ಹೊಳೆ ಆಲೂರು: ಇಲ್ಲಿನ ಮಲಪ್ರಭ ನದಿಯಲ್ಲಿ ಮೊಸಳೆ ಮೃತದೇಹ ಪತ್ತೆಯಾಗಿದೆ. ಕಳೆದ ಎರಡು ದಿನಗಳ ಹಿಂದೆ ಗದಗ ಜಿಲ್ಲೆ ಹೊಳೆಯಾಲೂರು ಗ್ರಾಮದಲ್ಲಿ ಮೊಸಳೆ ಪತ್ತೆಯಾಗಿತ್ತು. ಇದರಿಂದ ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿತ್ತು. ಇನ್ನು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಕೂಡ ಭೇಟಿ ನೀಡಿದ್ದರು. ನದಿ ದಡಕ್ಕೆ ಹೋಗದಂತೆ ಗ್ರಾಮ ಪಂಚಾಯತಿ ವತಿಯಿಂದ ಡಂಗುರ ಸಾರಲಾಗಿತ್ತು. ಆದರೆ ಇಂದು ಅದೇ ಸ್ಥಳದಲ್ಲಿ ಮೊಸಳೆಯ ಮೃತದೇಹ ಪತ್ತೆಯಾಗಿದ್ದು, ಬುಧುವಾರ ಇಲ್ಲಿ ಕಾಣಿಸಿಕೊಂಡ ಮೊಸಳೆ ಸಾವನ್ನಪ್ಪಿದಾಗಿರಬಹುದು ಎನ್ನಲಾಗಿದೆ.

ಹೊಳೆ ಆಲೂರು ಗ್ರಾಮದ ಮಲಪ್ರಭ ನದಿ ದಡದಲ್ಲಿ ಪತ್ತೆಯಾದ ಮೊಸಳೆ ಮೃತದೇಹವನ್ನು ಅರಣ್ಯ ಇಲಾಖೆ ಸಿಬ್ಬಂದಿ ಹಾಗು ಗ್ರಾಮಸ್ಥರು ಹೊರತೆಗೆದರು. ಆದರೆ ಇತ್ತಿಚೆಗೆ ಜನರ ಕಣ್ಣಿಗೆ ಬಿದ್ದ ಮೊಸಳೆ ಇದೆನಾ? ಎನ್ನುವ ಚರ್ಚೆ ಒಂದೆಡೆಯಾಗಿದೆ. ಇನ್ನು ಮತ್ತೊಂದೆಡೆ ಮೊಸಳೆ ಸಾವಿನ ಬಗೆಗೆ ಹತ್ತು ಹಲವು ಅನುಮಾನಗಳು ಮೂಡಿವೆ. ಮೊಸಳೆಯ ಶವ ಪರೀಕ್ಷೆ ನಂತರ  ಈ ಬಗ್ಗೆ ನಿಖರ ಕಾರಣ ಗೊತ್ತಾಗಬೇಕಿದೆ.

Leave a Reply

Your email address will not be published. Required fields are marked *

You May Also Like

ಬಿಜೆಪಿಯಲ್ಲಿನ ರಾಜಕೀಯ ಮೇಲಾಟಕ್ಕೆ ಕಾರಣವಾಗುತ್ತಾ ಶೀಕರಣಿ ಊಟ!

ಎರಡ್ಮೂರು ದಿನಗಳಿಂದ ಈಗಾಗಲೇ ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿಯಲ್ಲಿ ನಾಯಕತ್ವದ ಪ್ರಶ್ನೆ ಎದುರಾಗಿದೆ. ಈಗಾಗಲೇ ಕೆಲವು ಅತೃಪ್ತ ಶಾಸಕರು ನೀಡುತ್ತಿರುವ ಹೇಳಿಕೆಯಿಂದಾಗಿ ಸದ್ಯ ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವಂತಿದೆ.

ಇಬ್ರಾಹಿಂ ಸುತಾರ ಅವರಿಗೆ ಶ್ರದ್ಧಾಂಜಲಿ

ಮುಳಗುಂದ : ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಕನ್ನಡದ ಕಬೀರ ಎಂದೆ ಖ್ಯಾತರಾಗಿದ್ದ ಇಬ್ರಾಹಿಂ ಸುತಾರ ಅವರು…

ಡಾಂಬರೀಕರಣಕ್ಕೆ ಶಾಸಕ ರಾಮಣ್ಣ ಚಾಲನೆ

ಲಕ್ಷ್ಮೇಶ್ವರ: ಪಟ್ಟಣದಲ್ಲಿ ಹಾದು ಹೋಗುವ ಕಾರವಾರ-ಇಳಕಲ್ ರಾಜ್ಯ ಹೆದ್ದಾರಿ 06 ರಲ್ಲಿ ಮಳೆಯಿಂದ ಹಾನಿಗೀಡಾದ ಸುಮಾರು…

ವಾರಂಟಿಯೇ ಇಲ್ಲದ ಮೇಲೆ ಗ್ಯಾರಂಟಿ ಹೇಗೆ ?
ಕಾಂಗೈ ಕಾಡ್೯ ಠುಸ್ಸು ಪರಸ್ಥಿತಿ ಈಗ ಬಲು ದುಸ್ಥಿತಿ ಸಿ.ಟಿ.ರವಿ ವ್ಯಂಗ್ಯ

ಆಲಮಟ್ಟಿ: ಕಾಂಗ್ರೆಸ್ ಪಕ್ಷ ರಾಜ್ಯದ ಜನತೆಗೆ ಭರಪೂರ ಸುಳ್ಳು ಭರವಸೆ ನೀಡುತ್ತಿದ್ದು, ಆ ಪಕ್ಷದ ವಾರಂಟಿಯೇ…