ಬೆಂಗಳೂರು: ಇತ್ತಿಚೆಗೆ ಕೆಲವು ದಿನಗಳಿಂದ ಡ್ರಗ್ಸ್ ವಿಷಯ ರಾಜ್ಯದಲ್ಲಿ ಬಹಳಷ್ಟು ಚರ್ಚೆಗೆ ಗ್ರಾಸವಾಗಿದೆ. ಚಿತ್ರ ನಟಿಯ ಡ್ರಗ್ಸ್ ಜಾಲದ ಬೆನ್ನಲ್ಲೆ ಈಗ ಜನಪ್ರತಿನಿಧಿಗಳ ಪುತ್ರರೀಗೂ ಈ ನಂಟು ವ್ಯಾಪಿಸುತ್ತಿದೆ.

ಈ ವಿಚಾರವಾಗಿ ಮಾಜಿ ಸಚಿವ ರುದ್ರಪ್ಪ ಲಮಾಣಿ ಅವರ ಪುತ್ರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸುಮಾರು ಅರ್ಧ ಕೇಜಿಯಷ್ಟು ಮಾದಕ ವಸ್ತುವನ್ನು ಪಾರ್ಸೆಲ್ ಮೂಲಕ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ತರಿಸಿಕೊಂಡಿದ್ದು, ಅದನ್ನು ಸ್ವೀಕರಿಸಲು ಹೋದ ಅವರ ಗೆಳೆಯನನ್ನು ಪೊಲೀಸರು ಹಿಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ನಟಿಯರಾದ ರಾಗಿಣಿ, ಸಂಜನಾ ಸೇರಿದಂತೆ ಈಗಾಗಲೆ 15 ಮಂದಿ ಡ್ರಗ್ಸ್ ಕೇಸಿನಲ್ಲಿ ಜೈಲುಪಾಲಾಗಿದ್ದು, ತನಿಖೆ ಏರುಗತಿ ಪಡೆದಿದೆ. ಇದರ ಬೆನ್ನಲ್ಲೆ ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಲಮಾಣಿಯನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಡಾಕ್‌ವೆಬ್‌ ಮೂಲಕ ದರ್ಶನ್ ಮಾದಕ ವಸ್ತುಗಳ ಖರೀದಿ ಮಾಡಿ ಹಂಚುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.

Leave a Reply

Your email address will not be published. Required fields are marked *

You May Also Like

ಕೊವಿಡ್-19 ಸೋಂಕು ನಿಯಂತ್ರಣ: ಗದಗ ಜಿಲ್ಲೆಯಲ್ಲಿ 3 ಕಂಟೇನ್‍ಮೆಂಟ್ ಪ್ರದೇಶಗಳ ನಿರ್ಬಂಧ ತೆರವು

ಜಿಲ್ಲೆಯ ಕೊವಿಡ್-19 ಸೋಂಕು ನಿಯಂತ್ರಣಕ್ಕಾಗಿ ಸೋಂಕಿನ ಸಕಾರಾತ್ಮಕ ಪ್ರಕರಣಗಳು ವರದಿಯಾದ ಕೆಳಕಂಡ 3 ಪ್ರದೇಶಗಳನ್ನು ನಿರ್ಬಂಧಿತ ಪ್ರದೇಶಗಳೆಂದು ಘೋಷಿಸಲಾಗಿತ್ತು.

ಸಚಿವ ಸುಧಾಕರ್ ಪತ್ನಿ, ಪುತ್ರಿಗೂ ಕೊರೊನಾ ಪಾಸಿಟಿವ್..!

ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಪತ್ನಿ ಹಾಗೂ ಪುತ್ರಿಗೂ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ…

ಡಿಸಿಎಂ ಸವದಿ ಹೇಳಿಕೆಯಿಂಮಹಾರಾಷ್ಟ್ರದಲ್ಲಿ ಮೂಡಿದ ಸಂಚಲನ

ನಮಗೆ ಮುಂಬೈ ಮೇಲೆ ಹಕ್ಕು ಇದೆ. ಮುಂಬೈಯನ್ನು ರಾಜ್ಯಕ್ಕೆ ಸೇರಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಬೇಡಿಕೆ ಇಡಲಿದ್ದು, ಅಲ್ಲಿವರೆಗೂ ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸುವಂತೆ ಒತ್ತಾಯಿಸುವು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.

ರಾಜ್ಯದಲ್ಲಿ ಮತ್ತೊಂದು ಬಲಿ ಪಡೆದ ಮಹಾಮಾರಿ!

ಬೀದರ್: ಕೊರೊನಾಗೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದೆ. ಈ ನಿಟ್ಟಿನಲ್ಲಿ ಸಾವಿನ ಸಂಖ್ಯೆ 45ಕ್ಕೆ ಏರಿಕೆ ಕಂಡಿದೆ.ಇಲ್ಲಿಯ…