ಲಕ್ಷ್ಮೇಶ್ವರ: ಬಿಜೆಪಿ ರಾಜಾಧ್ಯಕ್ಷ ನಳಿನಕುಮಾರ ಕಟೀಲ್ ಅವರು ಬಹಿರಂಗವಾಗಿ ಹೇಳಿರುವ ಸದಾಶಿವ ಆಯೋಗದ ಬಗೆಗಿನ ಹೇಳಿಕೆಯನ್ನು ಹಿಂಪಡೆಯಬೇಕು ಹಾಗೂ ಬಂಜಾರ ಸಮಾಜದ ಕ್ಷಮೆಯಾಚಿಸಬೇಕೆಂದು ಲಕ್ಷ್ಮೇಶ್ವರ ಘಟಕದ ಬಂಜಾರ ಸಮಾಜದ ವತಿಯಿಂದ ಮನವಿ ಸಲ್ಲಿಸಲಾಯಿತು.

ಈ ವೇಳೆ ಬಂಜಾರ ಯುವ ಸೇನೆ ಅಧ್ಯಕ್ಷ ಅರ್ಜುನ ಕಾರಬಾರಿ ಮಾತನಾಡಿ ಪರಿಶಿಷ್ಟ ವರ್ಗದ ಕೊರಮ, ಕೊರಚ, ಭೋವಿ, ಸುಡಗಾಡ ಸಿದ್ದರು, ಮತ್ತು ಇತರರನ್ನು ಪರಿಶಿಷ್ಟ ಜಾತಿಯಿಂದ ಕೈಬಿಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ ಕಟೀಲ್ ಪರೋಕ್ಷ ಹೇಳಿಕೆ ನೀಡಿದ್ದಾರೆ. ಸದಾಶಿವ ಆಯೋಗದ ವರದಿಯನ್ನು ಜಾರಿಗೆ ತರುವುದಾಗಿ ಶಿರಾ ಉಪಚುನಾವಣೆಯಲ್ಲಿ ಬಹಿರಂಗವಾಗಿ ಹೇಳಿಕೆ ನೀಡಿರುವುದನ್ನು ಬಂಜಾರ ಹಾಗೂ ಇತರೆ ಪರಿಶಿಷ್ಟ ಜಾತಿಯ ಜನಾಂಗದವರು ತೀವ್ರವಾಗಿ ಖಂಡಿಸುತ್ತೇವೆ ಎಂದು ಕಟೀಲ್ ವಿರುದ್ಧ ಕಿಡಿಕಾರಿದ್ರು.

ಮಹೇಶ ಅಕ್ಕಿಗುಂದ ಮಾತನಾಡಿ ನಳಿನಕುಮಾರ ಈ ಹೇಳಿಕೆ ಮೂಲಕ ಓಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದ್ದಾರೆ. ನ್ಯಾ.ಸದಾಶಿವ ವರದಿಯ ಬಗ್ಗೆ ಸರಕಾರದಲ್ಲಿ ವಾದವಿವಾದಗಳು ನಡೆಯುತ್ತಿವೆ. ಈ ಬಗ್ಗೆ ಬಹಿರಂಗ ಚರ್ಚೆಯಲ್ಲಿ ಆಗಿಲ್ಲ. ಆದರೆ ಕಟೀಲ್ ಅವರು ಸದಾಶಿವ ವರದಿಯ ಬಗ್ಗೆ ಯಾವ ತಿಳುವಳಿಕೆಯೂ ಇಲ್ಲದೇ ಈ ವಿಷಯವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿರುವುದು ಸರಿಯಲ್ಲ ಎಂದು ಆಕ್ರೊಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಪರಮೇಶ ಲಮಾಣಿ, ರಮೇಶ ಲಮಾಣಿ, ನಾಗೇಶ ಲಮಾಣಿ, ಗಣೇಶ ನಾಯಕ, ಸೋಮು ಲಮಾಣಿ, ಕಿರಣ ಲಮಾಣಿ, ಟಿ.ಸಿ.ಪೂಜಾರ ಕೃಷ್ಣ ಲಮಾಣಿ, ಅಶೋಕ ಲಮಾಣಿ, ವಿಠ್ಠಲ ನಾಯಕ, ಶಂಕರ ಕಾರಬಾರಿ, ಮಾಂತೇಶ ಲಮಾಣಿ, ನಾನಪ್ಪ ಲಮಾಣಿ, ಗಣೇಶ ಲಮಾಣಿ, ಶಿವಪ್ಪ ಲಮಾಣಿ, ಗೋಪಿ ಲಮಾಣಿ ಸೇರಿದಂತೆ ಅನೇಕರು ಇದ್ದರು.

Leave a Reply

Your email address will not be published. Required fields are marked *

You May Also Like

ಜನ ದೇಣಿಗೆ ನೀಡಿದ್ದು ಮಂದಿರಕ್ಕಾಗಿ, ಬಿಜೆಪಿಗಲ್ಲ: ಸಿದ್ದರಾಮಯ್ಯ ಟೀಕೆ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಜನರು ದೇಣಿಗೆ ನೀಡುತ್ತಿದ್ದಾರೆ ಅದು ಬಿಜೆಪಿಗಾಗಿ ಅಲ್ಲ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಧೈರ್ಯವಿದ್ದರೆ ಸಿದ್ದರಾಮಯ್ಯ ಪಂಚ ಪ್ರಶ್ನೆಗಳಿಗೆ ಉತ್ತರಿಸಲಿ

ಮಂಗಳವಾರ ರಾತ್ರಿ ದೇಶವನ್ನುದ್ದೇಶಿಸಿ ಮಾತನಾಡಿದ ಮೋದಿ ಭಾಷಣವನ್ನು ಟೀಕಿಸಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಪಕ್ಷ ನಮ್ಮ ಪಂಚ ಪ್ರಶ್ನೆಗಳಿಗೆ ಉತ್ತರಿಸುವ ಧೈರ್ಯವಿದೆಯಾ ಎಂದು ಬಿಜೆಪಿ ಅಧೀಕೃತ ಟ್ವೀಟ್ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ಸಿದ್ದರಾಮಯ್ಯ ಅವರಿಗೆ ಸವಾಲೆಸಿದಿದೆ.

Slot Power Casino No Deposit Bonus️️k8io Vipsign Up Owe Get 5️slot Power Casino No Deposit Bonusnvstsnslot Power Casino No Deposit Bonusnvstsn Tłumaczenie Angielski-polski Pons

Paddy Power Casino Sign Up Offer️️k8io Vipsign Up Owe Get $5️paddy Power…

ಸುತಗುಂಡಾರ : ಮಕ್ಕಳಿಗೆ ರಸಪ್ರಶ್ನೆ ಕಾರ್ಯಕ್ರಮ

ಆಲಮಟ್ಟಿ : ಸನಿಹದ ಸುತಗುಂಡಾರ ಶ್ರೀ ಕರವೀರೇಶ್ವರ ಪ್ರೌಢಶಾಲೆಯಲ್ಲಿ ಶಾಲಾ ಮಕ್ಕಳಿಗಾಗಿ ರಸಪ್ರಶ್ನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.…