಲ್ದೋಟ ಕಾಟ ತಪ್ಪಿತು ಅಂತ ಗದಗ ಜಿಲ್ಲೆಯ ಪರಿಸರ ಪ್ರೇಮಿಗಳು ಹಾಗೂ ಜೀವಪರ ಮನಸುಗಳು ಕೊಂಚ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದರು. ಆದರೆ ಇದೀಗ ಮತ್ತೆ ಜಿಲ್ಲೆಯಲ್ಲಿ ಬಲ್ದೋಟ ಹೆಜ್ಜೆ ಮೂಡಿವೆ.