ಬೆಂಗಳೂರು: ಚಂದನವನದ ಸ್ಟಾರ್ಗಳು ಕರಾಟೆ ಕಿಂಗ್ ಶಂಕರ್ ನಾಗ್ ಅವರನ್ನು ನೆನಪು ಮಾಡಿಕೊಂಡಿದ್ದಾರೆ.

ನಟ ಶಂಕರ್ ನಾಗ್ ಅವರು ಚಂದನವನದಲ್ಲಿ ತಮ್ಮದೆಯಾದ ಛಾಪು ಮೂಡಿಸಿ, ಮಿಂಚಿನಂತೆ ಮರೆಯಾಗಿದ್ದಾರೆ. ಕನ್ನಡ ಸಿನಿಮಾ ಜಗತ್ತಿನಲ್ಲಿ ಅವರ ವಿಭಿನ್ನ ಪ್ರಯತ್ನ, ಸಾಮಾಜಿಕ ಕಳಕಳಿ ಜನರನ್ನು ಅಭಿಮಾನಿಯಾಗುವಂತೆ ಮಾಡಿದ್ದವು.

ಇಂದು ಶಂಕರ್ ನಾಗ್ ಅವರ 66ನೇ ಹುಟ್ಟುಹಬ್ಬವಾಗಿದ್ದು, ಇಡೀ ಸ್ಯಾಂಡಲ್ವುಜಡ್ನಮ ನಟ, ನಟಿಯರು ನೆನೆಯುತ್ತಿದ್ದಾರೆ. ನವರಸ ನಾಯಕ ಜಗ್ಗೇಶ್, ಕಿಚ್ಚ ಸುದೀಪ್, ರಚಿತಾ ರಾಮ್, ಡಾಲಿ ಧನಂಜಯ್ ಸೇರಿದಂತೆ ಬಹುತೇಕ ನಟರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ.

ಆಟೋ ರಾಜ ಶಂಕರ್ ಎಂದರೆ ಕನ್ನಡ ನಾಡಿನಲ್ಲಿ ಎಲ್ಲಿಲ್ಲದ ಪ್ರೀತಿ. ಶಂಕರ್ ನಾಗ್ ಹುಟ್ಟು ಹಬ್ಬದಂದು ಅವರ ಅಭಿಮಾನಿಗಳು ವಿವಿಧ ರೀತಿಯ ಸಾಮಾಜಿಕ ಕೆಲಸಗಳ ಮೂಲಕವೇ ಶುಭಾಶಯ ಕೋರುತ್ತಿದ್ದಾರೆ. ಇಂತಹ ನಟನ ಹುಟ್ಟು ಹಬ್ಬಕ್ಕೆ ಸೆಲೆಬ್ರಿಟಿಗಳು ಸೇರಿದಂತೆ ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ.

ದರ್ಶನ್ ಲೆಜೆಂಡ್ ಆ್ಯಕ್ಟರ್ ಗೆ ಶುಭ ಕೋರಿದ್ದು, ಟ್ವೀಟ್ ಮಾಡಿದ್ದಾರೆ. ನಿಜವಾದ ಲೆಜೆಂಡ್ಗೆ ಯಾವತ್ತೂ ಸಾವಿಲ್ಲ. ಅವರು ಕನ್ನಡಿಗರ ಹೃದಯ ಸಾಮ್ರಾಜ್ಯದಲ್ಲಿ ಯಾವಾಗಲೂ ಎವರ್ ಗ್ರೀನ್ ಆಗಿಯೇ ಉಳಿದಿದ್ದಾರೆ. ಹ್ಯಾಪಿ ಬರ್ತ್ ಡೇ ಶಂಕರಣ್ಣ, ನಾವು ಯಾವಗಲೂ ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತೇವೆ ಎಂದು ಬರೆದಿದ್ದಾರೆ.

