ಹೈದರಾಬಾದ್ : ನಟ ಚಿರಂಜೀವಿ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ನಾನು ಆಚಾರ್ಯ ಸಿನಿಮಾ ಚಿತ್ರೀಕರಣ ಪ್ರಾರಂಭಿಸುವುದಕ್ಕೂ ಮುನ್ನ ಕೊರೊನಾ ಟೆಸ್ಟ್ ಗೆ ಒಳಗಾದೆ, ಈ ಸಂದರ್ಭದಲ್ಲಿ ನನಗೆ ಕೊರೊನಾ ಪಾಸಿಟಿವ್ ಬಂದಿರುವುದು ದೃಢವಾಗಿದೆ. ಆದರೆ, ಯಾವುದೇ ರೀತಿಯ ರೋಗದ ಲಕ್ಷಣಗಳು ಕಂಡು ಬಂದಿಲ್ಲ. ಈ ನಿಟ್ಟಿನಲ್ಲಿ ನಾನು ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದೇನೆ ಎಂದು ಹೇಳಿದ್ದಾರೆ.

ಕೊರೊನಾ ಬಂದ ಹಿನ್ನೆಲೆಯಲ್ಲಿ ಕಳೆದ 5 ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕೂಡಲೇ ಟೆಸ್ಟ್ ಗೆ ಒಳಗಾಗಬೇಕು. ನನ್ನ ಆರೋಗ್ಯದ ಸ್ಥಿತಿಯ ಬಗ್ಗೆ ನಿಮಗೆ ಶೀಘ್ರವೇ ತಿಳಿಸುತ್ತೇನೆ ಎಂದು ಬರೆದಿದ್ದಾರೆ.
ಆಚಾರ್ಯ ಸಿನಿಮಾ ಶೂಟಿಂಗ್ ಇಂದಿನಿಂದ ಆರಂಭವಾಗಿದ್ದು, ಚಿರಂಜೀವಿ ಹಾಗೂ ಕೊರಟಾಲ ಶಿವ ತಮ್ಮ ಭಾಗದ ಚಿತ್ರೀಕರಣಕ್ಕೆ ಹಾಜರಾಗಿದ್ದರು. ಕೊರೊನಾ ನಿಯಮದಂತೆ ಚಿತ್ರ ತಂಡದ ಎಲ್ಲ ಸದಸ್ಯರಿಗೆ ಪರೀಕ್ಷೆ ಮಾಡಲಾಗಿದ್ದು, ಈ ಸಂದರ್ಭದಲ್ಲಿ ಚಿರಂಜೀವಿ ಅವರಿಗೆ ಪಾಸಿಟಿವ್ ವರದಿ ಬಂದಿದೆ.

ಲಾಕ್ ಡೌನ್ ನಿಂದಾಗಿ ಆಚಾರ್ಯ ಸಿನಿಮಾ ಚಿತ್ರೀಕರಣ ಹಲವು ದಿನಗಳಿಂದ ಸ್ಥಗಿತವಾಗಿತ್ತು. ಸದ್ಯ ಮತ್ತೆ ಆರಂಭವಾಗಿದೆ. ಚಿತ್ರೀಕರಣವನ್ನು ಹೈದರಾಬಾದ್ ನಲ್ಲಿ ನಡೆಸಲು ತಯಾರಿ ನಡೆದಿತ್ತು.

Leave a Reply

Your email address will not be published. Required fields are marked *

You May Also Like

ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಯ ಮೇಲಿನ ದಾಳಿ ಬಗ್ಗೆ ಸಿಸಿಬಿ ಹೇಳಿದ್ದೇನು?

ಬೆಂಗಳೂರು : ನಗರದಲ್ಲಿನ ಡಿಜೆ ಹಳ್ಳಿ ಹಾಗೂ ಕೆಜೆ ಹಳ್ಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಮಧ್ಯಂತರ ಚಾರ್ಜ್‌ ಶೀಟ್‌ ಸಲ್ಲಿಸಿದ್ದಾರೆ.

ಗದಗ ಬೆಟಗೇರಿ ನಗರಸಭೆ ಸಾರ್ವತ್ರಿಕ ಚುನಾವಣೆ ಅಂತಿಮವಾಗಿ ಚುನಾವಣಾ ಕಣದಲ್ಲುಳಿದ ಅಭ್ಯರ್ಥಿಗಳ ಹಾಗೂ ಚಿಹ್ನೆ ಹಂಚಿಕೆ ವಾರ್ಡವಾರು ವಿವರ

ಗದಗ :ಗದಗ-ಬೆಟಗೇರಿ ನಗರಸಭೆ ಸಾರ್ವತ್ರಿಕ ಚುನಾವಣೆಗೆ ಅಂತಿಮವಾಗಿ  ಕಣದಲ್ಲಿ ಉಳಿದ ಅಭ್ಯರ್ಥಿಗಳ ವಿವರ ಇಂತಿದೆ: ವಾರ್ಡ…

ರಾಷ್ಟ್ರೀಯ ವಿಜ್ಞಾನ ದಿನಾಚರಣೆ

20ನೇ ಶತಮಾನದ ದೀರ್ಘಕಾಲಿಕ ವೈಜ್ಞಾನಿಕ ತಪಸ್ಸಿನಿಂದ ಹೊರಬಂದ ಅಮೂಲ್ಯ ಫಲಗಳು ರಾಮನ್ ಪರಿಣಾಮ ಹಾಗೂ ಸಾಪೇಕ್ಷವಾದ ರಾಮನ್ ಪರಿಣಾಮ ವಿಶ್ವದ ರಹಸ್ಯವನ್ನು ಬೇಧಿಸಿ ಮುಂದಿನ ಎಲ್ಲಾ ವೈಜ್ಞಾನಿಕ ಪ್ರಗತಿಗೆ ಸರಿಯಾದ ದಿಕ್ಕು ತೋರಿಸಿದ ಭೌತವಿಜ್ಞಾನಿ ಆಲ್ಬರ್ಟ್ ಐನ್ಸ್ಟೀನ್ ಹಾಗೆಯೇ ನಿಸರ್ಗದ ರಹಸ್ಯವನ್ನು ಬಯಲು ಮಾಡಿದ ನಮ್ಮ ದೇಶದ ಹಿರಿಮೆ-ಗರಿಮೆಗಳನ್ನು ಜಗತ್ತಿನ ಉತ್ತುಂಗ ಶಿಬಿರದಲ್ಲಿ ನಿಲ್ಲಿಸಿದ

ಭಟ್ಕಳದಲ್ಲಿ ಈಗ ಕೊರೊನಾದ್ದೇ ಆಟ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಒಂದೇ ದಿನ ಬರೋಬ್ಬರಿ 12 ಕೊರೊನಾ ಕೇಸ್ ಗಳು ಪತ್ತೆಯಾಗಿವೆ. ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಗೆ ಹೋಗಿದ್ದ ಕುಟುಂಬ ಸೋಂಕಿಗೆ ಬಲಿಯಾಗಿದ್ದು, ಇಡೀ ಜಿಲ್ಲೆಯ ಜನರೇ ಬೆಚ್ಚಿ ಬೀಳುವಂತೆ ಮಾಡಿದೆ.