ಬೆಂಗಳೂರ : ದೀಪಾವಳಿಯ ಅಂಗವಾಗಿ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಸಾರಿಗೆ ಸಂಸ್ಥೆ 1 ಸಾವಿರ ಹೆಚ್ಚುವರಿ ಬಸ್ ಗಳನ್ನು ಓಡಿಸಲು ಮುಂದಾಗಿದೆ.
ಈ ಹೆಚ್ಚುವರಿ ಬಸ್ ಗಳು ಬೆಂಗಳೂರಿನಿಂದ ರಾಜ್ಯದ ವಿವಿಧ ಸ್ಥಳಗಳಿಗೆ ಸಂಚಾರ ಮಾಡಲಿವೆ. ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ಕುಕ್ಕೆ ಸುಬ್ರಮಣ್ಯ, ಧರ್ಮಸ್ಥಳ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಹುಬ್ಬಳ್ಳಿ, ಧಾರವಾಡ, ವಿಜಯಪುರ, ಬೆಳಗಾವಿ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ,ಕೊಪ್ಪಳ, ಯಾದಗರಿ, ಬೀದರ್ ಹಾಗೂ ತಿರುಪತಿಗೆ ಹೆಚ್ಚುವರಿ ಬಸ್ ಗಳು ತೆರಳಲಿವೆ.
ಶಾಂತಿನಗರ ಬಸ್ ನಿಲ್ದಾಣದಿಂದ ಹೊರರಾಜ್ಯಗಳಾದ ಕೇರಳ, ತಮಿಳುನಾಡು, ಆಂಧ್ರಪ್ರದೇಶಗಳ ವಿವಿಧ ನಗರಗಳಿಗೆ ವಿಶೇಷ ಬಸ್ ಗಳು ತೆರಳಲಿವೆ. ನ. 16ರಂದು ರಾಜ್ಯದ ವಿವಿಧ ಸ್ಥಳಗಳಿಂದ ಮತ್ತು ಅಂತರ್ ರಾಜ್ಯಗಳಿಂದ ಬೆಂಗಳೂರಿಗೆ ವಿಶೇಷ ಬಸ್ ಗಳು ಸಂಚರಿಸಲಿವೆ ಎಂದು ಸಂಸ್ಥೆ ತಿಳಿಸಿದೆ.
ಪ್ರಯಾಣಿಕರಿಗೆ ಮುಂಗಡ ಬುಕ್ಕಿಂಗ್ ಕಾಯ್ದಿರುವ ಸೌಲಭ್ಯ ಕೂಡ ಕಲ್ಪಿಸಲಾಗಿದ್ದು, ಇ-ಟಿಕೆಟ್ ಬುಕಿಂಗ್ ವೆಬ್ ಸೈಟ್ www.ksrtc.in ಮೂಲಕ ಪಡೆಯಬಹುದಾಗಿದೆ.