ಬೆಂಗಳೂರು : ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಗೆಲುವಿನ ಸನಿಹಕ್ಕೆ ಬಂದು ನಿಂತಿದ್ದಾರೆ.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕುಸುಮಾ ಹಾಗೂ ಜೆಡಿಎಸ್ ಪಕ್ಷದ ಕೃಷ್ಣಮೂರ್ತಿ ವಿರುದ್ಧ ಹೆಚ್ಚಿನ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದು, ಹ್ಯಾಟ್ರಿಕ್ ಗೆಲುವು ಸಾಧಿಸುವುದು ಬಹುತೇಕ ಖಚಿತವಾದಂತಾಗಿದೆ.

ಈ ಕ್ಷೇತ್ರದ 20ನೇ ಸುತ್ತಿನ ಮತಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು 1,03,291 ಮತಗಳನ್ನು ಪಡೆದು ಮುನ್ನಡೆ ಕಾಯ್ದು ಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು 58,743 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ಅವರು 7,772 ಮತಗಳನ್ನು ಪಡೆದಿದ್ದಾರೆ. ಮುನಿರತ್ನ ಅವರು 44,548 ಮತಗಳ ಅಂತರಿಂದ ಮುನ್ನಡೆ ಸಾಧಿಸಿದ್ದಾರೆ.

ಮುನಿರತ್ನ ಅವರ ಅಂತರ 44 ಸಾವಿರ ದಾಟಿದ್ದು, ಇನ್ನು 5 ಸುತ್ತುಗಳ ಮತ ಎಣಿಕೆ ಮಾತ್ರ ಬಾಕಿ ಇದೆ. ಆದರೆ, ಮುನಿರತ್ನ ಅವರು ಸಾಧಿಸಿರುವ ಮುನ್ನಡೆಯನ್ನು ಇನ್ನು ಉಳಿದಿರುವ 5 ಸುತ್ತುಗಳಲ್ಲಿ ದಾಟಲು ಕಾಂಗ್ರೆಸ್ ಅಭ್ಯರ್ಥಿಗೆ ಆಗುವುದಿಲ್ಲ ಎಂದು ಹೇಳಲಾಗುತ್ತಿದೆ. ಹೀಗಾಗಿ ಎಲ್ಲಾ ಸುತ್ತುಗಳ ಮತ ಎಣಿಕೆ ಪೂರ್ಣಗೊಂಡು ಬಹುಮತದ ಅಂತರವಷ್ಟೇ ನಿರ್ಧಾರವಾಗಬೇಕಿದೆ.

ಬಿಜೆಪಿ ಮತ್ತು ಕಾಂಗ್ರೆಸ್‌ನ ಅಬ್ಬರದ ಪ್ರಚಾರ, ಆರೋಪ– ಪ್ರತ್ಯಾರೋಪ, ಜಾತಿ– ಕಣ್ಣೀರ ರಾಜಕಾರಣದ ಕಾರಣದಿಂದ ರಾಜರಾಜೇಶ್ವರಿ ನಗರದ ಉಪ ಚುನಾವಣೆ ಕುತೂಹಲ ಕೆರಳಿಸಿತ್ತು.

Leave a Reply

Your email address will not be published. Required fields are marked *

You May Also Like

ರೈಲ್ವೇ ರೇಕ್ ಗಳಲ್ಲಿನ ರಸಗೊಬ್ಬರ ಚೀಲಗಳನ್ನು ಅನ್ಲೋಡ್ ಸಮಯ ವಿಸ್ತರಿಸಿದ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಕೃಷಿ ಚಟುವಟಿಕೆಗಳು ಲಾಕ್ಡೌನ್ ನಿಂದ ವಿನಾಯಿತಿ ನೀಡಿದ್ದರಿಂದ ಚುರುಕುಗೊಂಡಿವೆ. ರೈತರಿಗೆ ಅಗತ್ಯ ರಸಗೊಬ್ಬರ ಪೂರೈಕೆಗೂ ಸರ್ಕಾರ ಅವಕಾಶ ಕಲ್ಪಿಸಿದ್ದು, ರೈಲ್ವೇ ರೇಕ್ ಗಳಲ್ಲಿ ತಂದಂತಹ ರಸಗೊಬ್ಬರ ಚೀಲಗಳನ್ನು ಅನ್ಲೋಡ್ ಅಥವಾ ಇಳಿಸಲು ಸರ್ಕಾರ ವಿಧಿಸಿರುವ ಸಮಯವನ್ನೀಗ ವಿಸ್ತರಿಸಿದೆ.

ಹೊಗಳಿದ್ದು ಸಾಕು; ಸಾಮರ್ಥ್ಯ ತೋರುವ ಅವಕಾಶ ನೀಡಿ

ಅರಣ್ಯ ಪ್ರದೇಶ ಹಾಗೂ ಗುಡ್ಡಗಾಡಿನ ಹಳ್ಳಿಗಳ ಶಾಲೆಗೆ ಹೋಗುವ ಶಿಕ್ಷಕಿಯರು ಜೀವ ಕೈಯಲ್ಲಿ ಹಿಡಿದುಕೊಂಡು ಹೋಗುವ ಪರಿಸ್ಥಿತಿ ಇದೆ. ಬಹಳಷ್ಟು ಹಳ್ಳಿಗಳಲ್ಲಿಯೂ ರಕ್ಷಣೆ ಅಗತ್ಯವಾಗಿದೆ. ಆದ್ದರಿಂದ ಶಿಕ್ಷಕಿಯರಿಗಾಗಿ ಗ್ರಾಮೀಣ ಪ್ರದೇಶದಲ್ಲಿ ವಸತಿ ಸೌಕರ್ಯ ಕಲ್ಪಿಸಬೇಕು’ ಎಂದು ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಅಧ್ಯಕ್ಷೆ ಡಾ.ಲತಾ ಮುಳ್ಳೂರ ಒತ್ತಾಯಿಸಿದರು.

ನಮ್ಮದು ಬೆಂಕಿ ಆರಿಸುವ ಸಂಸ್ಕೃತಿ

ಸಮಾಜವನ್ನು ಒಡೆಯುವ ಸಂಸ್ಕೃತಿ ತಮ್ಮದಲ್ಲ. ನಾವು ಬೆಂಕಿ ಹಚ್ಚುವವರಲ್ಲ. ಹಚ್ಚಿದ ಬೆಂಕಿಯನ್ನು ಆರಿಸುವವರು ಎಂದು ಜೆಡಿಎಸ್ ನಾಯಕ, ಮಾಜಿ ಸಿಎಂ ಕುಮಾರಸ್ವಾಮಿ ಕೇಸರಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬೃಹತ್ ಮೇರವಣಿಗೆ ಮೂಲಕ ಸಿ.ಸಿ.ಪಾಟೀಲ ನಾಮಪತ್ರ ಸಲ್ಲಿಕೆ ನಾಳೆ

ಉತ್ತರಪ್ರಭ ನರಗುಂದ:ನರಗುಂದ ವಿಧಾನಸಭಾ ಮತಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಸಿ.ಸಿ.ಪಾಟೀಲ ನಾಳೆ ದಿ. 19-4-2023ರ…