ಬೆಂಗಳೂರು: ಚಂದನವನದ ಸ್ಟಾರ್ಗಳು ಕರಾಟೆ ಕಿಂಗ್ ಶಂಕರ್ ನಾಗ್ ಅವರನ್ನು ನೆನಪು ಮಾಡಿಕೊಂಡಿದ್ದಾರೆ.

ನಟ ಶಂಕರ್ ನಾಗ್ ಅವರು ಚಂದನವನದಲ್ಲಿ ತಮ್ಮದೆಯಾದ ಛಾಪು ಮೂಡಿಸಿ, ಮಿಂಚಿನಂತೆ ಮರೆಯಾಗಿದ್ದಾರೆ. ಕನ್ನಡ ಸಿನಿಮಾ ಜಗತ್ತಿನಲ್ಲಿ ಅವರ ವಿಭಿನ್ನ ಪ್ರಯತ್ನ, ಸಾಮಾಜಿಕ ಕಳಕಳಿ ಜನರನ್ನು ಅಭಿಮಾನಿಯಾಗುವಂತೆ ಮಾಡಿದ್ದವು.

ಇಂದು ಶಂಕರ್ ನಾಗ್ ಅವರ 66ನೇ ಹುಟ್ಟುಹಬ್ಬವಾಗಿದ್ದು, ಇಡೀ ಸ್ಯಾಂಡಲ್ವುಜಡ್ನಮ ನಟ, ನಟಿಯರು ನೆನೆಯುತ್ತಿದ್ದಾರೆ. ನವರಸ ನಾಯಕ ಜಗ್ಗೇಶ್, ಕಿಚ್ಚ ಸುದೀಪ್, ರಚಿತಾ ರಾಮ್, ಡಾಲಿ ಧನಂಜಯ್ ಸೇರಿದಂತೆ ಬಹುತೇಕ ನಟರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ.

ಆಟೋ ರಾಜ ಶಂಕರ್ ಎಂದರೆ ಕನ್ನಡ ನಾಡಿನಲ್ಲಿ ಎಲ್ಲಿಲ್ಲದ ಪ್ರೀತಿ. ಶಂಕರ್ ನಾಗ್ ಹುಟ್ಟು ಹಬ್ಬದಂದು ಅವರ ಅಭಿಮಾನಿಗಳು ವಿವಿಧ ರೀತಿಯ ಸಾಮಾಜಿಕ ಕೆಲಸಗಳ ಮೂಲಕವೇ ಶುಭಾಶಯ ಕೋರುತ್ತಿದ್ದಾರೆ. ಇಂತಹ ನಟನ ಹುಟ್ಟು ಹಬ್ಬಕ್ಕೆ ಸೆಲೆಬ್ರಿಟಿಗಳು ಸೇರಿದಂತೆ ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ.

ದರ್ಶನ್ ಲೆಜೆಂಡ್ ಆ್ಯಕ್ಟರ್ ಗೆ ಶುಭ ಕೋರಿದ್ದು, ಟ್ವೀಟ್ ಮಾಡಿದ್ದಾರೆ. ನಿಜವಾದ ಲೆಜೆಂಡ್ಗೆ ಯಾವತ್ತೂ ಸಾವಿಲ್ಲ. ಅವರು ಕನ್ನಡಿಗರ ಹೃದಯ ಸಾಮ್ರಾಜ್ಯದಲ್ಲಿ ಯಾವಾಗಲೂ ಎವರ್ ಗ್ರೀನ್ ಆಗಿಯೇ ಉಳಿದಿದ್ದಾರೆ. ಹ್ಯಾಪಿ ಬರ್ತ್ ಡೇ ಶಂಕರಣ್ಣ, ನಾವು ಯಾವಗಲೂ ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತೇವೆ ಎಂದು ಬರೆದಿದ್ದಾರೆ.

Leave a Reply

Your email address will not be published. Required fields are marked *

You May Also Like

ನನ್ನ ಹುಟ್ಟು ಹಬ್ಬದ ಸಂಭ್ರಮಕ್ಕಿಂತ ನಿಮ್ಮ ಆರೋಗ್ಯ ಮುಖ್ಯ!!

ಬೆಂಗಳೂರು : ಕೊರೊನಾ ಮಹಾಮಾರಿಯಿಂದಾಗಿ ಹಲವು ಸೆಲೆಬ್ರಿಟಿಗಳು ತಮ್ಮ ಹುಟ್ಟು ಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿಲ್ಲ. ಅಲ್ಲದೇ,…

ಪ್ರೇಮಕಥೆಯ ಸಲಿಗೆ ಸಿಂಗಲ್ ಸಾಂಗ್ ಚಂದನ್ ಶೆಟ್ಟಿ ಡ್ಯಾನ್ಸ್

ಬೆಂಗಳೂರು: ಪ್ರೇಮಿಯೊಬ್ಬ ಪ್ರೀತಿಯಿಂದ ಆಗ ಬದಲಾವಣೆಯನ್ನು ಚಂದನ್ ಶೆಟ್ಟಿ ಲವ್ ಸಾಂಗ್ ಒಂದರಲ್ಲಿ ಬಿಂಬಿಸಿದ್ದಾರೆ. ಈ ಮೂಲಕ ಆಲ್ಬಂ ಸಾಂಗ್ ನಲ್ಲಿ ಚಂದನ್ ಶೆಟ್ಟಿ ಹೊಸ ಪ್ರಯೋಗ ಮಾಡಿದ್ದಾರೆ. ಸಲಿಗೆ ಹೆಸರಿನ ಸಿಂಗಲ್ ಆಲ್ಬಂ ಅನ್ನು ಚಂದನ್ ಶೆಟ್ಟಿ ಮೇ 28 ರಂದು ಬಿಡುಗಡೆ ಮಾಡಿದ್ದಾರೆ. ಕೆನಡಾದಲ್ಲಿ ಚಿತ್ರೀಕರಿಸಿದ ಹಾಡನ್ನು ತಾವೇ ಶೂಟ್ ಮಾಡಿದ್ದಲ್ಲದೇ ಚೆನ್ನಾಗಿ ನೃತ್ಯ ಮಾಡಿದ್ದಾರೆ ಚಂದನ್ ಶೆಟ್ಟಿ.

ಜೊತೆ ಜೊತೆಯಲಿ ನಿರ್ದೇಶಕ ಆಸ್ಪತ್ರೆಗೆ ದಾಖಲು

ಜನಪ್ರಿಯ ಟಿವಿ ಧಾರಾವಾಹಿ ಜೊತೆ ಜೊತೆಯಲಿ ನಿರ್ದೇಶಕ ಆರೂರು ಜಗದೀಶ್ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಅವರನ್ನು ಕಳೆದ ಒಂದು ವಾರದಿಂದ ಜಗದೀಶ್ ಮಣಿಪಾಲದ

ಪೊಲೀಸರಿಗೆ ಸಿಕ್ಕ ನಟ ಸುಶಾಂತ್ ಸಿಂಗ್ ಒಪ್ಪಂದಗಳ ಪ್ರತಿಗಳು!

ನವದೆಹಲಿ: ನಟ ಸುಶಾಂತ್ ಸಿಂಗ್ ಜೊತೆ ಒಪ್ಪಂದ ಮಾಡಿಕೊಂಡಿರುವ ಪ್ರತಿಗಳನ್ನು ಯಶ್ ರಾಜ್ ಫಿಲ್ಮ್ಸ್ (ವೈಆರ್…