ಬೆಂಗಳೂರು : ರಾಜ್ಯದಲ್ಲಿ ರಾಜರಾಜೇಶ್ವರಿ ನಗರ ಹಾಗೂ ಶಿರಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಿದ್ದು, ಫಲಿತಾಂಶ ಇಂದು ಹೊರ ಬರುತ್ತಿದೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿವೆ.

ರಾಜರಾಜೇಶ್ವರಿ ನಗರದಲ್ಲಿ ಮೊದಲ ಸುತ್ತಿನ ಅಂತ್ಯಕ್ಕೆ ಮುನಿರತ್ನಗೆ 6,164 ಮತಗಳು ಬಿದ್ದರೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾಗೆ 2,915 ಮತಗಳು ಬಿದ್ದಿವೆ. ಮುನಿರತ್ನ 3,249 ಮತಗಳ ಮುನ್ನಡೆಯಲ್ಲಿದ್ದಾರೆ. ಜೆಡಿಎಸ್ ಕೃಷ್ಣಮೂರ್ತಿಗೆ 136 ಮತಗಳು ಬಿದ್ದಿದೆ.

ಇಲ್ಲಿ 2,09,828 ಮತಗಳು ಚಲಾವಣೆ ಆಗಿದ್ದವು. ಈ ಪೈಕಿ 412 ಅಂಚೆ ಮತಗಳು ಚಲಾವಣೆ ಆಗಿದ್ದವು. ಶಿರಾದಲ್ಲಿ 2,15,694 ಮತದಾರರು ಇದ್ದು, 1,77,645 ಮತಗಳು ಚಲಾವಣೆ ಆಗಿವೆ. ಈ ಪೈಕಿ 6,821 ಅಂಚೆ ಮತಗಳು ಚಲಾವಣೆ ಆಗಿದ್ದವು.

ತುಮಕೂರಿನಲ್ಲಿ ಮೊದಲ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ 3,224, ಕಾಂಗ್ರೆಸ್ಸಿನ ಟಿ.ಬಿ.ಜಯಚಂದ್ರ 2,429, ಜೆಡಿಎಸ್ ಅಮ್ಮಾಜಮ್ಮಾ1,135 , ಸಿಪಿಎಂ 69, ನೋಟಾಗೆ 37 ಮತಗಳು ಬಿದ್ದಿದೆ. ಶಿರಾದಲ್ಲಿ 1,77,645 ಮತಗಳು ಚಲಾವಣೆ ಆಗಿದ್ದವು. ಈ ಪೈಕಿ 6,821 ಅಂಚೆ ಮತಗಳು ಚಲಾವಣೆ ಆಗಿತ್ತು.

Leave a Reply

Your email address will not be published. Required fields are marked *

You May Also Like

ಸಂಕಷ್ಟದಲ್ಲೂ ಪರೋಪಕಾರಿ ಈ ಆಟೋ ಚಾಲಕ

ಲಾಕ್ ಡೌನ್ ಹಿನ್ನಲೆ ದುಡಿಮೆಯನ್ನೆ ನಂಬಿದ ಜನರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಇನ್ನು ತನಗೆಷ್ಟೆ ಸಂಕಷ್ಟ ಎದುರಾದರೂ ಆಟೋ ಚಾಲಕನೊಬ್ಬ ಜನಸೇವೆಗೆ ನಿಂತಿದ್ದಾನೆ.

ಗಡಿಬಿಡಿಯ ಲಾಕ್ ಡೌನ್ ಜಾರಿ: ಗಲಿಬಿಲಿಯಲ್ಲಿ ಉತ್ಪಾದನಾ ಫ್ಯಾಕ್ಟರಿ

ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳು ಹಲವು ಜಿಲ್ಲೆ ಮತ್ತು ನಗರಗಳಲ್ಲಿ ದಿಢೀರ್ ಲಾಕ್ ಡೌನ್ ಹೇರಿದ್ದರಿಂದ ಕೈಗಾರಿಕಾ ಉತ್ಪಾದನಾ ಕ್ಷೇತ್ರಕ್ಕೆ ದೊಡ್ಡ ಹೊಡೆತ ಬಿದ್ದಿದೆ.

ಗದಗ ಜಿಲ್ಲೆಯಲ್ಲಿಂದು ಸಿಕ್ಕ ಸಿಕ್ಕಲ್ಲಿ ಸೋಂಕಿನ ಸಂಚಾರ: ಯಾವ ಊರಲ್ಲಿ ಎಷ್ಟು?

ಗದಗ ಜಿಲ್ಲೆಯಲ್ಲಿಂದು ಸಿಕ್ಕ ಸಿಕ್ಕಲ್ಲಿ ಸೋಂಕಿನ ಸಂಚಾರ: ಯಾವ ಊರಲ್ಲಿ ಎಷ್ಟು?