ಶಿರಹಟ್ಟಿ: ಸ್ಥಳೀಯ ಪಟ್ಟಣ ಪಂಚಾಯ್ತಿ ಚುನಾವಣೆ ನಡೆದು 23 ತಿಂಗಳ ನಂತರ ಶನಿವಾರ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಎರಡು ಸ್ಥಾನಗಳು ಅವಿರೋಧವಾಗಿ ಆಯ್ಕೆಯಾದವು.
ಅಧ್ಯಕ್ಷ ಸ್ಥಾನ ಬ ವರ್ಗಕ್ಕೆ ಮೀಸಲಿದ್ದು, ಸ್ಪಷ್ಟ ಬಹುಮತ ಪಡೆದ ಕಾಂಗ್ರೇಸ್ ಪಕ್ಷದಿಂದ ಅಧ್ಯಕ್ಷ ಸ್ಥಾನಕ್ಕೆ ಪರಮೇಶ ಪರಬ ಒಬ್ಬರೆ ನಾಮಪತ್ರ ಸಲ್ಲಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಮಹಮ್ಮದ ಇಸಾಕ್ ಆದ್ರಳ್ಳಿ ಹಾಗೂ ದೇವಪ್ಪ ಆಡೂರು ಇಬ್ಬರು ಸದಸ್ಯರು ನಾಮಪತ್ರ ಸಲ್ಲಿಸಿದ್ದರು.
ಕೊನೆಗೆ ದೇವಪ್ಪ ಆಡೂರು ತಮ್ಮ ನಾಮಪತ್ರ ಹಿಂಪಡೆದಿದ್ದರಿಂದ ಉಪಾಧ್ಯಕ್ಷ ಸ್ಥಾನವನ್ನು ಸಹ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಪರಮೇಶ ಪರಬ ಹಾಗೂ ಉಪಾಧ್ಯಕ್ಷರಾಗಿ ಮಹಮ್ಮದ್ ಇಸಾಕ್ ಆದ್ರಳ್ಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣೆ ಅಧಿಕಾರಿಯಾಗಿದ್ದ ತಹಶೀಲ್ದಾರ ಯಲ್ಲಪ್ಪ ಗೊಣೆಣ್ಣವರ ಘೋಷಿಸಿದರು.
ನೂತನವಾಗಿ ಆಯ್ಕೆಯಾದ ಅಧ್ಯಕ್ಷ-ಉಪಾಧ್ಯಕ್ಷರಿಗೆ ಪಕ್ಷದ ಮುಖಂಡರು, ಅಭಿಮಾನಿಗಳು, ಕಾರ್ಯಕರ್ತರು ಶುಭ ಕೊರಿದರು.
ನೂತನ ಅಧ್ಯಕ್ಷ ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೇಯಲ್ಲಿ ಪಪಂ ಮುಖ್ಯಾಧಿಕಾರಿ ಮಲ್ಲೇಶ.ಬಿ, ನಿಲೇಶ ಹಾದಿಮನಿ, ಸಿದ್ದಮ್ಮ, ಹನುಮಂತ ಕಂಠೆಮ್ಮನವರ, ಜಮೀರ್ ಮನಿಯಾರ, ಪ್ರವಿಣ ಮೊಹರೆಕರ, ಸಿಪಿಐ ವಿಕಾಸ ಲಮಾಣಿ ನೇತೃತ್ವದಲ್ಲಿ ಪಿಎಸ್ಐ ಸುನೀಲ್ ಕುಮಾರ ನಾಯಕ್ ಹಾಗೂ ಶಿವಯೋಗಿ ಲೋಹಾರ ಬಂದೊಬಸ್ತ್ ಒದಗಿಸಿದರು.
1 comment
ಉತ್ತಮವಾದ ಜನಪ್ರತಿನಿಧಿಗಳು ????????