ಬೆಂಗಳೂರು: ಚಂದನವನದ ಸ್ಟಾರ್ಗಳು ಕರಾಟೆ ಕಿಂಗ್ ಶಂಕರ್ ನಾಗ್ ಅವರನ್ನು ನೆನಪು ಮಾಡಿಕೊಂಡಿದ್ದಾರೆ.

ನಟ ಶಂಕರ್ ನಾಗ್ ಅವರು ಚಂದನವನದಲ್ಲಿ ತಮ್ಮದೆಯಾದ ಛಾಪು ಮೂಡಿಸಿ, ಮಿಂಚಿನಂತೆ ಮರೆಯಾಗಿದ್ದಾರೆ. ಕನ್ನಡ ಸಿನಿಮಾ ಜಗತ್ತಿನಲ್ಲಿ ಅವರ ವಿಭಿನ್ನ ಪ್ರಯತ್ನ, ಸಾಮಾಜಿಕ ಕಳಕಳಿ ಜನರನ್ನು ಅಭಿಮಾನಿಯಾಗುವಂತೆ ಮಾಡಿದ್ದವು.

ಇಂದು ಶಂಕರ್ ನಾಗ್ ಅವರ 66ನೇ ಹುಟ್ಟುಹಬ್ಬವಾಗಿದ್ದು, ಇಡೀ ಸ್ಯಾಂಡಲ್ವುಜಡ್ನಮ ನಟ, ನಟಿಯರು ನೆನೆಯುತ್ತಿದ್ದಾರೆ. ನವರಸ ನಾಯಕ ಜಗ್ಗೇಶ್, ಕಿಚ್ಚ ಸುದೀಪ್, ರಚಿತಾ ರಾಮ್, ಡಾಲಿ ಧನಂಜಯ್ ಸೇರಿದಂತೆ ಬಹುತೇಕ ನಟರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ.

ಆಟೋ ರಾಜ ಶಂಕರ್ ಎಂದರೆ ಕನ್ನಡ ನಾಡಿನಲ್ಲಿ ಎಲ್ಲಿಲ್ಲದ ಪ್ರೀತಿ. ಶಂಕರ್ ನಾಗ್ ಹುಟ್ಟು ಹಬ್ಬದಂದು ಅವರ ಅಭಿಮಾನಿಗಳು ವಿವಿಧ ರೀತಿಯ ಸಾಮಾಜಿಕ ಕೆಲಸಗಳ ಮೂಲಕವೇ ಶುಭಾಶಯ ಕೋರುತ್ತಿದ್ದಾರೆ. ಇಂತಹ ನಟನ ಹುಟ್ಟು ಹಬ್ಬಕ್ಕೆ ಸೆಲೆಬ್ರಿಟಿಗಳು ಸೇರಿದಂತೆ ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ.

ದರ್ಶನ್ ಲೆಜೆಂಡ್ ಆ್ಯಕ್ಟರ್ ಗೆ ಶುಭ ಕೋರಿದ್ದು, ಟ್ವೀಟ್ ಮಾಡಿದ್ದಾರೆ. ನಿಜವಾದ ಲೆಜೆಂಡ್ಗೆ ಯಾವತ್ತೂ ಸಾವಿಲ್ಲ. ಅವರು ಕನ್ನಡಿಗರ ಹೃದಯ ಸಾಮ್ರಾಜ್ಯದಲ್ಲಿ ಯಾವಾಗಲೂ ಎವರ್ ಗ್ರೀನ್ ಆಗಿಯೇ ಉಳಿದಿದ್ದಾರೆ. ಹ್ಯಾಪಿ ಬರ್ತ್ ಡೇ ಶಂಕರಣ್ಣ, ನಾವು ಯಾವಗಲೂ ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತೇವೆ ಎಂದು ಬರೆದಿದ್ದಾರೆ.

Leave a Reply

Your email address will not be published. Required fields are marked *

You May Also Like

ಟಾಲಿವುಡ್ ಅಂಗಳದಲ್ಲಿ ಮೆರೆಯಲಿದ್ದಾರೆ ಕಿಚ್ಚ ಸುದೀಪ್

ಕಿಚ್ಚ ಸುದೀಪ್ ಅವರನ್ನು ಟಾಲಿವುಡ್ ಅಂಗಳಕ್ಕೆ ಕರೆ ತರುವ ಮಾತುಗಳು ಮುನ್ನೆಲೆಗೆ ಬಂದಿದೆ.

ಕನ್ನಡ ಚಿತ್ರ ರಂಗದ ಹಿರಿಯ ಕಲಾವಿದ ಹುಲಿವಾನ್ ಗಂಗಾಧರಯ್ಯ ನಿಧನ!

ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಹುಲಿವಾನ್ ಗಂಗಾಧರಯ್ಯ (70) ನಿಧನ ಹೊಂದಿದ್ದಾರೆ. ನಿನ್ನೆ ರಾತ್ರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ನಿಖಿಲ್ ಕುಮಾರಸ್ವಾಮಿ ವಿವಾಹ: ಪಾಸ್ ನೀಡಿದ ವಾಹನಗಳ ವಿವರಣೆ ಕೇಳಿದ ಕೋರ್ಟ್..!

ದೇಶಾದ್ಯಂತ ಲಾಕ್ ಡೌನ್ ಮದ್ಯೆಯೂ ನಟ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ವಿವಾಹ ಇತ್ತಿಚೆಗಷ್ಟೆ ನಡೆದಿತ್ತು. ವಿವಾಹ ಸಂದರ್ಭದಲ್ಲಿ ಎಷ್ಟು ವಾಹನಗಳಿಗೆ ಪಾಸ್ ನೀಡಲಾಗಿತ್ತು ಎನ್ನುವ ಬಗ್ಗೆ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.

ಹರ್ನಾಜ್ ಕೌರ್ ಸಂಧು 2021ರ ನೂತನ ವಿಶ್ವ ಸುಂದರಿ!

ಉತ್ತರಪ್ರಭ ದೆಹಲಿ: 2021ರ 70ನೇ ಆವೃತ್ತಿಯ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತದ ಹರ್ನಾಜ್ ಕೌರ್ ಸಂಧು…