ಧಾರವಾಡ : ಜಿಪಂನ ಮಾಜಿ ಸದಸ್ಯ ಯೋಗೇಶ್ ಗೌಡ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಬಿ ವಶದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ನ. 23ರ ವರೆಗೂ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ನೀಡಿದೆ.

ನಗರದ ಸೆಷನ್ಸ್ ಕೋರ್ಟ್ ನಲ್ಲಿ ವಿಚಾರಣೆ ನಡೆದಿದ್ದು, ನ. 23ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ. ನ್ಯಾಯಾಂಗ ಬಂಧನದ ಅವಧಿ ಇಂದು ಮುಕ್ತಾಯವಾದ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು, ವಿನಯ್ ಕುಲಕರ್ಣಿ ಅವರನ್ನು ಕೋರ್ಟ್ ಗೆ ಹಾಜರು ಪಡಿಸಿದ್ದರು. ವಾದ – ವಿವಾದ ಆಲಿಸಿದ ಕೋರ್ಟ್ ಮತ್ತೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ನಾಶ, ಸುಳ್ಳು ದಾಖಲೆ ಸೃಷ್ಟಿ, ಪೊಲೀಸ್ ಇಲಾಖೆ ಮೇಲೆ ಒತ್ತಡ, ಹಂತಕರಿಗೆ ಆಶ್ರಯ ಸೇರಿದಂತೆ ಹಲವು ಪ್ರಶ್ನೆಗಳನ್ನು ಸಿಬಿಐ, ವಿನಯ್ ಕುಲಕರ್ಣಿ ಅವರಿಗೆ ಕೇಳಿದೆ ಎಂದು ತಿಳಿದು ಬಂದಿದೆ.

ಮಾಜಿ ಆಪ್ತ ಕಾರ್ಯದರ್ಶಿ ಸೋಮಲಿಂಗ ನ್ಯಾಮೇಗೌಡ, ಮಾಜಿ ಸಚಿವರ ಸೋದರ ಮಾವ ಚಂದ್ರಶೇಖರ ಇಂಡಿ, ಯೋಗೀಶ್ ಗೌಡ ಪತ್ನಿ ಮಲ್ಲಮ್ಮ ಅವರನ್ನು ಕೂಡ ಸಿಬಿಐ ವಿನಯ್ ಕುಲಕರ್ಣಿ ಸಮ್ಮುಖದಲ್ಲಿಯೇ ವಿಚಾರಣೆಗೆ ಒಳಪಡಿಸಿತ್ತು.

Leave a Reply

Your email address will not be published. Required fields are marked *

You May Also Like

ಕೆ.ಎಸ್ಆರ.ಟಿ.ಸಿ ನೌಕರರಿಗೆ ಸಂಬಳರಹಿತ ರಜೆ ಅಮಾನವೀಯ:ಸರ್ಕಾರ ದಿವಾಳಿಯಾಗಿದೆಯೇ?: ಸಿದ್ದರಾಮಯ್ಯ ಆಕ್ರೋಶ

ಕೆ.ಎಸ್.ಆರ.ಟಿ.ಸಿ ನೌಕರರಿಗೆ 1 ವರ್ಷ ಸಂಬಳರಹಿತ ರಜೆ ನೀಡಲು ಹೊರಟಿರುವುದು ಕಾರ್ಮಿಕ ವಿರೋಧಿ ನಡೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.ಸರ್ಕಾರದ ಯೋಚನೆ ಕಾರ್ಮಿಕ ವಿರೋಧಿ ಮತ್ತು ಅಮಾನವೀಯ

ಗದಗನಲ್ಲಿ ‌ಮತ್ತೊಂದು ಕೊರೊನಾ ಪಾಸಿಟಿವ್..!

ಜಿಲ್ಲೆಯ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಬೆಂಗಳೂರಿನಲ್ಲಿ ಪತ್ತೆಯಾಗಿದೆ. P-4079 ರೋಗಿ ಗದಗನ ನಗರದ ನಿವಾಸಿಯಾಗಿದ್ದು ಇತ್ತಿಚೆಗೆ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದು ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಗದಗ ಜಿಲ್ಲೆಯಲ್ಲಿ ಕೊರೊನಾಗೆ ಮತ್ತೊಂದು ಬಲಿ: ಸಾವಿನ ಸಂಖ್ಯೆ 4 ಕ್ಕೆ ಏರಿಕೆ..!

ಗದಗ : ಜಿಲ್ಲೆಯಲ್ಲಿ ಕೊರೋನಾಗೆ ಇಂದು ಮತ್ತೊಂದು ಬಲಿಯಾಗಿದ್ದು ಈ ಮೂಲಕ ಸಾವಿನ ಸಂಖ್ಯೆ 4…

ಈದ್ ಮೀಲಾದ್ ಆಚರಣೆಗೆ ಸರ್ಕಾರದ ಮಾರ್ಗಸೂಚಿಗಳು

ಬೆಂಗಳೂರು: ಮುಸ್ಲೀಂ ಬಾಂಧವರು ದಿನಾಂಕ 30-10-2020 ರಂದು ರಾಜ್ಯಾದ್ಯಂತ ಈದ್ ಮೀಲಾದ್ ಹಬ್ಬವನ್ನು ಆಚರಿಸಲಿದ್ದು, ಹಬ್ಬ ಆಚರಣೆಯ ಬಗ್ಗೆ ಸರ್ಕಾರದ ಮಾರ್ಗಸೂಚಿ ಈ ಕೆಳಗಿನಂತಿದೆ.