ಬೆಂಗಳೂರು : ರಾಜ್ಯದಲ್ಲಿ ರಾಜಾಜೇಶ್ವರಿ ನಗರ ಹಾಗೂ ಶಿರಾ ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ನಾಳೆಗೆ ಫಲಿತಾಂಶ ಪ್ರಕಟವಾಗಲಿದೆ. ಹೀಗಾಗಿ ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ ಮಧ್ಯೆರಾತ್ರಿಯವರೆಗೂ ನಿಷೇಧಾದಜ್ಞೆ ಜಾರಿಗೊಳಿಸಲಾಗಿದೆ.

ಬಿಜೆಪಿಯ ಮುನಿರತ್ನ, ಕಾಂಗ್ರೆಸ್‍ ನ ಕುಸುಮಾ ಹಾಗೂ ಜೆಡಿಎಸ್‍ ನ ಕೃಷ್ಣಮೂರ್ತಿ ಅವರ ನಡುವೆ ರಾಜರಾಜೇಸ್ವರಿ ನಗರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಜ್ಞಾನಾಕ್ಷಿ ವಿದ್ಯಾನಿಕೇತನ ಶಾಲೆಯಲ್ಲಿ ಮತ ಏಣಿಕೆ ನಡೆಯಲಿದೆ. ನಾಳೆ ಬೆಳಿಗ್ಗೆ 6 ರಿಂದ ಮಧ್ಯರಾತ್ರಿಯವರೆಗೂ ಕ್ಷೇತ್ರ ವ್ಯಾಪಿ ನಿಷೇಧಾಜ್ಞೆ ಹೇರಲಾಗಿದೆ. ಮದ್ಯ ಮಾರಾಟಕ್ಕೂ ನಿರ್ಬಂಧ ಹಾಕಲಾಗಿದೆ. ಪೊಲೀಸರ ಹದ್ದಿನ ಕಣ್ಣಿನಲ್ಲಿ ಮತ ಎಣಿಕೆ ನಡೆಯಲಿದೆ.

ರಾಜರಾಜೇಶ್ವರಿ ನಗರದಲ್ಲಿ 16 ಜನ ಅಭ್ಯರ್ಥಿಗಳು ಕಣದಲ್ಲಿ ಇದ್ದಾರೆ. ಕ್ಷೇತ್ರದಲ್ಲಿ 412 ಅಂಚೆ ಹಾಗೂ 04 ಇಟಿಪಿಬಿಎಸ್ ಸೇರಿದಂತೆ 2,09,828 ಮತ ಚಲಾವಣೆ ಆಗಿದೆ. ನಾಳೆ ಬೆಳಿಗ್ಗೆ 8 ಗಂಟೆಯಿಂದ ಎಣಿಕೆ ಪ್ರಾರಂಭವಾಗಲಿದ್ದು, ಮೊದಲು ಅಂಚೆ ಹಾಗೂ ಇಟಿಪಿಬಿಎಸ್ ಮತಗಳನ್ನ ಎಣಿಕೆ ಹಾಕಲಾಗುವುದು. ಇವಿಎಂ ಮತ ಎಣಿಕೆ ಬೆಳಗ್ಗೆ 8.30 ಕ್ಕೆ ಪ್ರಾರಂಭವಾಗಲಿದೆ. ಒಟ್ಟು 25 ಸುತ್ತಿನ ಮತ ಎಣಿಕೆ ನಡೆಯಲಿದೆ.

Leave a Reply

Your email address will not be published. Required fields are marked *

You May Also Like

ಕೈಗೆ ಸಿಕ್ಕ ಅಧಿಕಾರಿಗೆ ಟ್ರ‍್ಯಾಕ್ಟರ್ ನಲ್ಲಿ ರಸ್ತೆ ದರ್ಶನ: ಕೆಲವು ತಿಂಗಳಕ್ ಕಿತ್ತು ಹೋಗೈತ್ಯಂತ ದೊಡ್ಡೂರು ರಸ್ತೆ!

ಹೇಳಿ, ಹೇಳಿ ಸಾಕಾಗಿ ಹೋಯ್ತು. ಕಾಮಗಾರಿ ಮುಗಿದ್ ಒಂದ್ ತಿಂಗಳದಾಗ ಮಾಡಿದ್ ರೋಡ್ ಹಳ್ಳಾ ಹಿಡಿದೈತಿ. ಬರ್ರಿ.. ನೀವಾರಾ ನೋಡ್ ಬರ್ರಿ.., ಕೆಲ್ಸಾ ಮಾಡಿದ್ ಗುತ್ತಿಗೆದಾರರಾದ್ರು ಯಾರು? ಹಿಂಗೆಲ್ಲ ಹೇಳಿ ಅಧಿಯಾರಿಯೊಬ್ಬರನ್ನು ತರಾಟೆಗೆ ತೆಗೆದುಕೊಂಡ ಘಟನೆ ಲಕ್ಷ್ಮೇಶ್ವರದಲ್ಲಿ ನಡೆಯಿತು.

ಎಮ್.ಎಲ್.ಎ ಸಾಹೇಬರೆ ಮಾಸ್ಕ್ ಹಾಕ್ಕೊಳ್ಳಿ ಪ್ಲೀಸ್..!

ಶಾಸಕರಾಗಿ ಜನರ ಆರೋಗ್ಯದ ಬಗ್ಗೆ ಇಷ್ಟೊಂದು ಕಾಳಜಿ ವಹಿಸಿದರಲ್ಲ ಎನ್ನುವುದು ನಿಜವಾಗಿಯೂ ಪ್ರಶಂಸನೀಯವೇ. ಆದರೆ ಯಾವುದನ್ನು ಪಾಲನೆ ಮಾಡುವ ಕುರಿತು ಶಾಸಕರು ಮಾತನಾಡುತ್ತಿದ್ದರೋ ಅದನ್ನೇ ಶಾಸಕರು ಮರೆತಿದ್ದರು.

ವಿಶ್ವ ಜಾನಪದ ದಿನ ಆಚರಣೆ: ಜಾನಪದ ಸಂರಕ್ಷಣೆ ಹಾಗೂ ಸಂವರ್ಧನೆ ಅಗತ್ಯ.

ಬೀದರ: ಜಾನಪದ ಜನ ಕೇಂದ್ರಿತ ಮೌಲ್ಯಗಳ ನಿದಿಯಾಗಿದ್ದು ಇದನ್ನು ಬಗೆದಷ್ಟು ದೇಶಿಯತೆ ಅನಾವರಣಗೊಳ್ಳುವುದು ಎಂದು ಕರ್ನಾಟಕ…

ಆಶಾ ಕಾರ್ಯಕರ್ತೆಯರ ಸಹಕಾರ ಸಂಘ ಸ್ಥಾಪನೆಗೆ ಸೂಚನೆ

ರಾಜ್ಯದಲ್ಲಿ 40 ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ನೀಡಲು 3 ಸಾವಿರ ರೂ.ಗಳ ಪ್ರೋತ್ಸಾಹ ಧನ ನೀಡಲಾಗಿದೆ.