ಬೆಂಗಳೂರು: ಇತ್ತಿಚೆಗೆ ಕೆಲವು ದಿನಗಳಿಂದ ಡ್ರಗ್ಸ್ ವಿಷಯ ರಾಜ್ಯದಲ್ಲಿ ಬಹಳಷ್ಟು ಚರ್ಚೆಗೆ ಗ್ರಾಸವಾಗಿದೆ. ಚಿತ್ರ ನಟಿಯ ಡ್ರಗ್ಸ್ ಜಾಲದ ಬೆನ್ನಲ್ಲೆ ಈಗ ಜನಪ್ರತಿನಿಧಿಗಳ ಪುತ್ರರೀಗೂ ಈ ನಂಟು ವ್ಯಾಪಿಸುತ್ತಿದೆ.

ಈ ವಿಚಾರವಾಗಿ ಮಾಜಿ ಸಚಿವ ರುದ್ರಪ್ಪ ಲಮಾಣಿ ಅವರ ಪುತ್ರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸುಮಾರು ಅರ್ಧ ಕೇಜಿಯಷ್ಟು ಮಾದಕ ವಸ್ತುವನ್ನು ಪಾರ್ಸೆಲ್ ಮೂಲಕ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ತರಿಸಿಕೊಂಡಿದ್ದು, ಅದನ್ನು ಸ್ವೀಕರಿಸಲು ಹೋದ ಅವರ ಗೆಳೆಯನನ್ನು ಪೊಲೀಸರು ಹಿಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ನಟಿಯರಾದ ರಾಗಿಣಿ, ಸಂಜನಾ ಸೇರಿದಂತೆ ಈಗಾಗಲೆ 15 ಮಂದಿ ಡ್ರಗ್ಸ್ ಕೇಸಿನಲ್ಲಿ ಜೈಲುಪಾಲಾಗಿದ್ದು, ತನಿಖೆ ಏರುಗತಿ ಪಡೆದಿದೆ. ಇದರ ಬೆನ್ನಲ್ಲೆ ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಲಮಾಣಿಯನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಡಾಕ್‌ವೆಬ್‌ ಮೂಲಕ ದರ್ಶನ್ ಮಾದಕ ವಸ್ತುಗಳ ಖರೀದಿ ಮಾಡಿ ಹಂಚುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.

Leave a Reply

Your email address will not be published. Required fields are marked *

You May Also Like

ಗೊಜನೂರು ಎರೆಬೂದಿಹಾಳ ರಸ್ತೆ ಕಾಮಗಾರಿಗೆ ಭೂಮಿಪೂಜೆ

ಲಕ್ಷ್ಮೇಶ್ವರ ತಾಲೂಕಿನ ಗೊಜನೂರು ಎರೆ ಬೂದಿಹಾಳ ರಸ್ತೆ ಕಾಮಗಾರಿಗೆ ರವಿವಾರ ಶಾಸಕ ರಾಮಣ್ಣ ಲಮಾಣಿ ಭೂಮಿಪೂಜೆ ನೆರವೇರಿಸಿದರು.

ಹೆಚ್.ಕೆ.ವಿವೇಕಾನಂದ ಆತಂಕ

ಜಗತ್ತು ಬೆಳೆದಂತೆ ಸಂಬಂಧಗಳು ವ್ಯಾಪಾರೀಕರಣವಾಗಿ, ಮಾನವೀಯ ಮೌಲ್ಯಗಳೇ ಕುಸಿಯುತ್ತಿವೆ. ಹೀಗಾಗಿ ಸಮಾಜ ವಿನಾಶದೆಡೆಗೆ ಸಾಗುತ್ತಿದೆ ಎಂದು ಪ್ರಗತಿಪರ ಚಿಂತಕ ಹೆಚ್.ಕೆ.ವಿವೇಕಾನಂದ ಹೇಳಿದರು.

ರೋಣದ ‘ಕೆಜಿ ಬಾಸ್’ಗೆ ಟಿಕೆಟ್ ಬೇಕಾ ಎಂದ ರಾಜಾಹುಲಿ: ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ ಬಂಡಿ, ಯಡ್ಡಿ ಮಾತು..!

ಉತ್ತರಪ್ರಭ ಸುದ್ದಿಗದಗ: ಜಿಲ್ಲೆ ಶಿರಹಟ್ಟಿ ಪಟ್ಟಣದಲ್ಲಿ ನಿನ್ನೆ ನಡೆದ ಅದ್ಧೂರಿ ಸಮಾವೇಶ ಕೇಸರಿ ಪಾಳೆಯದಲ್ಲಿ ಹೊಸ…

ವಿದ್ಯಾರ್ಥಿ ಆತ್ಮಹತ್ಯೆ

ಉತ್ತರಪ್ರಭ ನರೇಗಲ್:‌ ಪಟ್ಟಣದ ಹುಚ್ಚೀರೇಶ್ವರ ನಗರದ ವಿದ್ಯಾರ್ಥಿ ಕಾರ್ತಿಕ ವೀರಪ್ಪ ಹಳ್ಳಿಕೇರಿ(24) ನೇಣು ಬಿಗಿದುಕೊಂಡು ಆತ್ಮಹತ್ಯೆ…