ಗದಗ: ಇತ್ತಿಚೆಗೆ ಕಲಬುರಗಿಯಲ್ಲಿ ನಡದ ಘಟನೆಯಲ್ಲಿ ಗೋಂಧಳಿ ಸಮಾಜದ ಸುರೇಶ್ ಎಂಬ ವ್ಯಕ್ತಿ ಕೊಲೆಯಾಗಿದ್ದು, ಸರ್ಕಾರ ತನ ಕುಟುಂಬಕ್ಕೆ 30 ಲಕ್ಷ ಪರಿಹಾರ ಹಾಗು ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಗೋಂಧಳಿ ಸಮಾಜದ ರಾಜ್ಯಾಧ್ಯಕ್ಷ ವಿಠಲ್ ಗಣಾಚಾರಿ ಒತ್ತಾಯಿಸಿದರು.

ಅವರು ಈ ಕುರಿತು ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿ, ಜಿಲ್ಲೆಯ ಚಿತ್ತಾಪೂರ ತಾಲೂಕಿನ ಹಲಕರ್ಟಿ ಗ್ರಾಮ ನಿವಾಸಿ ಸುರೇಶ ಬುಡಬುಡಕಿ ಹಾಗೂ ಜ್ಯೋತಿಷ್ಯ ಹೇಳುವ ಕಾಯಕ ಮಾಡುತ್ತಿದ್ದರು. ಏಳು ಜನ ಅನ್ಯಕೋಮಿ ಯುವಕರು ಸಣ್ಣ ಕಾರಣಕ್ಕೆ ಹಲ್ಲೆ ಮಾಡಿ ಹತ್ಯೆಗೈದಿದ್ದಾರೆ ಎಂದು ಕಿಡಿಕಾರಿದರು.  

ಸುರೇಶ್ ಸಾವು ಸಮಾಜದಲ್ಲಿ ಮಾನವಿಯತೆ ಹುಡುಕುತ್ತದೆ. ಇನ್ನು ಮುಖ್ಯವಾಗಿ ಈ ಪ್ರಕರಣದಲ್ಲಿ ಕಲಬುರಗಿ ಪೋಲಿಸ್ ವ್ಯವಸ್ಥೆ ಸಾರ್ವಜನಿಕರಿಗೆ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ. ಇಡೀ ಕುಟುಂಬ ಆರ್ಥಿಕವಾಗಿ ಸುರೇಶ್ ಅವರ ಮೇಲೆ ಅವಲಂಭಿತವಾಗಿತ್ತು. ಇದೀಗ ಸುರೇಶ್ ಕೊಲೆಯಿಂದ ಕುಟುಂಬವೂ ಬೀದಿಗೆ ಬರುವಂತಾಗಿದೆ. ಹೀಗಾಗಿ ಸರ್ಕಾರ ಅವರ ಕುಟುಂಬಕ್ಕೆ 30 ಲಕ್ಷ ಪರಿಹಾರ ಹಾಗೂ ಕುಟುಂಬದ ಸದಸ್ಯರಿಗೆ ಒಂದು ಸರ್ಕಾರಿ ನೌಕರಿ ನೀಡಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಗೋಂಧಳಿ ಸಮಾಜದ ಮುಂಡರಗಿ ತಾಲೂಕ ಅಧ್ಯಕ್ಷ ದುರಗೊಜಿ ಗಣಾಚಾರಿ, ಪುಂಡಲೀಕ ಪಾರ್ಗೆ, ದುರಗಪ್ಪ ವಾಡಗನ್ ಲಕ್ಷಣ್ ಡಾರ್ಗೆ, ಮಂಜುನಾಥ ಗಾಡಕರ್, ಬಾಳಪ್ಪ ಮುಖ್ಯೆ, ಸಮಾಜದ ಜಿಲ್ಲಾ ಅಧ್ಯಕ್ಷ ಸಹದೇವ ಗಣಾಚಾರಿ ಇನ್ನಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಲಕ್ಷ್ಮೇಶ್ವರ ಬಳಿ ಟ್ರ್ಯಾಕ್ಟರ್ ಪಲ್ಟಿ: ಸ್ಥಳದಲ್ಲಿಯೇ ಇಬ್ಬರ ಸಾವು

ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಸ್ಥಳಗಳಲ್ಲಿ ಇಬ್ಬರು ಸಾವನ್ನಪ್ಪಿದ್ದು, ಏಳು ಜನ ಗಾಯ‌ಗೊಂಡ ಘಟನೆ ಲಕ್ಷೇಶ್ವರ ತಾಲೂಕಿನ ಗುಂಜಳ ರಸ್ತೆಯಲ್ಲಿ ನಡೆದಿದೆ.

