ಗ್ರಾಮಕ್ಕೆ ನುಗ್ಗಿ ಗುಂಡು ಹಾರಿಸಿದ ದುಷ್ಕರ್ಮಿಗಳು!

ಮೈಸೂರು : ಗ್ರಾಮದೊಳಗೆ ಏಕಾಏಕಿ ನುಗ್ಗಿದ ದುಷ್ಕರ್ಮಿಗಳು ಗುಂಡು ಹಾರಿಸುವ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ 7 ಜನರನ್ನು ಪೊಲೀಸವು ವಶಕ್ಕೆ ಪಡೆದಿದ್ದಾರೆ.

ಈ ಘಟನೆ ಪಿರಿಯಾಪಟ್ಟಣ ತಾಲೂಕಿನ ಬಿಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಬೆಂಗಳೂರು ಮೂಲದ ಎಂ. ಮಧುಗೌಡ ಹಾಗೂ ಆತನ ಸಹಚರರಿಂದ ಈ ಕೃತ್ಯ ನಡೆದಿದೆ. ಗ್ರಾಮದಲ್ಲಿನ ಗುರುಲಿಂಗಪ್ಪ ಮತ್ತು ಚನ್ನಬಸವಪ್ಪ ಎಂಬುವವರ ಕುಟುಂಬದ ನಡುವೆ ಸಣ್ಣ ವಿಚಾರಕ್ಕೆ ಗಲಾಟೆ ನಡೆದಿತ್ತು. ಈ ಕುರಿತು ಸಾಕಷ್ಟು ಪಂಚಾಯ್ತಿ ನಡೆಸಿ, ಸಮಸ್ಯೆ ಬಗೆಹರಿಸಿದರೂ ಸಮಸ್ಯೆ ಇತ್ಯರ್ಥವಾಗಿರಲಿಲ್ಲ. ಹೀಗಾಗಿ ಇದು ನ್ಯಾಯಾಲಯದ ಮೆಟ್ಟಿಲು ಏರಿತ್ತು.

ಚನ್ನಬಸವಪ್ಪನ ಮೊಮ್ಮಗಳ ಪತಿ ಸುನಿಲ್ ಕುಮಾರ್ ಎಂಬುವವರು ಮಧುಗೌಡ ಮತ್ತು ಸ್ನೇಹಿತರನ್ನು ಗ್ರಾಮಕ್ಕೆ ಕರೆತಂದು ಗುರುಲಿಂಗಪ್ಪ ಕುಟುಂಬದೊಂದಿಗೆ ಗಲಾಟೆ ಮಾಡಿಸಿದ್ದಾರೆ. ಇದನ್ನು ಪ್ರಶ್ನಿಸಿದ ಗ್ರಾಮಸ್ಥರ ಮೇಲೆ ಗುಂಡು ಹಾರಿಸಲಾಗಿದೆ ಎಂದು ತಿಳಿದು ಬಂದಿದೆ.

ಈ ಕುರಿತು 7 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಿಲ್ಲಹಳ್ಳಿ ಗ್ರಾಮದ ಬಿ.ಎಂ. ಚನ್ನಬಸಪ್ಪ, ಈತನ ಮೊಮ್ಮಗಳ ಪತಿ ಬಿ.ಎನ್ ಸುನಿಲ್ಕು್ಮಾರ್, ಬೆಂಗಳೂರಿನ ಎಂ. ಮಧು ಗೌಡ, ಯಾಸೀನ್, ಎಂ. ಪುನೀತ್ ಕುಮಾರ್, ಸಚಿನ್, ಬಿ.ಡಿ ಪುನೀತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತರಿಂದ 11 ಸಜೀವ ಗುಂಡು 2 ಖಾಲಿ ಗುಂಡು 2 ಫಾರ್ಚೂನರ್ ಕಾರು, ಮಹೇಂದ್ರ ಸ್ಕಾರ್ಪಿಯೋಗಳನ್ನು ವಶಕ್ಕೆ ಪಡೆಯಲಾಗಿದೆ. ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

Exit mobile version