ಬೆಂಗಳೂರು : ಉಪ ಚುನಾವಣೆಯೊಂದಿಗೆ ವಿಧಾನಪರಿಷತ್ ಚುನಾವಣೆಯಲ್ಲಿಯೂ ಬಿಜೆಪಿ ಜಯಭೇರಿ ಬಾರಿಸಿದೆ.

ಪಶ್ಚಿಮ ಪದವೀಧರ ಮತ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರು ಅವರು ಪ್ರಥಮ ಪ್ರಾಶಸ್ತ್ಯದ ಮತಗಳಲ್ಲಿಯೇ ಜಯ ಸಾಧಿಸಿದ್ದಾರೆ. ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಪ್ರಥಮ ಪ್ರಾಶಾಸ್ತ್ಯದ ಮತ ಎಣಿಕೆಯಲ್ಲಿ ಯಾರೂ ಗೆಲ್ಲದ ಕಾರಣ, ದ್ವಿತೀಯ ಪ್ರಾಶಸ್ತ್ಯದ ಮತಗಳ ಆಧಾರದ ಮೇಲೆ ಬಿಜೆಪಿಯ ಶಶಿಲ್ ನಮೋಶಿ ಗೆಲುವು ಸಾಧಿಸಿದ್ದಾರೆ. ಆಗ್ನೇಯ ಪದವಿಧರ ಕ್ಷೇತ್ರ ಮತ ಎಣಿಕೆ ನಡೆದಿದ್ದು, ಬಿಜೆಪಿ ಚಿದಾನಂದಗೌಡ ಗೆಲುವಿನ ಸನಿಹಕ್ಕೆ ಇದ್ದಾರೆ.

ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ ಮೊದಲ ಪ್ರಾಶಸ್ತ್ಯದ ಮತಗಳಲ್ಲಿ ನಾಲ್ಕನೇ ಬಾರಿಗೆ ಗೆಲುವು ಸಾಧಿಸಿದ್ದಾರೆ. ಪುಟ್ಟಣ್ಣ ಅವರು 7,335 ಮತ ಪಡೆದಿದ್ದರೆ, ಜೆಡಿಎಸ್‍ ನ ಎ.ಪಿ. ರಂಗನಾಥ್ ಅವರು 5,107 ಮತ ಗಳಿಸಿದ್ದಾರೆ. ಆದರೆ, ಕಾಂಗ್ರೆಸ್ ಅಭ್ಯರ್ಥಿ ಪ್ರವೀಣ್ ಪೀಟರ್ ಅವರು ಕೇವಲ 782 ಮತಗಳನ್ನು ಗಳಿಸುವಲ್ಲಿ ಮಾತ್ರ ಯಶಸ್ವಿಯಾಗಿ ಮುಖಭಂಗ ಅನುಭವಿಸಿದ್ದಾರೆ.

ಪಶ್ಚಿಮ ಪದವೀಧರ ಮತ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಅವರು 19,565 ಮತಗಳನ್ನು ಗಳಿಸಿ ಜಯಶಾಲಿಯಾಗಿದ್ದಾರೆ. ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಆರ್.ಎಂ. ಕುಬೇರಪ್ಪ ಅವರು 9,449 ಮತಗಳನ್ನು ಗಳಿಸಿದ್ದಾರೆ. ಪಕ್ಷೇತರರಾಗಿ ಸ್ಪರ್ಧಿಸಿ, ಜೆಡಿಎಸ್ ನ ಬೆಂಬಲ ಪಡೆದಿದ್ದ ಬಸವರಾಜ ಗುರಿಕಾರ ಅವರು 5284 ಮತಗಳನ್ನು ಗಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಅವರು ಸತತ ಎರಡನೇ ಬಾರಿಗೆ ಜಯ ಗಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಜೂ. 8ರಿಂದ ತೆರೆಯಲಿವೆ ದೇವಸ್ಥಾನಗಳು – ಈ ವಾರವೇ ಮಾರ್ಗಸೂಚಿ ಪ್ರಕಟ!

ಜೂ. 8ರಿಂದ ದೇವಾಲಯಗಳು ಓಪನ್ ಆಗಲಿವೆ. ಹಲವು ಮಾರ್ಗಸೂಚಿಗಳನ್ವಯ ದೇವಸ್ಥಾನಗಳು, ಚರ್ಚ್, ಮಸೀದಿಗಳು ಸೇರಿದಂತೆ ಧಾರ್ಮಿಕ ಸ್ಥಳಗಳನ್ನ ತೆರೆಯಲು ಅವಕಾಶ ನೀಡಲಾಗಿದೆ.

ರಾಜ್ಯದಲ್ಲಿ ಕೊರೋನಾ ಸೋಂಕು ಹರಡಿದ್ದು ಎಷ್ಟು ಜನರಿಂದ ಗೊತ್ತಾ?

ಈಗಾಗಲೇ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿಲಿದ್ದು ಸೋಂಕಿತರ ಸಂಖ್ಯೆ 700 ಗಡಿ ದಾಟಿದೆ. ಆದರೆ ಇಷ್ಟೊಂದು ಸೋಂಕಿತರ ಸಂಖ್ಯೆ ಹೆಚ್ಚಾಗಲು ಎಷ್ಟು ಜನ ಕಾರಣ ಻ನ್ನೋದು ಮಾತ್ರ ಕುತೂಹಲ.

ಹಣ ಪಡೆಯುವ ವೇಳೆ ಜೆಸ್ಕಾಂ ಅಧಿಕಾರಿ ಎಸಿಬಿ ಬಲೆಗೆ

ಜೆಸ್ಕಾಂ ಇಲಾಖೆಯ ಎಇಇ ಅಧಿಕಾರಿ ಭಾಸ್ಕರ್ ರೈತನಿಂದ ಹಣ ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾನೆ.

ಸಿಎಂ ಸಭೆಯ ಸಂಪೂರ್ಣ ಮಾಹಿತಿ: ಗುತ್ತಿಗೆ ಆಧಾರದಲ್ಲಿ ಸಿಬ್ಬಂದಿ ನೇಮಕಕ್ಕೆ ಸೂಚನೆ

ಸಿಎಂ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದರು. ಇನ್ನು ಈ ಸಭೆಯಲ್ಲಿ ನಡೆದ ಮಹತ್ವದ ಚರ್ಚಿತ ವಿಷಯಗಳ ಮುಖ್ಯಾಂಶೆಗಳು ಇಲ್ಲಿವೆ ನೋಡಿ.