ಮೈಸೂರು : ಗ್ರಾಮದೊಳಗೆ ಏಕಾಏಕಿ ನುಗ್ಗಿದ ದುಷ್ಕರ್ಮಿಗಳು ಗುಂಡು ಹಾರಿಸುವ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ 7 ಜನರನ್ನು ಪೊಲೀಸವು ವಶಕ್ಕೆ ಪಡೆದಿದ್ದಾರೆ.

ಈ ಘಟನೆ ಪಿರಿಯಾಪಟ್ಟಣ ತಾಲೂಕಿನ ಬಿಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಬೆಂಗಳೂರು ಮೂಲದ ಎಂ. ಮಧುಗೌಡ ಹಾಗೂ ಆತನ ಸಹಚರರಿಂದ ಈ ಕೃತ್ಯ ನಡೆದಿದೆ. ಗ್ರಾಮದಲ್ಲಿನ ಗುರುಲಿಂಗಪ್ಪ ಮತ್ತು ಚನ್ನಬಸವಪ್ಪ ಎಂಬುವವರ ಕುಟುಂಬದ ನಡುವೆ ಸಣ್ಣ ವಿಚಾರಕ್ಕೆ ಗಲಾಟೆ ನಡೆದಿತ್ತು. ಈ ಕುರಿತು ಸಾಕಷ್ಟು ಪಂಚಾಯ್ತಿ ನಡೆಸಿ, ಸಮಸ್ಯೆ ಬಗೆಹರಿಸಿದರೂ ಸಮಸ್ಯೆ ಇತ್ಯರ್ಥವಾಗಿರಲಿಲ್ಲ. ಹೀಗಾಗಿ ಇದು ನ್ಯಾಯಾಲಯದ ಮೆಟ್ಟಿಲು ಏರಿತ್ತು.

ಚನ್ನಬಸವಪ್ಪನ ಮೊಮ್ಮಗಳ ಪತಿ ಸುನಿಲ್ ಕುಮಾರ್ ಎಂಬುವವರು ಮಧುಗೌಡ ಮತ್ತು ಸ್ನೇಹಿತರನ್ನು ಗ್ರಾಮಕ್ಕೆ ಕರೆತಂದು ಗುರುಲಿಂಗಪ್ಪ ಕುಟುಂಬದೊಂದಿಗೆ ಗಲಾಟೆ ಮಾಡಿಸಿದ್ದಾರೆ. ಇದನ್ನು ಪ್ರಶ್ನಿಸಿದ ಗ್ರಾಮಸ್ಥರ ಮೇಲೆ ಗುಂಡು ಹಾರಿಸಲಾಗಿದೆ ಎಂದು ತಿಳಿದು ಬಂದಿದೆ.

ಈ ಕುರಿತು 7 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಿಲ್ಲಹಳ್ಳಿ ಗ್ರಾಮದ ಬಿ.ಎಂ. ಚನ್ನಬಸಪ್ಪ, ಈತನ ಮೊಮ್ಮಗಳ ಪತಿ ಬಿ.ಎನ್ ಸುನಿಲ್ಕು್ಮಾರ್, ಬೆಂಗಳೂರಿನ ಎಂ. ಮಧು ಗೌಡ, ಯಾಸೀನ್, ಎಂ. ಪುನೀತ್ ಕುಮಾರ್, ಸಚಿನ್, ಬಿ.ಡಿ ಪುನೀತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತರಿಂದ 11 ಸಜೀವ ಗುಂಡು 2 ಖಾಲಿ ಗುಂಡು 2 ಫಾರ್ಚೂನರ್ ಕಾರು, ಮಹೇಂದ್ರ ಸ್ಕಾರ್ಪಿಯೋಗಳನ್ನು ವಶಕ್ಕೆ ಪಡೆಯಲಾಗಿದೆ. ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಸಂಪತ್ ರಾಜ್ ನನ್ನು ಪಕ್ಷದಿಂದ ಉಚ್ಛಾಟಿಸಬೇಕು – ಅಖಂಡ ಶ್ರೀನಿವಾಸಮೂರ್ತಿ

ಬೆಂಗಳೂರು : ಮಾಜಿ ಮೇಯರ್ ಸಂಪತ್ ರಾಜ್ ರನ್ನು ಪಕ್ಷದಿಂದ ಉಚ್ಛಾಟಿಸಬೇಕು ಎಂದು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನವಿ ಮಾಡಿದ್ದಾರೆ.

ಕೆಲಸ ಮಾಡುವಾಗ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವು

ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ: ಕುಟುಂಬಸ್ಥರ ಆರೋಪ ಗದಗ: ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿ…

26 ಆರಕ್ಷಕರಿಗೆ ಕೊರೋನಾ ಶಂಕೆ..!

ಬೆಂಗಳೂರು: ಕೊರೋನಾ ಸಂಕಷ್ಟದಲ್ಲಿ ಪೊಲೀಸರ ಪಾತ್ರ ಮಹತ್ವದ್ದು ಆದರೆ ಇದೀಗ ಪೊಲೀಸರಿಗೂ ಕೊರೋನಾ ಕಾಟ ಶುರುವಾಗುವ…

ಮಕ್ಕಳಿಗೆ ಕೊರೊನಾ ಚಿಕಿತ್ಸೆ ಬಗ್ಗೆ ಸರ್ಕಾರದ ಬಳಿ ಪ್ರೊಟೊಕಾಲ್ ಇಲ್ವಂತೆ – ಶಾಸಕ ಎಚ್.ಕೆ.ಪಾಟೀಲ್ ಆರೋಪ

ಗದಗ: ಸರ್ಕಾರಕ್ಕೆ ಎರಡನೇ ಅಲೆಯ ಬಗ್ಗೆಯೇ ಇನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಅಂಥದ್ರಲ್ಲಿ ಮೂರನೇ ಅಲೆಯ ಬಗ್ಗೆ ಏನು ಸಿದ್ಧತೆ ಮಾಡಿಕೊಂಡಿಲ್ಲ. ಹಾವೇರಿ ಜಿಲ್ಲೆಯಲ್ಲಿ 721 ಮಕ್ಕಳಿಗೆ ಪಾಸಿಟಿವ್ ದೃಢಪಟ್ಟಿದೆ. ಆದರೆ ಈವರೆಗೆ ಸರ್ಕಾರದಿಂದ ಮಕ್ಕಳಿಗಾಗಿ ಚಿಕಿತ್ಸೆಯ ಪ್ರೊಟೊಕಾಲ್ ಬಂದಿಲ್ಲ ಎಂದು ಶಾಸಕ ಎಚ್.ಕೆ.ಪಾಟೀಲ್ ಬೇಸರ ವ್ಯಕ್ತಪಡಿಸಿದರು.