ಶಿರಹಟ್ಟಿ: ಸ್ಥಳೀಯ ಪಟ್ಟಣ ಪಂಚಾಯ್ತಿ ಚುನಾವಣೆ ನಡೆದು 23 ತಿಂಗಳ ನಂತರ ಶನಿವಾರ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಎರಡು ಸ್ಥಾನಗಳು ಅವಿರೋಧವಾಗಿ ಆಯ್ಕೆಯಾದವು.

ಅಧ್ಯಕ್ಷ ಸ್ಥಾನ ಬ ವರ್ಗಕ್ಕೆ ಮೀಸಲಿದ್ದು, ಸ್ಪಷ್ಟ ಬಹುಮತ ಪಡೆದ ಕಾಂಗ್ರೇಸ್ ಪಕ್ಷದಿಂದ ಅಧ್ಯಕ್ಷ ಸ್ಥಾನಕ್ಕೆ ಪರಮೇಶ ಪರಬ ಒಬ್ಬರೆ ನಾಮಪತ್ರ ಸಲ್ಲಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಮಹಮ್ಮದ ಇಸಾಕ್ ಆದ್ರಳ್ಳಿ ಹಾಗೂ ದೇವಪ್ಪ ಆಡೂರು ಇಬ್ಬರು ಸದಸ್ಯರು ನಾಮಪತ್ರ ಸಲ್ಲಿಸಿದ್ದರು.

ಕೊನೆಗೆ ದೇವಪ್ಪ ಆಡೂರು ತಮ್ಮ ನಾಮಪತ್ರ ಹಿಂಪಡೆದಿದ್ದರಿಂದ ಉಪಾಧ್ಯಕ್ಷ ಸ್ಥಾನವನ್ನು ಸಹ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಪರಮೇಶ ಪರಬ ಹಾಗೂ ಉಪಾಧ್ಯಕ್ಷರಾಗಿ ಮಹಮ್ಮದ್ ಇಸಾಕ್ ಆದ್ರಳ್ಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣೆ ಅಧಿಕಾರಿಯಾಗಿದ್ದ ತಹಶೀಲ್ದಾರ ಯಲ್ಲಪ್ಪ ಗೊಣೆಣ್ಣವರ ಘೋಷಿಸಿದರು.

ನೂತನವಾಗಿ ಆಯ್ಕೆಯಾದ ಅಧ್ಯಕ್ಷ-ಉಪಾಧ್ಯಕ್ಷರಿಗೆ ಪಕ್ಷದ ಮುಖಂಡರು, ಅಭಿಮಾನಿಗಳು, ಕಾರ್ಯಕರ್ತರು ಶುಭ ಕೊರಿದರು.

ನೂತನ ಅಧ್ಯಕ್ಷ ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೇಯಲ್ಲಿ ಪಪಂ ಮುಖ್ಯಾಧಿಕಾರಿ ಮಲ್ಲೇಶ.ಬಿ, ನಿಲೇಶ ಹಾದಿಮನಿ, ಸಿದ್ದಮ್ಮ, ಹನುಮಂತ ಕಂಠೆಮ್ಮನವರ, ಜಮೀರ್ ಮನಿಯಾರ, ಪ್ರವಿಣ ಮೊಹರೆಕರ, ಸಿಪಿಐ ವಿಕಾಸ ಲಮಾಣಿ ನೇತೃತ್ವದಲ್ಲಿ ಪಿಎಸ್ಐ ಸುನೀಲ್ ಕುಮಾರ ನಾಯಕ್ ಹಾಗೂ ಶಿವಯೋಗಿ ಲೋಹಾರ ಬಂದೊಬಸ್ತ್ ಒದಗಿಸಿದರು.

1 comment
Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 5324 ಕೊರೊನಾ ಪಾಸಿಟಿವ್, ಯಾವ ಜಿಲ್ಲೆಯಲ್ಲಿ ಎಷ್ಟು?

ರಾಜ್ಯದಲ್ಲಿಂದು 5324 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 101465 ಕ್ಕೆ ಏರಿಕೆಯಾದಂತಾಗಿದೆ.

ಗದಗ ನಲ್ಲಿ ಇಂದು ಪ್ರಜಾ ಧ್ವನಿಯಾತ್ರೆಯ ಸಮಾವೇಶಕ್ಕೆ ಸಕಲ ಸಿದ್ದತೆ..

ಉತ್ತರಪ್ರಭ ಗದಗ: ಇಂದು ನಗರದ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಆಯೋಜಿಸಿರುವ ಪ್ರಜಾ ಧ್ವನಿಯಾತ್ರೆಯು ಮಾಜಿ…

ಹರ್ಷ ಕೊಲೆ ಖಂಡಿಸಿ ನಿಡಗುಂದಿಯಲ್ಲಿ ಪ್ರತಿಭಟನೆ: ಮನವಿ ಅರ್ಪಣೆ

ನಿಡಗುಂದಿ (ವಿಜಯಪುರ ಜಿಲ್ಲೆ): ಶಿವಮೊಗ್ಗದಲ್ಲಿ ನಡೆದ ಹರ್ಷ ಝಿಂಗಾಡೆ ಕೊಲೆ ಖಂಡಿಸಿ ಭಾವಸಾರ ಕ್ಷತ್ರೀಯ ಸಮಾಜದ…

ಜಿಲ್ಲಾದ್ಯಂತ ಶೇಕಡ 38.98 ಮತದಾನ: ಮದ್ಯಾಹ್ನ 1ಗಂಟೆವರೆಗಿನ ವಿವರ

ಗದಗ ಜಿಲ್ಲೆ ವಿಧಾನಸಭಾ ಚುನಾವಣೆ ಮತದಾನ ವಿವರ ಮಧ್ಯಾಹ್ನ 1=00 ಗಂಟೆಯವರೆಗೆ ಶೇಕಡಾವಾರು ಮತದಾನ ಇಂತಿದೆ.…