ಡ್ರಗ್ಸ್ ಕೇಸ್ ಬಗ್ಗೆ ನನಗೆ ಗೊತ್ತಿಲ್ಲ ಎಂದ ಮಾಜಿ ಸಚಿವ ರುದ್ರಪ್ಪ ಲಮಾಣಿ!

ಬೆಂಗಳೂರು : ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಬಂಧಿಯಾಗಿರುವ ಪುತ್ರ ದರ್ಶನ್ ಬಗ್ಗೆ ಮಾಜಿ ಸಚಿವ ರುದ್ರಪ್ಪ ಲಮಾಣಿ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಡ್ರಗ್ಸ್ ಪ್ರಕರಣದ ಬಗ್ಗೆ ನನಗೇನು ಗೊತ್ತಿಲ್ಲ. ಮಾಧ್ಯಮಗಳ ಮೂಲಕವೇ ನನಗೆ ಈ ವಿಷಯ ಗೊತ್ತಾಗಿದೆ. ನನ್ನ ಮಗ ರಾಣೇಬೆನ್ನೂರಿನ ಕಾಲೇಜಿನಲ್ಲಿ ಓದುತ್ತಿದ್ದಾನೆ. ಈ ವರ್ಷ ಕಾಲೇಜಿಗೆ ಹೋಗಿಲ್ಲ. ವಿಚಾರಣೆ ನಡೆಸುವುದರಲ್ಲಿ ಯಾವುದೇ ತಪ್ಪಿಲ್ಲ. ಇಂದು ಬೆಂಗಳೂರಿಗೆ ಬಂದ ಸಂದರ್ಭದಲ್ಲಿ ಬಂಧನದ ಕುರಿತು ತಿಳಿದು ಬಂದಿದೆ.

ನ. 5ರಂದು ಡ್ರಗ್ಸ್ ಪೆಡ್ಲರ್ ಸುಜಯ್ ಎಂಬ ವ್ಯಕ್ತಿಯನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದರು. ಬಂಧಿತ ಸುಜಯ್ ಬಿಟ್ ಕಾಯಿನ್ಸ್ ಮೂಲಕ ಡ್ರಗ್ಸ್ ಖರೀದಿಸುತ್ತಿದ್ದ. ಬಂಧಿತನಿಂದ ಪೊಲೀಸರು 500 ಗ್ರಾಂ ಹೈಡ್ರೊ ಗಾಂಜಾ ವಶಕ್ಕೆ ಪಡೆದುಕೊಂಡಿದ್ದರು

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಮಂತ್ ಮತ್ತು ಸುನಿಶ್ ತಲೆ ಮರೆಸಿಕೊಂಡಿದ್ದಾರೆ. ಈ ಇಬ್ಬರಿಗೆ ದರ್ಶನ್, ಗೋವಾದಲ್ಲಿ ಆಶ್ರಯ ನೀಡಿದ ಆರೋಪ ಕೇಳಿ ಬಂದಿದೆ. ಅಲ್ಲದೇ, ದರ್ಶನ್ ಕೂಡ ಆರೋಪಿಗಳೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಎಂದು ತಿಳಿದು ಬಂದಿದೆ. ಸದ್ಯ ಪೊಲೀಸರು ಮೂವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Exit mobile version