ಬೆಂಗಳೂರು : ಕೆಎಎಸ್ ಅಧಿಕಾರಿ ಡಾ. ಸುಧಾ ಅವರ ಮನೆಯ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ದಾಳಿ ನಡೆಸಿದ್ದು, ಬರೋಬ್ಬರಿ 3.7 ಕೆಜಿ ಚಿನ್ನ ಹಾಗೂ 10.5 ಕೆಜಿ ಬೆಳ್ಳಿಯ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಎಸಿಬಿ ಐಜಿಪಿ ಚಂದ್ರಶೇಖರ್ ತಿಳಿಸಿದ್ದಾರೆ. ಇತ್ತೀಚೆಗೆ ಡಾ. ಸುಧಾ ಅವರ ನಿವಾಸದ ಮೇಲೆ ಎಸಿಬಿ ದಾಳಿ ನಡೆಸಿತ್ತು. ಬೆಂಗಳೂರು, ಉಡುಪಿ, ಮೈಸೂರು ಸೇರಿದಂತೆ ಏಳು ಸ್ಥಳಗಳಲ್ಲಿ ದಾಳಿ ಮಾಡಲಾಗಿದ್ದು, ಈ ವೇಳೆ ರೂ. 36.89 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಬ್ಯಾಂಕ್ ಖಾತೆಯಲ್ಲಿ ರೂ. 3.5 ಕೋಟಿ ಠೇವಣಿ ಹಾಗೂ 20ಕ್ಕೂ ಹೆಚ್ಚು ಆಸ್ತಿಗೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿವೆ. ಸ್ಥಿರಾಸ್ತಿ ಕ್ರಯ ಪತ್ರಗಳು, ಜಿಪಿಎ ಕರಾರುಗಳು, ಖರೀದಿ ಒಪ್ಪಂದ ಸೇರಿದಂತೆ 200 ಆಸ್ತಿ ಪತ್ರಗಳು ಪತ್ತೆಯಾಗಿವೆ ಎಂದು ಅವರು ಹೇಳಿದ್ದಾರೆ.

ಸುಧಾ ಅವರಿಗೆ ನೊಟೀಸ್ ನೀಡಿಲ್ಲ. ಆದರೆ, ದಾಖಲೆಗಳಿದ್ದರೆ ತಿಳಿಸುವಂತೆ ಸೂಚಿಸಲಾಗಿದೆ. ಸುಧಾ ಅವರ ಹೊರತಾಗಿ‌ ಅವರ ಮನೆ ಮೇಲೆ ದಾಳಿ ಮಾಡಲಾಗಿದ್ದು, ದಾಳಿಗೆ ತುತ್ತಾದವರನ್ನು ಬೇನಾಮಿಗಳು ಎಂದು ಪರಿಗಣಿಸಲಾಗಿದೆ. 50 ಬ್ಯಾಂಕ್ ಖಾತೆಗಳು ಪತ್ತೆಯಾಗಿದ್ದು, 50 ಚೆಕ್ ಲೀಫ್‌ ಗಳು ದೊರೆತಿವೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ನಾಳೆ ಆಲಮಟ್ಟಿ ಎಂ.ಎಚ್.ಎಂ.ಪಿಯು ಕಾಲೇಜು ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ

ಆಲಮಟ್ಟಿ : ಇಲ್ಲಿನ ಶ್ರೀಮದ್ ವೀರಶೈವ ವಿದ್ಯಾಲಯ ಅಸೋಸಿಯೇಷನ್ ಸಂಸ್ಥೆಯ ಮಂಜಪ್ಪ ಹಡೇ೯ಕರ ಸ್ಮಾರಕ ಸಂಯುಕ್ತ…

ಗದಗ ಜಿಲ್ಲೆಯ ಖಾಕಿ ಖದರ್ ಗೆ ಜನರು ಖುಷ್..!: ಕಳೆದ ವಸ್ತುಗಳು ಕೈಸೇರಿದ್ದಕ್ಕೆ ಜನ್ರು ಖುಷ್ !

ಖಾಕಿ ತನ್ನ ಖದರ್ ತೋರಿಸಿದರೆ ಏನೆಲ್ಲ ಮಾಡಬಹುದು ಎನ್ನುವುದಕ್ಕೆ ಗದಗ ಜಿಲ್ಲೆಯ ಪೊಲೀಸರು ತಾಜಾ ಉದಾಹರಣೆ. ಒಂದು ವರ್ಷದಿಂದ ಜಿಲ್ಲೆಯಲ್ಲಿ ಆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳ್ಳತನ ಜಾಲ ಭೇದಿಸಿ ಕಳ್ಳರ ಹೆಡೆಮುರಿ ಕಟ್ಟಿ ಜನರು ಕಳೆದುಕೊಂಡ ವಸ್ತುಗಳನ್ನು ಮರಳಿಸುವ ಮೂಲಕ ಜಿಲ್ಲಾ ಪೊಲೀಸ್ ಇಂದು ಜನರ ಮೆಚ್ಚುಗೆಗೆ ಪಾತ್ರವಾಯಿತು.

ಜಿಂದೇಶ್ಯಾವಲಿ ದರ್ಗಾ ಉರುಸು ರದ್ದುಗೊಳಿಸಿ ಡಿಸಿ ಆದೇಶ

ಕಳೆದ 15 ದಿನಗಳಿಂದ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಗುಂಪು ಸೇರಬಹುದಾದ ಇತರ ಚಟುವಟಿಕೆಗಳಲ್ಲಿ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ಉದ್ದೇಶದಿಂದ ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದೆ.

ಆಲಮಟ್ಟಿ ರಮ್ಯ ನೋಟಕ್ಕೆ ರಾಜ್ಯಪಾಲರು ಫಿದಾ..!

ಉತ್ತರಪ್ರಭಆಲಮಟ್ಟಿ: (ವಿಜಯಪುರ ಜಿಲ್ಲೆ) ಮೊಟ್ಟಮೊದಲ ಬಾರಿಗೆ ಬಯಲುನಾಡಿನ ಪ್ರಾಕೃತಿಕ ತಾಣದಲ್ಲಿ ರಾಜ್ಯದ ರಾಜ್ಯಪಾಲರ ದಿವ್ಯ ದರ್ಶನ…