ಗದಗ: ಇತ್ತಿಚೆಗೆ ಕಲಬುರಗಿಯಲ್ಲಿ ನಡದ ಘಟನೆಯಲ್ಲಿ ಗೋಂಧಳಿ ಸಮಾಜದ ಸುರೇಶ್ ಎಂಬ ವ್ಯಕ್ತಿ ಕೊಲೆಯಾಗಿದ್ದು, ಸರ್ಕಾರ ತನ ಕುಟುಂಬಕ್ಕೆ 30 ಲಕ್ಷ ಪರಿಹಾರ ಹಾಗು ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಗೋಂಧಳಿ ಸಮಾಜದ ರಾಜ್ಯಾಧ್ಯಕ್ಷ ವಿಠಲ್ ಗಣಾಚಾರಿ ಒತ್ತಾಯಿಸಿದರು.

ಅವರು ಈ ಕುರಿತು ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿ, ಜಿಲ್ಲೆಯ ಚಿತ್ತಾಪೂರ ತಾಲೂಕಿನ ಹಲಕರ್ಟಿ ಗ್ರಾಮ ನಿವಾಸಿ ಸುರೇಶ ಬುಡಬುಡಕಿ ಹಾಗೂ ಜ್ಯೋತಿಷ್ಯ ಹೇಳುವ ಕಾಯಕ ಮಾಡುತ್ತಿದ್ದರು. ಏಳು ಜನ ಅನ್ಯಕೋಮಿ ಯುವಕರು ಸಣ್ಣ ಕಾರಣಕ್ಕೆ ಹಲ್ಲೆ ಮಾಡಿ ಹತ್ಯೆಗೈದಿದ್ದಾರೆ ಎಂದು ಕಿಡಿಕಾರಿದರು.  

ಸುರೇಶ್ ಸಾವು ಸಮಾಜದಲ್ಲಿ ಮಾನವಿಯತೆ ಹುಡುಕುತ್ತದೆ. ಇನ್ನು ಮುಖ್ಯವಾಗಿ ಈ ಪ್ರಕರಣದಲ್ಲಿ ಕಲಬುರಗಿ ಪೋಲಿಸ್ ವ್ಯವಸ್ಥೆ ಸಾರ್ವಜನಿಕರಿಗೆ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ. ಇಡೀ ಕುಟುಂಬ ಆರ್ಥಿಕವಾಗಿ ಸುರೇಶ್ ಅವರ ಮೇಲೆ ಅವಲಂಭಿತವಾಗಿತ್ತು. ಇದೀಗ ಸುರೇಶ್ ಕೊಲೆಯಿಂದ ಕುಟುಂಬವೂ ಬೀದಿಗೆ ಬರುವಂತಾಗಿದೆ. ಹೀಗಾಗಿ ಸರ್ಕಾರ ಅವರ ಕುಟುಂಬಕ್ಕೆ 30 ಲಕ್ಷ ಪರಿಹಾರ ಹಾಗೂ ಕುಟುಂಬದ ಸದಸ್ಯರಿಗೆ ಒಂದು ಸರ್ಕಾರಿ ನೌಕರಿ ನೀಡಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಗೋಂಧಳಿ ಸಮಾಜದ ಮುಂಡರಗಿ ತಾಲೂಕ ಅಧ್ಯಕ್ಷ ದುರಗೊಜಿ ಗಣಾಚಾರಿ, ಪುಂಡಲೀಕ ಪಾರ್ಗೆ, ದುರಗಪ್ಪ ವಾಡಗನ್ ಲಕ್ಷಣ್ ಡಾರ್ಗೆ, ಮಂಜುನಾಥ ಗಾಡಕರ್, ಬಾಳಪ್ಪ ಮುಖ್ಯೆ, ಸಮಾಜದ ಜಿಲ್ಲಾ ಅಧ್ಯಕ್ಷ ಸಹದೇವ ಗಣಾಚಾರಿ ಇನ್ನಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ತರಬೇತಿಗೆ ಅರ್ಜಿ ಆಹ್ವಾನ

ಕೌಶಲ್ಯಾಭಿವೃದ್ಧಿ , ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಸಂಸ್ಥೆಯಾದ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ ( ಸಿಡಾಕ) ಧಾರವಾಡ ಹಾಗೂ ಸಿಡಾಕ್ ಜಿಲ್ಲಾ ಕಚೇರಿ ಗದಗ ಇವರ ಸಹಯೋಗದಲ್ಲಿ ಉದ್ಯಮ ಕ್ಷೇತ್ರದಲ್ಲಿ ಆಸಕ್ತಿ ಇರುವ ಅಬ್ಯರ್ಥಿಗಳಿಗೆ 30 ದಿನಗಳ ಉಚಿತ ಬ್ಯೂಟಿಷಿಯನ್ ಹಾಗೂ ಕಾಸ್ಮೆಟಾಲಜಿ ಕೌಶಲ್ಯಾಧಾರಿತ ಉದ್ಯಮಶೀಲತಾ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಬೋಧಕರು ಮನೆಯಿಂದಲೇ ಕರ್ತವ್ಯ ನಿರ್ವಹಿಸಲು ಸೂಚನೆ

2020-21 sಸಾಲಿನ ಶೈಕ್ಷಣಿಕ ವರ್ಷದ ತರಗತಿಗಳ ಪ್ರಾರಂಭಕ್ಕೆ ಅಗತ್ಯವಿರುವ ಪೂರ್ವ ಸಿದ್ಧತೆಗಳಾದ Dijital learning online/offline teaching, Study material preparation, LMS Preparation ಮುಂತಾದವುಗಳ ಬಗ್ಗೆ ತಯಾರಿ ಮಾಡಿಕೊಳ್ಳಲು, ಇಲಾಖೆ ವ್ಯಾಪ್ತಿಯ ಸರ್ಕಾರಿ ಮತ್ತು ಖಾಸಗಿ ಅನುದಾನಿತ ಕಾಲೇಜುಗಳಲ್ಲಿನ ವಿಶ್ವವಿದ್ಯಾಲಯಗಳ ಭೋಧಕರಿಗೆ ಸೂಚಿಸಲಾಗಿದೆ.

ಮೂರ್ತಿ ತೆರವಿಗೆ ಖಂಡನೆ: ರಾಯಣ್ಣ ಅಭಿಮಾನಿ ಬಳಗದಿಂದ ಮನವಿ

ಬೆಳಗಾವಿ ಜಿಲ್ಲೆಯ ಪೀರನವಾಡಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ತೆರವುಗೊಳಿಸದ್ದನ್ನು ಖಂಡಿಸಿ ತಾಲೂಕು ಕುರುಬರ ಸಂಘ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಸೋಮವಾರ ಮನವಿ ಸಲ್ಲಿಸಲಾಯಿತು.

ಡಾ. ಶಾಂತಕುಮಾರ ಭಜಂತ್ರಿ ಅವರಿಗೆ ರಾಜ್ಯಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ ಪ್ರದಾನ

ಉತ್ತರಪ್ರಭ ಸುದ್ದಿಗದಗ: ಡಾ. ಪಂಡಿತ್ ಪುಟ್ಟರಾಜ ಕವಿ ಗವಾಯಿಗಳವರ 108ನೇ ಜಯಂತ್ಯೋತ್ಸವ ಪ್ರಯುಕ್ತ ರಾಜ್ಯಮಟ್ಟದ ಪ್ರಶಸ್ತಿ…