Leave a Reply

Your email address will not be published. Required fields are marked *

You May Also Like

ಅಟ್ಲಾಂಟಾ ಫಿಲಂ ಫೆಸ್ಟಿವಲ್ ಗೆ ಬರಗೂರರ ಅಮೃತಮತಿ ಆಯ್ಕೆ

ಇಂಚರ ಪುಟ್ಟಣ್ಣ ಪ್ರೊಡಕ್ಷನ್ಸ್‌ನ ಪುಟ್ಟಣ್ಣ ನಿರ್ಮಿಸಿ, ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ‘ಅಮೃತಮತಿ’ ಕನ್ನಡ ಚಿತ್ರ ಅಟ್ಲಾಂಟಾ ಫಿಲಂ ಫೆಸ್ಟಿವಲ್ ಗೆ ಆಯ್ಕೆಯಾಗಿದೆ.

ಹಾಡು ನಿಲ್ಲಿಸಿದ ಸಾವಿರಾರು ಹಾಡುಗಳ ಸರದಾರ ಎಸ್ಪಿಬಿ

ಎದೆ ತುಂಬಿ ಹಾಡುವ ಮೂಲಕ ಜನರ ಮನಗೆದ್ದು ಲಕ್ಷಾಂತರ ಜನರ ಹೃದಯದಲ್ಲಿ ಚಿರಸ್ಥಾಯಿಯಾಗಿ ಉಳಿದವರು ಎಸ್.ಪಿ.ಬಾಲಸುಬ್ರಹ್ಮಣ್ಯಂ. ಎಸ್ಪಿಬಿ ಹಾಡು ಯಾರಿಗೆ ಇಷ್ಟವಿಲ್ಲ ಹೇಳಿ. ಆ ಹೆಸರಲ್ಲಿಯೇ ಒಂದು ಕಂಠವಿದೆ, ರೋಮಾಂಚನವಿದೆ. ಆಕರ್ಶಣೆ ಇದೆ. ಆದರೆ ಇಂದು ತೀವ್ರ ಇಂದು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಸುಬ್ರಹ್ಮಣ್ಯಂ ಇನ್ನಿಲ್ಲ ಎನ್ನುವುದು ಅರಗಿಸಿಕೊಳ್ಳುವುದು ಕಷ್ಟಸಾಧ್ಯವಾಗಿದೆ.

ಅಭಿಮಾನಿಗಳ ಹೆಸರಿಗಾಗಿ ಸೋಶಿಯಲ್ ಮಿಡಿಯಾ ಮೊರೆಹೋದ ಡಿಂಪಲ್ ನಟಿ

ಬೆಂಗಳೂರು: “ಅಭಿಮಾನಿಗಳೇ ದೇವರು” ಎಂದ ಅಣ್ಣಾವ್ರ ಮಾತು ಅಕ್ಷರಶಃ ಸತ್ಯ, ಪ್ರತಿದಿನ ಎಷ್ಟೋ ಅಭಿಮಾನಿಗಳು ಸೋಷಿಯಲ್…

ಮಹಾರಾಷ್ಟ್ರದಲ್ಲಿ ಸಿಲುಕಿದ್ದ ಕನ್ನಡಿಗನ್ನು ರಕ್ಷಿಸಿದ ನಟ!

ಕೊರೊನಾ ಲಾಕ್ ಡೌನ್ ನಿಂದಾಗಿ ಮಹಾರಾಷ್ಟ್ರದಲ್ಲಿ ಸಿಲುಕಿದ್ದ ಕರ್ನಾಟಕದ ನೂರಾರು ವಲಸೆ ಕಾರ್ಮಿಕರಿಗೆ ಅವರ ಊರುಗಳಿಗೆ ತಲುಪಿಸಲು ಬಾಲಿವುಡ್ ನಟ ಸೋನು ಸೂದ್ ಮುಖ್ಯ ಪಾತ್ರ ವಹಿಸಿದ್ದರು.