ಕೋರಿಯಾದಿಂದ ಕೋಲಾರಕ್ಕೂ ಬಂದಿವೆ ಸೋಂಕು ಟೆಸ್ಟ್ ಕಿಟ್ ಗಳು

ಕೊರೋನಾ ಸೋಂಕು ತುರ್ತಾಗಿ ಪತ್ತೆ ಹಚ್ಚಲು ಕೋರಿಯಾದಿಂದ ಕೋಲಾರ ಜಿಲ್ಲೆಯ ಆರೋಗ್ಯ ಇಲಾಖೆಗೆ ರ್ಯಾಪಿಡ್ ಆಂಟಿ ಬಾಡಿ ಟೆಸ್ಟಿಂಗ್ ಕಿಟ್ ಗಳು ಬಂದಿವೆ. ಈ ಮೂಲಕ ಇಪ್ಪತ್ತು ನಿಮಿಷದೊಳಗಾಗಿ ಕೊರೋನಾ ಸೇರಿ ಯಾವುದೇ ಸೋಂಕಿದ್ದರೂ ಪತ್ತೆ ಹಚ್ಚಬಹುದಾಗಿದೆ. ಇದು ದೇಶದಲ್ಲಿ ಮೊದಲ ಪ್ರಯತ್ನ ಎಂದು ಹೇಳಲಾಗುತ್ತಿದೆ.

ಚಿತ್ರಕಲಾ, ಜಾನಪದ ವಿವಿ ಸಿಬ್ಬಂದಿ ವೇತನಕ್ಕೆ 11.60 ಲಕ್ಷ ಬಿಡುಗಡೆ: ವಿಪ ಸದಸ್ಯ ಸಂಕನೂರ

ರಾಜ್ಯದಲ್ಲಿ ಅಡ್ಹಾಕ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಮೂರು ಚಿತ್ರಕಲಾ ಮಹಾವಿದ್ಯಾಲಯದ ಹಾಗೂ ಜಾನಪದ ವಿಶ್ವವಿದ್ಯಾಲಯ, ಕನ್ನಡ ವಿಶ್ವವಿದ್ಯಾಲಯ ಹಂಪಿ, ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಇವುಗಳ ಸಿಬ್ಬಂದಿಗಳಿಗೆ 2020-21ನೇ ಸಾಲಿನಲ್ಲಿ ನೀಡಬೇಕಾದಂತಹ ಬಾಕಿ ವೇತನಕ್ಕಾಗಿ ಆರ್ಥಿಕ ಇಲಾಖೆ 11 ಕೋಟಿ 60 ಲಕ್ಷ ಹಣ ಬಿಡುಗಡೆ ಮಾಡಿದೆ ಎಂದು ವಿಧಾನ ಪರಿಷತ್ತ ಸದಸ್ಯ ಎಸ್.ವ್ಹಿ.ಸಂಕನೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಂದು 7,012 ಪಾಸಿಟಿವ್!: ರಾಜ್ಯದ ಎಲ್ಲ ಜಿಲ್ಲೆಗಳ ಕೊರೊನಾ ಅಪ್ ಡೇಟ್

ಜಿಲ್ಲೆಯಲ್ಲಿಂದು 53 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಒಟ್ಟು ಸೊಮಖಿತರ ಸಂಖ್ಯೆ 10,222ಕ್ಕೆ ಏರಿಕೆಯಾಗಿದೆ. ಇಂದು 49 ಜನರು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು, ಒಟ್ಟು ಈವರೆಗೆ 9,678 ಜನರು ಗುಣಮುಖ ಹೊಂದಿದ್ದಾರೆ. 404 ಸಕ್ರೀಯ ಪ್ರಕರಣಗಳಿದ್ದು, 140 ಮೃತರ ಸಂಖ್ಯೆಯಾಗಿದೆ.