ಬೆಳಗಾವಿ : ನಾಡ ಪಿಸ್ತೂಲ್ ಸಮೇತ ಮೂರು ಜೀವಂತ ಗುಂಡುಗಳು ಸುಕ್ಕಿರುವ ಘಟನೆ ಖಾನಾಪೂರ ತಾಲೂಕಿನ ಉಚ್ಚವಡೆ ಕ್ರಾಸ್ ಬಳಿ ನಡೆದಿದೆ.

ಇವುಗಳನ್ನು ಇಟ್ಟುಕೊಂಡು ನಿಂತಿದ್ದ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಕಾರು ಹಾಗೂ ಬೈಕ್ ಗಳನ್ನು ನಿಲ್ಲಿಸಿಕೊಂಡು ಯುವಕರು ನಿಂತಿದ್ದರು. ಈ ಯುವಕರ ತಂಡ ಪೊಲೀಸರರನ್ನು ನೋಡತ್ತಲೇ ಓಡಿ ಹೋಗಿದ್ದಾರೆ. ಇದನ್ನು ನೋಡಿ ಸಂಶಯಗೊಂಡ ಪೊಲೀಸರು ಚೇಸ್ ಮಾಡಿ ಅವರನ್ನು ಬಂಧಿಸಿದ್ದಾರೆ.

ಖಾನಾಪುರ ಠಾಣೆ ಇನ್ಸಪೆಕ್ಟರ್ ಸುರೇಶ ಶಿಂಗಿ ಅವರು ಈ ಪ್ರಕರಣ ಬೇಧಿಸಿದ್ದಾರೆ. ಈ ಪ್ರಕರಣದಲ್ಲಿ ಮೂವರು ತಪ್ಪಿಸಿಕೊಂಡಿದ್ದಾರೆ. ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನ ಚಂದಗಡ ತಾಲೂಕಿನ ಕಾಲಕುಂದ್ರಿಯ ತುಳಸಿದಾಸ ಜೋಶಿ, ವಡಗಾಂವಿಯ ಸತೀಶ ಅಲಿಯಾಸ್ ಸಿದ್ದಪ್ಪಾ ಡವಳೆ, ಧಾರವಾಡ ಜಿಲ್ಲೆಯ ಅಣ್ಣಿಗೇರಿಯ ಉಮೇಶ ಬಿಳೆಯಲಿ ಹಾಗೂ ಗದಗ ಜಿಲ್ಲೆಯ ಅಂತೂರ – ಬೆಂತೂರಿನ ಗುರುವಯ್ಯಾ ಲಗಮಯ್ಯನವರ ಎಂದು ಗುರುತಿಸಲಾಗಿದೆ.

ಈ ಬಂಧಿತರಿಂದ ಪೊಲೀಸರು ಸೆಮಿ ಆಟೋಮೆಟಿಕ್ ನಾಡ ಪಿಸ್ತೂಲ್, ಮೂರು ಜೀವಂತ ಗುಂಡುಗಳು, ಮೊಬೈಲ್ ಹಾಗೂ ರೂ. 34 ಸಾವಿರ ಹಣ, ಕಾರು ಸೇರಿದಂತೆ ಎರಡು ಬೈಕ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಖಾನಾಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಪುಟ್ಟ ಕಂದಮ್ಮಳ ಮೇಲೆ ಪಾಪಿ ಪೊಲೀಸ್ ಈ ಕೃತ್ಯ ಎಸಗಿದನೇ?

ರಾಯ್ಪುರ : ಕಂದಮ್ಮನ ಮೇಲೆ ಪಾಪಿ ಪೊಲೀಸ್ ಒಬ್ಬ ಸಿಗರೇಟ್ ನಿಂದ ಸುಟ್ಟು ಚಿತ್ರ ಹಿಂಸೆ ನೀಡಿರುವ ಘಟನೆ ಬೆಳಕಿಗೆ ಬಂದಿದೆ.

ಮೇ. 17ರ ನಂತರ ಲಾಕ್ ಡೌನ್ ಸ್ಥಿತಿ ಹೇಗಿರಲಿದೆ?

ಬೆಂಗಳೂರು: ಮೂರನೇ ಹಂತದ ಲಾಕ್ ಡೌನ್ ಮುಗಿಯಲು ಇನ್ನೂ 7 ದಿನಗಳು ಬಾಕಿ ಇವೆ. ಈ…

ತಾಯಿಯನ್ನು ಜೀವಂತವಾಗಿಯೇ ಹೂತಿದ್ದ ಪಾಪಿ ಮಗ!

ಪಾಪಿ ಮಗನೊಬ್ಬ ತನ್ನ 79 ವರ್ಷದ ತನ್ನ ತಾಯಿಯನ್ನು ಜೀವಂತವಾಗಿಯೇ ಸಮಾಧಿ ಮಾಡಿರುವ ಘಟನೆ ನಡೆದಿದೆ.

ಬಿಹಾರ ಸಮರ – ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ!

ಪಾಟ್ನಾ : ಬಿಹಾರ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯು ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಪ್ರಣಾಳಿಕೆಯಲ್ಲಿ ಎಲ್ಲರಿಗೂ ಉಚಿತ ವೈರಸ್ ಲಸಿಕೆ ನೀಡುವ ಭರವಸೆ ನೀಡಿದೆ.